ಬ್ರೇಕಿಂಗ್ ನ್ಯೂಸ್
08-06-22 03:03 pm HK News Desk ದೇಶ - ವಿದೇಶ
ನವದೆಹಲಿ, ಜೂ 8: ಬುಧವಾರ ದೆಹಲಿಯ ಜಾಮಿಯಾ ನಗರದ ಎಲೆಕ್ಟ್ರಿಕ್ ವಾಹನಗಳ ಪಾರ್ಕಿಂಗ್ ಪ್ರದೇಶದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು 10 ಕಾರುಗಳು ಸೇರಿ 90ಕ್ಕೂ ಹೆಚ್ಚು ವಾಹಗಳು ಸುಟ್ಟು ಭಸ್ಮವಾಗಿವೆ.
11 ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿದ್ದು, ಬೆಂಕಿಯನ್ನು ಹತೋಟಿಗೆ ತರಲಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲವಾದರೂ ಹಲವು ವಾಹನಗಳು ಬೆಂಕಿಗೆ ಆಹುತಿಯಾಗಿವೆ. ಕಾರು, ಇ-ರಿಕ್ಷಾಗಳು ಸುಟ್ಟು ಭಸ್ಮವಾಗಿವೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ.
ಜಾಮಿಯಾ ನಗರದದಲ್ಲಿರುವ ಪಾರ್ಕಿಂಗ್ನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಕುರಿತು ಮುಂಜಾನೆ ದೂರವಾಣಿ ಕರೆ ಬಂದಿತ್ತು ಎಂದು ದೆಹಲಿ ಅಗ್ನಿಶಾಮಕ ಸೇವೆ ತಿಳಿಸಿದೆ.
![]()
ಘಟನೆಯಲ್ಲಿ ಒಟ್ಟು 10 ಕಾರುಗಳು, ಒಂದು ಮೋಟಾರ್ ಸೈಕಲ್, ಎರಡು ಸ್ಕೂಟಿ, 30 ಹೊಸ ಇ-ರಿಕ್ಷಾಗಳು ಮತ್ತು 50 ಹಳೆಯ ಇ-ರಿಕ್ಷಾಗಳು ಬೆಂಕಿಗೆ ಆಹುತಿಯಾಗಿವೆ ಎಂದು ದೆಹಲಿ ಅಗ್ನಿಶಾಮಕ ಸಿಬ್ಬಂದಿ ತಿಳಿಸಿದ್ದಾರೆ.
ಈ ಪ್ರದೇಶದಲ್ಲಿ ನಿಲ್ಲಿಸಲಾಗಿದ್ದ ಇ-ರಿಕ್ಷಾದಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿದ್ದರಿಂದ ಅಗ್ನಿ ಅವಘಡ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.
ಇನ್ನು ಈ ಘಟನೆ ನಡೆಯುವ ಕೆಲವು ಗಂಟೆಗಳ ಹಿಂದೆ ಮತ್ತೊಂದು ಬೆಂಕಿ ಅವಘಡ ನಡೆದಿದೆ. ದೆಹಲಿಯ ಉತ್ತರ ಬ್ಲಾಕ್ನಲ್ಲಿರುವ ಗೃಹ ವ್ಯವಹಾರಗಳ ಸಚಿವಾಲಯದ ದೂರವಾಣಿ ವಿನಿಮಯ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.

ಅಗ್ನಿಶಾಮಕ ಇಲಾಖೆ ಅಧಿಕಾರಿಗಳ ಪ್ರಕಾರ, ಮಧ್ಯರಾತ್ರಿ 12 ಗಂಟೆಯ ಸುಮಾರಿಗೆ ಕರೆ ಬಂದಿತ್ತು, ಉತ್ತರ ಬ್ಲಾಕ್ನಲ್ಲಿರುವ ದೂರವಾಣಿ ವಿನಿಮಯ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಮಾಹಿತಿ ನೀಡಿದ್ದರು.
ತಕ್ಷಣ ಏಳು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿವೆ. ಇದುವರೆಗೂ ಅಗ್ನಿ ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ ಎಂದು ಹೇಳಿದ್ದಾರೆ.

ಶಾಖದ ಅಲೆಗಳ ಹೊಡೆತಕ್ಕೆ ಸಿಲುಕಿರುವ ರಾಷ್ಟ್ರ ರಾಜಧಾನಿಯಲ್ಲಿ ಬೆಂಕಿ ಅವಘಡಗಳು ನಡೆಯುತ್ತಲೇ ಇದೆ. ಇತ್ತೀಚೆಗಷ್ಟೆ ದೆಹಲಿಯ ಮುಂಡ್ಕಾದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 27 ಜನ ಸಾವನ್ನಪ್ಪಿದ್ದರು.
ದುರಂತದಲ್ಲಿ ಕೆಲವರ ದೇಹಗಳು ಸುಟ್ಟು ಕರಕಲಾಗಿದ್ದವು, ಡಿಎನ್ಎ ಪರೀಕ್ಷೆ ನಡೆಸಿ, ಕುಟುಂಬಸ್ಥರಿಗೆ ಮೃತದೇಹಗಳನ್ನು ಪತ್ತೆಹಚ್ಚಿ, ಕುಟುಂಬಸ್ಥರಿಗೆ ನೀಡಲಾಗಿತ್ತು.
Over 90 vehicles, including 10 cars, were gutted in a massive fire that broke out in a metro parking lot in the national capital on Wednesday morning, an official said. No casualties or injuries were reported in the incident. The official informed that they received a call about the fire incident around 5.00 a.m. at the Main Tikona Park, Jamia Nagar in South-East Delhi after which as many as 11 fire tenders were immediately pressed into service. The cause of the fire is yet to be ascertained.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm