ಬ್ರೇಕಿಂಗ್ ನ್ಯೂಸ್
29-09-20 05:20 pm Bangalore Correspondent ದೇಶ - ವಿದೇಶ
ಬೆಂಗಳೂರು, ಸೆಪ್ಟಂಬರ್ 29: ಚೀನಾದಲ್ಲಿ ಹುಟ್ಟಿಕೊಂಡ ಕೊರೊನಾ ವೈರಸ್, ಇಡೀ ಜಗತ್ತನ್ನೇ ತತ್ತರಿಸುವಂತೆ ಮಾಡಿರುವ ಬೆನ್ನಲ್ಲೇ ಈಗ ಚೀನಾದಿಂದ ಮತ್ತೊಂದು ರೀತಿಯ ವೈರಸ್ ಭಾರತಕ್ಕೆ ಲಗ್ಗೆ ಇಟ್ಟಿರುವುದು ದೃಢಪಟ್ಟಿದ್ದು ಜನರಲ್ಲಿ ಆತಂಕ ಮೂಡಿಸಿದೆ.
ಕ್ಯಾಟ್ ಕ್ಯೂ ವೈರಸ್ (CQV - Cat Que Virus) ಎಂದು ಹೆಸರಿಸಲಾಗಿರುವ ಈ ವೈರಸ್ ಚೀನಾ ಮತ್ತು ವಿಯೆಟ್ನಾಂ ದೇಶಗಳ ಹಲವರಲ್ಲಿ ಸೋಂಕಿಗೆ ಕಾರಣವಾಗಿದೆ. ಇದೇ ವೇಳೆ, ಭಾರತದಲ್ಲೂ ಈ ವೈರಸ್ ಕಾಣಿಸಿಕೊಂಡಿದ್ದು ಪತ್ತೆಯಾಗಿದೆ. ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ನಡೆಸಿದ ಅಧ್ಯಯನದಲ್ಲಿ ಎರಡು ಸಿಕ್ಯೂವಿ ಸೋಂಕು ಪ್ರಕರಣ ಭಾರತದಲ್ಲಿ ಪತ್ತೆಯಾಗಿದೆ. ಆ ಎರಡೂ ಪ್ರಕರಣ ಕರ್ನಾಟಕದಲ್ಲೇ ಇರುವುದು ಆತಂಕ ಮೂಡಿಸಿದೆ. ಚೀನಾ ಮತ್ತು ವಿಯೆಟ್ನಾನಲ್ಲಿ ಸೊಳ್ಳೆ ಮತ್ತು ಹಂದಿಗಳಲ್ಲಿ ಈ ವೈರಸ್ ಕಾಣಿಸಿಕೊಂಡಿದೆ. ಭಾರತದಲ್ಲೂ ಕೆಲವು ಜಾತಿಯ ಸೊಳ್ಳೆಗಳು ಈ ವೈರಸ್ ಸೋಂಕಿಗೆ ಸುಲಭವಾಗಿ ತುತ್ತಾಗುತ್ತವೆಂದು ವಿಜ್ಞಾನಿಗಳು ಎಚ್ಚರಿಸಿದ್ದಾರೆ. ಹಾಗೆಯೇ, ಹಂದಿಗಳಿಗೂ ಸೋಂಕು ಬೇಗ ಹರಡಲಿದೆ. ಹಂದಿ ಮತ್ತು ಸೊಳ್ಳೆಗಳ ಮೂಲಕ ಮನುಷ್ಯನಿಗೆ ರೋಗ ಹರಡುತ್ತದೆ ಎನ್ನುತ್ತಾರೆ ಐಸಿಎಂಆರ್ ವಿಜ್ಞಾನಿಗಳು.
ಕ್ಯಾಟ್ ಕ್ಯೂ ವೈರಸ್ ಸೋಂಕು ತಗುಲಿದವರಿಗೆ ಉಸಿರಾಟದ ತೊಂದರೆ, ಎದೆ ನೋವು, ನುಂಗಲು ತೊಂದರೆ, ಮಿದುಳು ಪೊರೆಯಲ್ಲಿ ಊತ, ಮಕ್ಕಳ ಮಿದುಳಿನಲ್ಲಿ ಊತ ಮೊದಲಾದ ಕಾಯಿಲೆಗಳು ಕಾಣಿಸಿಕೊಳ್ಳುತ್ತವೆ. ಚೀನಾದಲ್ಲಿ ಹೊಸ ಸೋಂಕು ಬೆಳಕಿಗೆ ಬಂದ ನಂತರ ಪುಣೆಯ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿ ಸಂಸ್ಥೆಯ ವಿಜ್ಞಾನಿಗಳು ದೇಶಾದ್ಯಂತ 883 ವ್ಯಕ್ತಿಗಳ ರಕ್ತದ ಮಾದರಿಗಳನ್ನ ಸಂಗ್ರಹಿಸಿ ಪರೀಕ್ಷೆಗೊಳಪಡಿಸಿದ್ದಾರೆ. ಯಾರಲ್ಲೂ ವೈರಸ್ ಸಿಕ್ಕಿಲ್ಲವಾದರೂ ಇಬ್ಬರಲ್ಲಿ ಈ ವೈರಾಣುವಿನ ಪ್ರತಿಕಾಯಗಳ(Anti-bodies) ಉಪಸ್ಥಿತಿ ಕಂಡುಬಂದಿದೆ. ಅಂದರೆ ಈ ಇಬ್ಬರಲ್ಲಿ ಸೋಂಕು ಬಂದು ಹೋಗಿದ್ದರ ಕುರುಹು ಇದು ಎನ್ನಲಾಗಿದೆ.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm