ಬ್ರೇಕಿಂಗ್ ನ್ಯೂಸ್
05-06-22 01:29 pm HK News Desk ದೇಶ - ವಿದೇಶ
ಢಾಕಾ, ಜೂ 05: ಬಾಂಗ್ಲಾದೇಶದ ಕಂಟೈನರ್ ಡಿಪೋಗೆ ಆಕಸ್ಮಿಕವಾಗಿ ಬೆಂಕಿ ತಗುಲಿ 16 ಜನರು ಸಜೀವ ದಹನವಾಗಿದ್ದು, 450ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದೆ.
ಚಿತ್ತಗಾಂಗ್ನ ಸೀತಾಕುಂಡ ಉಪಜಿಲಾದಲ್ಲಿರುವ ಕಡಮ್ರಸುಲ್ ಪ್ರದೇಶದ ಬಿಎಂ ಕಂಟೈನರ್ ಡಿಪೋದಲ್ಲಿ ಶನಿವಾರ ರಾತ್ರಿ ಭೀಕರ ಬೆಂಕಿ ಕಾಣಿಸಿಕೊಂಡಿದ್ದು, 16 ಜನರು ಸಾವನ್ನಪ್ಪಿದ್ದಾರೆ ಮತ್ತು 450 ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಚಿತ್ತಗಾಂಗ್ ವೈದ್ಯಕೀಯ ಕಾಲೇಜು ಆಸ್ಪತ್ರೆ(ಸಿಎಂಸಿಎಚ್)ಗೆ ರವಾನಿಸಲಾಗಿದೆ.
ಪೊಲೀಸ್ ಔಟ್ಪೋಸ್ಟ್ ಸಬ್-ಇನ್ಸ್ಪೆಕ್ಟರ್(ಎಸ್ಐ) ನೂರುಲ್ ಆಲಂ ಅವರು ಮಾತನಾಡಿದ್ದು, ಈ ಘಟನೆಯ ಪ್ರಾಥಮಿಕ ತನಿಖೆ ವೇಳೆ, ಕಂಟೈನರ್ ಡಿಪೋಗೆ ರಾಸಾಯನಿಕಗಳಿಂದ ಬೆಂಕಿ ಕಾಣಿಸಿಕೊಂಡಿರುವ ಶಂಕೆ ಇದೆ. ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಮುನ್ನವೇ ಭಾರೀ ಸ್ಫೋಟ ಸಂಭವಿಸಿದೆ. ಸ್ಫೋಟದ ನಂತರ ಬೆಂಕಿ ಮತ್ತಷ್ಟು ವ್ಯಾಪಿಸಿದೆ. ರಾತ್ರಿ 9 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ನಂತರ ರಾತ್ರಿ 11:45ಕ್ಕೆ ಭಾರೀ ಸ್ಫೋಟ ಸಂಭವಿಸಿದೆ ಎಂದು ವಿವರಿಸಿದರು.
ಈ ಬೆನ್ನಲ್ಲೇ ಕಂಟೈನರ್ ಒಂದರಲ್ಲಿ ರಾಸಾಯನಿಕ ಅಂಶವಿದ್ದ ಕಾರಣ ಬೆಂಕಿ ಒಂದು ಕಂಟೇನರ್ ನಿಂದ ಮತ್ತೊಂದು ಕಂಟೇನರ್ ಗೆ ವ್ಯಾಪಿಸಿದೆ. ಈ ಸ್ಫೋಟವು ನೆರೆಹೊರೆಯನ್ನು ಬೆಚ್ಚಿಬೀಳಿಸಿದೆ. ಹತ್ತಿರದ ಮನೆಗಳ ಕಿಟಕಿ ಗಾಜುಗಳು ಒಡೆದುಹೋಗಿವೆ ಎಂದರು.
ಚಿತ್ತಗಾಂಗ್ ಅಗ್ನಿಶಾಮಕ ಸೇವೆ ಮತ್ತು ಸಿವಿಲ್ ಡಿಫೆನ್ಸ್ ಸಹಾಯಕ ನಿರ್ದೇಶಕ ಎಂಡಿ ಫಾರುಕ್ ಹೊಸೈನ್ ಸಿಕ್ದರ್ ಸೇರಿ ಸುಮಾರು 19 ಅಗ್ನಿಶಾಮಕ ಘಟಕಗಳು ಬೆಂಕಿ ನಂದಿಸಲು ಕೆಲಸ ಮಾಡುತ್ತಿವೆ. ಆರು ಆಂಬ್ಯುಲೆನ್ಸ್ಗಳು ಸಹ ಸ್ಥಳದಲ್ಲಿದೆ.
At least 35 people were killed and over 450 injured in a massive fire caused by an explosion that swept through a private chemical container depot in southeastern Bangladesh, officials said on Sunday. On Saturday night, the fire broke out at BM Container Depot in the Kadamrasul area in Sitakunda Upazila in Chittagong. "So far 35 dead bodies reached the morgue here," a police officer stationed at the state-run Chattagram Medical College Hospital (CMCH) told newsmen.
11-10-25 10:05 am
Bangalore Correspondent
ಮುಂದಿನ ದಿನಗಳಲ್ಲಿ ಹಾಸನಾಂಬೆ ಸಾನಿಧ್ಯವೇ ಇರುವುದಿಲ್...
10-10-25 07:06 pm
'ನವೆಂಬರ್ ಕ್ರಾಂತಿ' ಗುಮ್ಮದ ನಡುವೆಯೇ ಸಂಪುಟ ಸರ್ಜರಿ...
10-10-25 12:06 pm
ಟೀಕೆ ಬೆನ್ನಲ್ಲೇ ಬಿಗ್ ಬಾಸ್ ಮನೆ ಓಪನ್ ಮಾಡಿಸಿದ ಡಿಕ...
09-10-25 12:57 pm
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
11-10-25 12:52 pm
HK News Desk
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
11-10-25 11:11 am
Mangalore Correspondent
ಮುಡಾ ಲೇಔಟ್ ; ಕುಂಜತ್ತ್ ಬೈಲಿನಲ್ಲಿ ಅವೈಜ್ಞಾನಿಕ ರೀ...
10-10-25 06:52 pm
ನಿಷೇಧಿತ ಪಿಎಫ್ಐ ಸಂಘಟನೆ ಪರವಾಗಿ ಪೋಸ್ಟ್ ; ಮುಸ್ಲಿಂ...
10-10-25 04:18 pm
Bharath Kumdel Arrest, Abdul Rahiman Murder:...
10-10-25 02:02 pm
ವಿಶ್ವಸಂಸ್ಥೆ ಅಧಿವೇಶನದಲ್ಲಿ ಭಾಗಿಯಾದ ದಕ್ಷಿಣ ಕನ್ನಡ...
09-10-25 08:22 pm
10-10-25 09:48 pm
Udupi Correspondent
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm