ಬ್ರೇಕಿಂಗ್ ನ್ಯೂಸ್
03-06-22 09:40 pm HK News Desk ದೇಶ - ವಿದೇಶ
ಕಾನ್ಪುರ, ಜೂನ್ 3: ಉತ್ತರ ಪ್ರದೇಶದ ಕಾನ್ಪುರದಲ್ಲಿ ಮುಸ್ಲಿಂ ಸಂಘಟನೆಗಳ ಪ್ರತಿಭಟನೆ ಹಿಂಸೆಗೆ ತಿರುಗಿದೆ. ಇತ್ತೀಚೆಗೆ ಟಿವಿ ಚರ್ಚೆ ಒಂದರಲ್ಲಿ ಬಿಜೆಪಿ ನಾಯಕಿ ನೂಪುರ್ ಶರ್ಮಾ, ಮಹಮ್ಮದ್ ಪೈಗಂಬರ್ ಬಗ್ಗೆ ಆಡಿರುವ ಮಾತುಗಳನ್ನು ಖಂಡಿಸಿ ಮುಸ್ಲಿಂ ಸಂಘಟನೆಗಳು ಕಾನ್ಪುರದಲ್ಲಿ ಪ್ರತಿಭಟನೆಗೆ ಕರೆ ನೀಡಿದ್ದವು. ಅದರಂತೆ ಇಂದು ಹರತಾಳ ನಡೆದಿದ್ದು ನಗರದ ಪರೇಡ್ ಚೌಕ್ ನಲ್ಲಿ ಎಲ್ಲ ಅಂಗಡಿಗಳನ್ನು ಮುಚ್ಚಿಸಲು ಒಂದು ಗುಂಪು ಮುಂದಾಗಿತ್ತು.
ಈ ವೇಳೆ, ಮಾತಿಗೆ ಮಾತು ಬೆಳೆದು ಎರಡು ಗುಂಪುಗಳು ಸೇರಿ ಪರಸ್ಪರ ಕಲ್ಲು ತೂರಾಟ ನಡೆಸಿವೆ. ಶುಕ್ರವಾರ ಮಧ್ಯಾಹ್ನ ಮಸೀದಿಗೆ ಬಂದಿದ್ದ ಮುಸ್ಲಿಮರ ಒಂದು ಗುಂಪು ಅಲ್ಲಿಂದಲೇ ಬೀದಿಗೆ ಇಳಿದಿತ್ತು. ಪರೇಡ್ ಚೌಕ್ ಮಾರುಕಟ್ಟೆ ಬಳಿ ಜನರು ಸೇರುತ್ತಲೇ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಸ್ಥಳದಲ್ಲಿ ಹೆಚ್ಚುವರಿ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ. ಇದೇ ವೇಳೆ, ನೂಪುರ್ ಶರ್ಮಾ ವಿರುದ್ಧ ಮಹಾರಾಷ್ಟ್ರದ ಪುಣೆ ಮತ್ತು ದಕ್ಷಿಣ ಮುಂಬೈನಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ.
ಇತ್ತೀಚೆಗೆ ಗ್ಯಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾದ ವಿಚಾರದ ಬಗೆ ಟಿವಿ ಚರ್ಚೆಯಲ್ಲಿ ಪಾಲ್ಗೊಂಡಿದ್ದ ನೂಪುರ್ ಶರ್ಮಾ, ಇಸ್ಲಾಂ ಬಗ್ಗೆ ಪುಸ್ತಕದಲ್ಲಿ ಉಲ್ಲೇಖವಾಗಿರುವ ಅಂಶಗಳನ್ನು ಆಧರಿಸಿ ಪ್ರವಾದಿ ಮಹಮ್ಮದ್ ಪೈಗಂಬರ್ ಬಗ್ಗೆ ಟೀಕಿಸಿದ್ದರು. ಮಸೀದಿಯಲ್ಲಿ ಸಿಕ್ಕಿದ್ದು ಶಿವಲಿಂಗ ಅಲ್ಲ ಅನ್ನುವ ವಾದಕ್ಕೆ ಪ್ರತಿಯಾಗಿ ಹೇಳಿಕೆ ಕೊಟ್ಟಿದ್ದ ನೂಪುರ್ ಶರ್ಮಾ ಬಗ್ಗೆ ಭಾರೀ ಆಕ್ರೋಶ ಕೇಳಿಬಂದಿತ್ತು. ಜಾಲತಾಣದಲ್ಲಿ ಶರ್ಮಾ ಬಗ್ಗೆ ಅವಹೇಳನ ಮಾಡಿದ್ದಲ್ಲದೆ, ಮನೆಗೆ ನುಗ್ಗಿ ರೇಪ್ ಮಾಡುತ್ತೇವೆ. ಮನೆಯವರನ್ನು ಕೊಲ್ಲುತ್ತೇವೆ ಎಂದು ಆಕೆಗೆ ಬೆದರಿಕೆ ಹಾಕಲಾಗಿದೆ. ಈ ರೀತಿ ಬೆದರಿಕೆ ಒಡ್ಡಿದವರ ಸ್ಕ್ರೀನ್ ಶಾಟ್ ತೆಗೆದು ನೂಪುರ್ ಶರ್ಮಾ ದೆಹಲಿ ಪೊಲೀಸರಿಗೆ ಟ್ವೀಟ್ ಮಾಡಿದ್ದಾರೆ.
Hundreds clashed in Kanpur after a Muslim organization called to shut down shops at the Parade Market - one of the biggest wholesale markets in the city - over the alleged comments made by BJP leader Nupur Sharma about Prophet Mohammed in a televised debate.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm