ಬ್ರೇಕಿಂಗ್ ನ್ಯೂಸ್
28-09-20 01:46 pm Headline Karnataka News Network ದೇಶ - ವಿದೇಶ
ಪಾಟ್ನಾ, ಸೆಪ್ಟಂಬರ್ 28: ಮಕ್ಕಳು ಕೆಲವೊಮ್ಮೆ ತಾಯಿಯನ್ನು ಕೆಟ್ಟದಾಗಿ ನಡೆಸಿಕೊಳ್ಳುವುದಿದೆ. ಆದರೆ, ತಾಯಿ ಯಾವತ್ತೂ ಮಕ್ಕಳ ಬಗ್ಗೆ ಹಾಗೆ ಅನಿಸ್ಕೊಳಲ್ಲ. ಹೆತ್ತ ಮಗು ಹೆಗ್ಗಣ ಆದ್ರೂ ಮುದ್ದು ಅಂತಲೇ ಭಾವಿಸುತ್ತಾರೆ. ಆದರೆ ಇಲ್ಲೊಬ್ಬಳು ತಾಯಿ ಇದಕ್ಕೆ ಅಪವಾದ ಎನ್ನುವ ರೀತಿ ನಡೆದುಕೊಂಡಿದ್ದಾಳೆ. ತನ್ನ ನಾಲ್ಕನೇ ಮದುವೆಗೆ ಅಡ್ಡಿಯಾಗುತ್ತಾನೆಂದು ನಾಲ್ಕು ವರ್ಷದ ಮಗುವನ್ನೇ ಕೊಂದು ಹಾಕಿದ್ದಾಳೆ.
ಈ ಘಟನೆ ನಡೆದಿರೋದು ಪಾಟ್ನಾ ಜಿಲ್ಲೆಯ ಹಸನ್ ಪುರ ಖಾಂಡಾ ಎನ್ನುವ ಪ್ರದೇಶದಲ್ಲಿ. 23 ವರ್ಷದ ಧರ್ಮಶೀಲಾ ದೇವಿ ಎನ್ನುವ ಯುವತಿ ಈಗಾಗ್ಲೇ ಮೂರು ಮದುವೆಯಾಗಿದ್ದಳು. ಮೊದಲ ಪತಿ ಅರುಣ್ ಚೌಧರಿಯ ಜೊತೆಗಿದ್ದಾಗ ಮಗು ಹುಟ್ಟಿತ್ತು. ಸಜನ್ ಕುಮಾರ್ ಎಂದು ಹೆಸರಿಟ್ಟಿದ್ದರು. ಮೊದಲ ಮದುವೆಯಾದ ಒಂದೇ ವರ್ಷದಲ್ಲಿ ಯುವತಿ, ಪತಿಯನ್ನು ಬಿಟ್ಟು ಮಗುವಿನ ಜೊತೆ ಬೇರೊಬ್ಬನ ಜೊತೆ ತೆರಳಿದ್ದಳು. ಕೆಲವೇ ತಿಂಗಳಲ್ಲಿ ಅನಾರೋಗ್ಯಕ್ಕೆ ಒಳಗಾದ 2ನೇ ಪತಿ ಆನಂತರ ಮೃತಪಟ್ಟಿದ್ದ. ಆ ಬಳಿಕ ಮಹೇಶ್ ಚೌಧರಿ ಎಂಬಾತನನ್ನು ಮೂರನೇ ಬಾರಿಗೆ ಕಟ್ಟಿಕೊಂಡಿದ್ದಳು. ಆದರೆ, ಯುವತಿ ಧರ್ಮಶೀಲಾ ದೇವಿಯ ದುರಾದೃಷ್ಟವೋ ಏನೋ, ಮಹೇಶ್ ರಸ್ತೆ ಅಪಘಾತಕ್ಕೀಡಾಗಿ ಮೃತಪಟ್ಟಿದ್ದ.
ಇದರಿಂದ ಮತ್ತೆ ಏಕಾಂಗಿಯಾಗಿದ್ದ ಯುವತಿ ನಾಲ್ಕನೇ ಮದುವೆಗೆ ರೆಡಿಯಾಗಿದ್ದಳು. ಆದರೆ, ಆಕೆಗೆ ನಾಲ್ಕು ವರ್ಷದ ಮಗು ಹೊರೆಯಾಗಿತ್ತು. ಸರಿಯಾಗಿ ಮಾತನಾಡಲು ಬಾರದ ಮತ್ತು ಕಿವಿ ಕೇಳಿಸದ ಮಗುವನ್ನು ಕೊಲ್ಲಲು ನಿರ್ಧರಿಸಿದ್ದಾಳೆ. ನಾಲ್ಕನೇ ಮದುವೆಗೆ ಮಗು ಅಡ್ಡಿಯಾಗುತ್ತದೆಂದು ತಾಯಿಯೇ ಸ್ವತಃ ಮಗುವನ್ನು ನೀರಿನಲ್ಲಿ ಮುಳುಗಿಸಿ ಕೊಂದಿದ್ದಾಳೆ. ಮಗು ನೀರಿನಲ್ಲಿ ಶವ ಆಗಿದ್ದನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ವಿಷಯ ಮುಟ್ಟಿಸಿದ್ದರು. ಪೊಲೀಸರು ಮಹಿಳೆಯನ್ನು ವಿಚಾರಿಸಿದಾಗ, ತಪ್ಪು ಒಪ್ಪಿಕೊಂಡಿದ್ದಾಳೆ. ಆಕೆಯ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm