ಬ್ರೇಕಿಂಗ್ ನ್ಯೂಸ್
29-09-20 05:20 pm Bangalore Correspondent ದೇಶ - ವಿದೇಶ
ಬೆಂಗಳೂರು, ಸೆಪ್ಟಂಬರ್ 29: ಚೀನಾದಲ್ಲಿ ಹುಟ್ಟಿಕೊಂಡ ಕೊರೊನಾ ವೈರಸ್, ಇಡೀ ಜಗತ್ತನ್ನೇ ತತ್ತರಿಸುವಂತೆ ಮಾಡಿರುವ ಬೆನ್ನಲ್ಲೇ ಈಗ ಚೀನಾದಿಂದ ಮತ್ತೊಂದು ರೀತಿಯ ವೈರಸ್ ಭಾರತಕ್ಕೆ ಲಗ್ಗೆ ಇಟ್ಟಿರುವುದು ದೃಢಪಟ್ಟಿದ್ದು ಜನರಲ್ಲಿ ಆತಂಕ ಮೂಡಿಸಿದೆ.
ಕ್ಯಾಟ್ ಕ್ಯೂ ವೈರಸ್ (CQV - Cat Que Virus) ಎಂದು ಹೆಸರಿಸಲಾಗಿರುವ ಈ ವೈರಸ್ ಚೀನಾ ಮತ್ತು ವಿಯೆಟ್ನಾಂ ದೇಶಗಳ ಹಲವರಲ್ಲಿ ಸೋಂಕಿಗೆ ಕಾರಣವಾಗಿದೆ. ಇದೇ ವೇಳೆ, ಭಾರತದಲ್ಲೂ ಈ ವೈರಸ್ ಕಾಣಿಸಿಕೊಂಡಿದ್ದು ಪತ್ತೆಯಾಗಿದೆ. ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ನಡೆಸಿದ ಅಧ್ಯಯನದಲ್ಲಿ ಎರಡು ಸಿಕ್ಯೂವಿ ಸೋಂಕು ಪ್ರಕರಣ ಭಾರತದಲ್ಲಿ ಪತ್ತೆಯಾಗಿದೆ. ಆ ಎರಡೂ ಪ್ರಕರಣ ಕರ್ನಾಟಕದಲ್ಲೇ ಇರುವುದು ಆತಂಕ ಮೂಡಿಸಿದೆ. ಚೀನಾ ಮತ್ತು ವಿಯೆಟ್ನಾನಲ್ಲಿ ಸೊಳ್ಳೆ ಮತ್ತು ಹಂದಿಗಳಲ್ಲಿ ಈ ವೈರಸ್ ಕಾಣಿಸಿಕೊಂಡಿದೆ. ಭಾರತದಲ್ಲೂ ಕೆಲವು ಜಾತಿಯ ಸೊಳ್ಳೆಗಳು ಈ ವೈರಸ್ ಸೋಂಕಿಗೆ ಸುಲಭವಾಗಿ ತುತ್ತಾಗುತ್ತವೆಂದು ವಿಜ್ಞಾನಿಗಳು ಎಚ್ಚರಿಸಿದ್ದಾರೆ. ಹಾಗೆಯೇ, ಹಂದಿಗಳಿಗೂ ಸೋಂಕು ಬೇಗ ಹರಡಲಿದೆ. ಹಂದಿ ಮತ್ತು ಸೊಳ್ಳೆಗಳ ಮೂಲಕ ಮನುಷ್ಯನಿಗೆ ರೋಗ ಹರಡುತ್ತದೆ ಎನ್ನುತ್ತಾರೆ ಐಸಿಎಂಆರ್ ವಿಜ್ಞಾನಿಗಳು.

ಕ್ಯಾಟ್ ಕ್ಯೂ ವೈರಸ್ ಸೋಂಕು ತಗುಲಿದವರಿಗೆ ಉಸಿರಾಟದ ತೊಂದರೆ, ಎದೆ ನೋವು, ನುಂಗಲು ತೊಂದರೆ, ಮಿದುಳು ಪೊರೆಯಲ್ಲಿ ಊತ, ಮಕ್ಕಳ ಮಿದುಳಿನಲ್ಲಿ ಊತ ಮೊದಲಾದ ಕಾಯಿಲೆಗಳು ಕಾಣಿಸಿಕೊಳ್ಳುತ್ತವೆ. ಚೀನಾದಲ್ಲಿ ಹೊಸ ಸೋಂಕು ಬೆಳಕಿಗೆ ಬಂದ ನಂತರ ಪುಣೆಯ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿ ಸಂಸ್ಥೆಯ ವಿಜ್ಞಾನಿಗಳು ದೇಶಾದ್ಯಂತ 883 ವ್ಯಕ್ತಿಗಳ ರಕ್ತದ ಮಾದರಿಗಳನ್ನ ಸಂಗ್ರಹಿಸಿ ಪರೀಕ್ಷೆಗೊಳಪಡಿಸಿದ್ದಾರೆ. ಯಾರಲ್ಲೂ ವೈರಸ್ ಸಿಕ್ಕಿಲ್ಲವಾದರೂ ಇಬ್ಬರಲ್ಲಿ ಈ ವೈರಾಣುವಿನ ಪ್ರತಿಕಾಯಗಳ(Anti-bodies) ಉಪಸ್ಥಿತಿ ಕಂಡುಬಂದಿದೆ. ಅಂದರೆ ಈ ಇಬ್ಬರಲ್ಲಿ ಸೋಂಕು ಬಂದು ಹೋಗಿದ್ದರ ಕುರುಹು ಇದು ಎನ್ನಲಾಗಿದೆ.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm