ಬ್ರೇಕಿಂಗ್ ನ್ಯೂಸ್
29-09-20 05:20 pm Bangalore Correspondent ದೇಶ - ವಿದೇಶ
ಬೆಂಗಳೂರು, ಸೆಪ್ಟಂಬರ್ 29: ಚೀನಾದಲ್ಲಿ ಹುಟ್ಟಿಕೊಂಡ ಕೊರೊನಾ ವೈರಸ್, ಇಡೀ ಜಗತ್ತನ್ನೇ ತತ್ತರಿಸುವಂತೆ ಮಾಡಿರುವ ಬೆನ್ನಲ್ಲೇ ಈಗ ಚೀನಾದಿಂದ ಮತ್ತೊಂದು ರೀತಿಯ ವೈರಸ್ ಭಾರತಕ್ಕೆ ಲಗ್ಗೆ ಇಟ್ಟಿರುವುದು ದೃಢಪಟ್ಟಿದ್ದು ಜನರಲ್ಲಿ ಆತಂಕ ಮೂಡಿಸಿದೆ.
ಕ್ಯಾಟ್ ಕ್ಯೂ ವೈರಸ್ (CQV - Cat Que Virus) ಎಂದು ಹೆಸರಿಸಲಾಗಿರುವ ಈ ವೈರಸ್ ಚೀನಾ ಮತ್ತು ವಿಯೆಟ್ನಾಂ ದೇಶಗಳ ಹಲವರಲ್ಲಿ ಸೋಂಕಿಗೆ ಕಾರಣವಾಗಿದೆ. ಇದೇ ವೇಳೆ, ಭಾರತದಲ್ಲೂ ಈ ವೈರಸ್ ಕಾಣಿಸಿಕೊಂಡಿದ್ದು ಪತ್ತೆಯಾಗಿದೆ. ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ನಡೆಸಿದ ಅಧ್ಯಯನದಲ್ಲಿ ಎರಡು ಸಿಕ್ಯೂವಿ ಸೋಂಕು ಪ್ರಕರಣ ಭಾರತದಲ್ಲಿ ಪತ್ತೆಯಾಗಿದೆ. ಆ ಎರಡೂ ಪ್ರಕರಣ ಕರ್ನಾಟಕದಲ್ಲೇ ಇರುವುದು ಆತಂಕ ಮೂಡಿಸಿದೆ. ಚೀನಾ ಮತ್ತು ವಿಯೆಟ್ನಾನಲ್ಲಿ ಸೊಳ್ಳೆ ಮತ್ತು ಹಂದಿಗಳಲ್ಲಿ ಈ ವೈರಸ್ ಕಾಣಿಸಿಕೊಂಡಿದೆ. ಭಾರತದಲ್ಲೂ ಕೆಲವು ಜಾತಿಯ ಸೊಳ್ಳೆಗಳು ಈ ವೈರಸ್ ಸೋಂಕಿಗೆ ಸುಲಭವಾಗಿ ತುತ್ತಾಗುತ್ತವೆಂದು ವಿಜ್ಞಾನಿಗಳು ಎಚ್ಚರಿಸಿದ್ದಾರೆ. ಹಾಗೆಯೇ, ಹಂದಿಗಳಿಗೂ ಸೋಂಕು ಬೇಗ ಹರಡಲಿದೆ. ಹಂದಿ ಮತ್ತು ಸೊಳ್ಳೆಗಳ ಮೂಲಕ ಮನುಷ್ಯನಿಗೆ ರೋಗ ಹರಡುತ್ತದೆ ಎನ್ನುತ್ತಾರೆ ಐಸಿಎಂಆರ್ ವಿಜ್ಞಾನಿಗಳು.

ಕ್ಯಾಟ್ ಕ್ಯೂ ವೈರಸ್ ಸೋಂಕು ತಗುಲಿದವರಿಗೆ ಉಸಿರಾಟದ ತೊಂದರೆ, ಎದೆ ನೋವು, ನುಂಗಲು ತೊಂದರೆ, ಮಿದುಳು ಪೊರೆಯಲ್ಲಿ ಊತ, ಮಕ್ಕಳ ಮಿದುಳಿನಲ್ಲಿ ಊತ ಮೊದಲಾದ ಕಾಯಿಲೆಗಳು ಕಾಣಿಸಿಕೊಳ್ಳುತ್ತವೆ. ಚೀನಾದಲ್ಲಿ ಹೊಸ ಸೋಂಕು ಬೆಳಕಿಗೆ ಬಂದ ನಂತರ ಪುಣೆಯ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿ ಸಂಸ್ಥೆಯ ವಿಜ್ಞಾನಿಗಳು ದೇಶಾದ್ಯಂತ 883 ವ್ಯಕ್ತಿಗಳ ರಕ್ತದ ಮಾದರಿಗಳನ್ನ ಸಂಗ್ರಹಿಸಿ ಪರೀಕ್ಷೆಗೊಳಪಡಿಸಿದ್ದಾರೆ. ಯಾರಲ್ಲೂ ವೈರಸ್ ಸಿಕ್ಕಿಲ್ಲವಾದರೂ ಇಬ್ಬರಲ್ಲಿ ಈ ವೈರಾಣುವಿನ ಪ್ರತಿಕಾಯಗಳ(Anti-bodies) ಉಪಸ್ಥಿತಿ ಕಂಡುಬಂದಿದೆ. ಅಂದರೆ ಈ ಇಬ್ಬರಲ್ಲಿ ಸೋಂಕು ಬಂದು ಹೋಗಿದ್ದರ ಕುರುಹು ಇದು ಎನ್ನಲಾಗಿದೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm