ಬ್ರೇಕಿಂಗ್ ನ್ಯೂಸ್
07-06-22 09:04 pm HK News Desk ದೇಶ - ವಿದೇಶ
ನವದೆಹಲಿ, ಜೂ 07: ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರ ಪತ್ನಿ ಪೂನಂ ಜೈನ್ ಹಾಗೂ ಸಹಚರರ ಮನೆಗಳಲ್ಲಿ ಜಾರಿ ನಿರ್ದೇಶನಾಲಯ(ಇಡಿ) ಮಂಗಳವಾರ ಶೋಧ ಕಾರ್ಯ ನಡೆಸಿ, 2.85 ಕೋಟಿ ರೂ. ನಗದು ಹಾಗೂ 1.8 ಕೆಜಿಯಷ್ಟು ಚಿನ್ನವನ್ನು ವಶಪಡಿಸಿಕೊಂಡಿದೆ.
ಸತ್ಯೇಂದ್ರ ಜೈನ್ ತಮ್ಮ ಪತ್ನಿ, ಪುತ್ರಿಯರು, ಸ್ನೇಹಿತರು ಹಾಗೂ ಸಹಚರರ ಸಹಾಯದಿಂದ 16 ಕೋಟಿ ರೂ. ಅಕ್ರಮ ಹಣ ವರ್ಗಾವಣೆ ಮಾಡಿರುವ ಆರೋಪ ಹೊತ್ತಿದ್ದಾರೆ. ಮೇ 20 ರಂದು ಸತ್ಯೇಂದ್ರ ಜೈನ್ ಅವರನ್ನು ಇಡಿ ಬಂಧಿಸಿತ್ತು. ಪ್ರಸ್ತುತ ಸತ್ಯೇಂದ್ರ ಜೈನ್ ಇಡಿ ವಶದಲ್ಲಿದ್ದಾರೆ.


ಶೋಧ ಕಾರ್ಯದ ವೇಳೆ ಸಿಕ್ಕಿರುವ 500 ಹಾಗೂ 2,000 ರೂ. ಮುಖಬೆಲೆಯ ಕಂತೆ ಕಂತೆ ನೋಟುಗಳನ್ನು ಜೋಡಿಸಿ `ಇಡಿ’ ಎಂದು ವಿನ್ಯಾಸಗೊಳಿಸಲಾಗಿದೆ. ನೋಟಿನ ಕಂತೆಗಳಿಂದಲೇ ಇಡಿ ಎಂದು ವಿನ್ಯಾಸಗೊಳಿಸಿ ತೆಗೆದಿರುವ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.
![]()
2015 ಫೆಬ್ರವರಿಯಿಂದ 2017ರ ಮೇ ತಿಂಗಳಿನ ವರೆಗೆ ದೆಹಲಿ ಸರ್ಕಾರದ ಸಚಿವರಾಗಿದ್ದ ಸತ್ಯೇಂದ್ರ ಜೈನ್ ಅಕ್ರಮ ಆಸ್ತಿ ಗಳಿಸಿದ್ದಾರೆ ಎಂದು ಸಿಬಿಐ ಆರೋಪಿಸಿ, 2018ರಲ್ಲಿ ಪ್ರಕರಣ ದಾಖಲಿಸಿತ್ತು. ಇದೀಗ ಇಡಿ, ಸಿಬಿಐ ದಾಖಲಿಸಿರುವ ಎಫ್ಐಆರ್ ಆಧಾರದ ಮೇಲೆ ಐಪಿಸಿ ಸೆಕ್ಷನ್ 109 ಹಾಗೂ ಸೆಕ್ಷನ್ 13(2)ರ ಅಡಿ ತನಿಖೆ ನಡೆಸುತ್ತಿದೆ.
ಪ್ರಧಾನಿ ಮೋದಿ ಆಪ್ ಸರ್ಕಾರಗಳ ಹಿಂದೆ ಬಿದ್ದಿದ್ದಾರೆ:

ಪ್ರಧಾನಿ ನರೇಂದ್ರ ಮೋದಿ ಆಮ್ ಆದ್ಮಿ ಪಕ್ಷ ಮತ್ತು ರಾಷ್ಟ್ರ ರಾಜಧಾನಿ ನವದೆಹಲಿ, ಪಂಜಾಬಿನಲ್ಲಿನ ಆಪ್ ಸರ್ಕಾರಗಳ ಹಿಂದೆ ಬಿದ್ದಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಂಗಳವಾರ ಆರೋಪಿಸಿದ್ದಾರೆ.
![]()
ಈ ಕುರಿತು ಟ್ವೀಟ್ ಮಾಡಿರುವ ಕೇಜ್ರಿವಾಲ್, ಸತ್ಯೇಂದ್ರ ಜೈನ್ ವಿರುದ್ಧ ಆರೋಪ ಸುಳ್ಳು ಎಂದಿದ್ದಾರೆ. ಈ ಸಂದರ್ಭದಲ್ಲಿ ಎಲ್ಲ ಬಲದೊಂದಿಗೆ ಪ್ರಧಾನಿ ಮೋದಿ ಆಪ್ ಪಕ್ಷ ಮತ್ತು ದೆಹಲಿ ಮತ್ತು ಪಂಜಾಬಿನ ಸರ್ಕಾರಗಳ ಹಿಂದೆ ಬಿದ್ದಿದ್ದಾರೆ. ಸುಳ್ಳಿನ ನಂತರ ಸುಳ್ಳು, ಸುಳ್ಳಿನ ನಂತರ ಸುಳ್ಳು ಎಂದು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ. ನೀವು( ಪ್ರಧಾನಿ) ಎಲ್ಲಾ ತನಿಖಾ ತಂಡಗಳ ಬಲವನ್ನು ಹೊಂದಿದ್ದೀರಿ ಆದರೆ, ದೇವರು ನಮ್ಮೊಂದಿಗೆ ಇದ್ದಾನೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.
The Enforcement Directorate (ED) on Monday conducted searches at Delhi Health Minister Satyendar Jain's residence and other locations in the national capital in connection with a money laundering case filed against the minister.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm