ಬ್ರೇಕಿಂಗ್ ನ್ಯೂಸ್
08-06-22 10:58 pm HK News Desk ದೇಶ - ವಿದೇಶ
ನವದೆಹಲಿ, ಜೂನ್ 8 : ಮಾರಣಾಂತಿಕ ಎಂದೇ ಪರಿಗಣಿಸಲ್ಪಟ್ಟ ಕ್ಯಾನ್ಸರ್ ಕಾಯಿಲೆಗೆ ಅಮೆರಿಕದಲ್ಲಿ ಹೊಸ ಔಷಧಿ ಕಂಡುಹಿಡಿಯಲಾಗಿದೆ. ಹೊಸ ಔಷಧಿಯನ್ನು ನೀಡುವ ಮೂಲಕ ಕ್ಯಾನ್ಸರ್ ಪೀಡಿತರನ್ನು ಶಸ್ತ್ರಚಿಕಿತ್ಸೆ ಇಲ್ಲದೆ ಗುಣಪಡಿಸಲಾಗಿದೆ ಎಂದು ಅಲ್ಲಿನ ವೈದ್ಯರು ತಿಳಿಸಿದ್ದಾರೆ.
ಅಮೆರಿಕದ ವಿಜ್ಞಾನಿಗಳು ಡೋಸ್ಟಾರ್ಲಿಮಾಬ್ ಎನ್ನುವ ಏಂಟಿ ಬಯಾಟಿಕ್ ಔಷಧಿಯನ್ನು ನೀಡುವ ಮೂಲಕ ಕ್ಯಾನ್ಸರ್ ಗಡ್ಡೆಯನ್ನು ನಿವಾರಣೆ ಮಾಡಿದ್ದಾರೆ. ಈ ಹೊಸ ಔಷಧಿಯನ್ನು ನ್ಯೂಯಾರ್ಕ್ನ ಮೆಮೋರಿಯಲ್ ಸ್ಲೋನ್ ಕ್ಯಾಟರಿಂಗ್ ಸೆಂಟರ್ ನಲ್ಲಿ 12 ರೋಗಿಗಳಿಗೆ ಪ್ರಯೋಗ ಮಾಡಲಾಗಿದ್ದು ಯಶಸ್ಸು ಪಡೆದಿದ್ದಾರೆ.

ಒಬ್ಬ ಭಾರತ ಮೂಲದ ವ್ಯಕ್ತಿ ಸೇರಿ 12 ಮಂದಿ ಗುದನಾಳದ ಕ್ಯಾನ್ಸರ್ ಇದ್ದ ರೋಗಿಗಳಿಗೆ ಈ ಹೊಸ ಔಷಧಿಯನ್ನು ನೀಡಲಾಗಿದೆ. ಎರಡು ಮತ್ತು ಮೂರನೇ ಹಂತದಲ್ಲಿದ್ದ ಇವರಿಗೆ ಈ ಔಷಧಿಯನ್ನು ಮೂರು ವಾರಗಳಿಗೊಮ್ಮೆ ಆರು ತಿಂಗಳ ವರೆಗೆ ನೀಡಲಾಗಿತ್ತು. ಆನಂತರ ಗುದನಾಳದಲ್ಲಿದ್ದ ಗಡ್ಡೆ ಪೂರ್ತಿಯಾಗಿ ನಿವಾರಣೆ ಆಗಿದೆ ಎನ್ನುವ ಮಾಹಿತಿಯನ್ನು ವೈದ್ಯರು ಹಂಚಿಕೊಂಡಿದ್ದಾರೆ.
ಚಿಕಿತ್ಸೆ ನಂತರ ಈ ರೋಗಿಗಳನ್ನು ವಿವಿಧ ಪರೀಕ್ಷೆಗೆ ಒಳಪಡಿಸಿದ್ದು ಅವರಲ್ಲಿ ಗಡ್ಡೆಯ ಲಕ್ಷಣಗಳು ಕಾಣಿಸಿಲ್ಲ. ಕ್ಯಾನ್ಸರ್ ಗಡ್ಡೆಗಳಿಗೆ ವಿಕಿರಣ ಚಿಕಿತ್ಸೆ, ಶಸ್ತ್ರಚಿಕಿತ್ಸೆ, ಕಿಮೋಥೆರಪಿ ಇತ್ಯಾದಿ ಬದಲು ಡೋಸ್ಟಾರ್ಲಿಮಾಬ್ ಔಷಧಿಯನ್ನು ನೀಡಲು ಸಾಧ್ಯವೇ ಅನ್ನುವ ಬಗ್ಗೆ ಹೆಚ್ಚಿನ ಅಧ್ಯಯನವನ್ನು ವೈದ್ಯರು ಕೈಗೊಂಡಿದ್ದಾರೆ. ಶಸ್ತ್ರಚಿಕಿತ್ಸೆ ಇಲ್ಲದೆ, ಗಡ್ಡೆಯನ್ನು ನಿವಾರಣೆ ಮಾಡಿರುವುದು ವೈದ್ಯಕೀಯ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು ಎನ್ನುವ ಮೆಚ್ಚುಗೆ ವ್ಯಕ್ತವಾಗಿದೆ.
In a medical trial that has shown unprecedented results, twelve rectal cancer patients were completely cured of the disease without any surgery or chemotherapy, according to a study published in the New England Journal of Medicine.The study, done by doctors from the Memorial Sloan Kettering Cancer Centre in New York, used a monoclonal antibody called dostarlimab every three weeks for a period of six months for the treatment of a particular kind of stage two or three rectal cancer.
19-08-25 11:13 am
Bangalore Correspondent
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
19-08-25 06:59 pm
HK News Desk
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
19-08-25 11:07 pm
Mangalore Correspondent
Mangalore Thokottu Sports Winner: ಕಂಪನಿ ಬ್ರಾಂ...
19-08-25 08:54 pm
Ullal Municipal Commissioner: ಉಳ್ಳಾಲ ನಗರಸಭೆಯಲ...
19-08-25 08:28 pm
Puttur, Baby, Sreekrishna J. Rao: ಬಿಜೆಪಿ ಮುಖಂ...
19-08-25 07:04 pm
Activists Mahesh Shetty Thimarodi, Harish Poo...
18-08-25 06:14 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm