ಬ್ರೇಕಿಂಗ್ ನ್ಯೂಸ್
15-06-22 10:46 am HK News Desk ದೇಶ - ವಿದೇಶ
ಶ್ರೀನಗರ, ಜೂ 15: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಲಷ್ಕರ್-ಎ-ತೊಯ್ಬಾ ಭಯೋತ್ಪಾದಕರನ್ನು ಬುಧವಾರ ಹತ್ಯೆಗೈಯಲಾಗಿದೆ.
ಇತ್ತೀಚೆಗೆ ಕುಲ್ಗಾಮ್ ಜಿಲ್ಲೆಯಲ್ಲಿ ಬ್ಯಾಂಕ್ ಮ್ಯಾನೇಜರ್ ಹತ್ಯೆಯಲ್ಲಿ ಭಾಗಿಯಾಗಿದ್ದ ಉಗ್ರರು, ಶೋಪಿಯಾನ್ನ ಕಂಜಿಯುಲಾರ್ನಲ್ಲಿ ಪ್ರದೇಶದಲ್ಲಿ ಅಡಗಿರುವ ಬಗೆಗಿನ ಖಚಿತ ಮಾಹಿತಿ ಮೇರೆಗೆ ಶೋಧ ಕಾರ್ಯಾಚರಣೆಯನ್ನು ನಡೆಸಿದ್ದಾರೆ. ಈ ವೇಳೆ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಕಾಶ್ಮೀರ ವಲಯದ ಪೊಲೀಸ್ ಮಹಾನಿರೀಕ್ಷಕ ವಿಜಯ್ ಕುಮಾರ್ ಹೇಳಿದ್ದಾರೆ.

ಹತ್ಯೆಯಾದ ಭಯೋತ್ಪಾದಕರಲ್ಲಿ ಒಬ್ಬನನ್ನು ಶೋಪಿಯಾನ್ನ ಜಾನ್ ಮೊಹಮ್ಮದ್ ಲೋನ್ ಎಂದು ಗುರುತಿಸಲಾಗಿದೆ. ಇತರ ಭಯೋತ್ಪಾದಕ ಅಪರಾಧಗಳ ಜೊತೆಗೆ, ಅವರು ಕುಲ್ಗಾಮ್ ಜಿಲ್ಲೆಯಲ್ಲಿ ಜೂ. 6 ರಂದು ಬ್ಯಾಂಕ್ ಮ್ಯಾನೇಜರ್ ವಿಜಯ್ ಕುಮಾರ್ ಅವರ ಹತ್ಯೆಯಲ್ಲಿ ಭಾಗಿಯಾಗಿದ್ದರು ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ.

ಮಂಗಳವಾರವೂ ಶ್ರೀನಗರದಲ್ಲಿ ಎಲ್ಇಟಿಗೆ ಸಂಬಂಧಿಸಿದ ಇಬ್ಬರು ಭಯೋತ್ಪಾದಕರನ್ನು ಹತ್ಯೆಗೈಯಲಾಗಿತ್ತು. ಈ ವೇಳೆ ಓರ್ವ ಪೊಲೀಸ್ ಪೇದೆಯೂ ಗಾಯಗೊಂಡಿದ್ದಾರೆ. ಪೊಲೀಸರ ಪ್ರಕಾರ, ಭಯೋತ್ಪಾದಕರನ್ನು ಪಾಕಿಸ್ತಾನಿ ಹ್ಯಾಂಡ್ಲರ್ಗಳು ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.
Two Lashkar-e-Taiba militants were killed in an encounter with security forces in Shopian district of Jammu and Kashmir on Wednesday, police said.The encounter broke out between the militants and security forces at Kanjiular in Shopian after the personnel launched a cordon and search operation in the area, they said.Inspector General of Police, Kashmir zone, Vijay Kumar said one of the slain militants was identified as Jan Mohammad Lone, who was allegedly involved in the killing of a bank manager in Kulgam district recently.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 04:30 pm
Giridhar Shetty, ಗಿರಿಧರ್ ಶೆಟ್ಟಿ
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 01:49 pm
HK News Staffer
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm