ಬ್ರೇಕಿಂಗ್ ನ್ಯೂಸ್
15-06-22 01:13 pm HK News Desk ದೇಶ - ವಿದೇಶ
ನವದೆಹಲಿ, ಜೂನ್ 15: ನ್ಯಾಶನಲ್ ಹೆರಾಲ್ಡ್ ಪ್ರಕರಣದಲ್ಲಿ ರಾಹುಲ್ ಗಾಂಧಿ ಸತತ ಮೂರನೇ ದಿನವೂ ಇಡಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಸೋದರಿ ಪ್ರಿಯಾಂಕ ಗಾಂಧಿ ಜೊತೆಗೆ ಇಡಿ ಕಚೇರಿಗೆ ಆಗಮಿಸಿದ ರಾಹುಲ್, ವಿಚಾರಣಾ ಕೊಠಡಿಗೆ ತೆರಳಿದ್ದಾರೆ. ದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ, ವಿರೋಧದ ನಡುವೆಯೇ ಇಡಿ ಅಧಿಕಾರಿಗಳು ವಿಚಾರಣೆ ಮುಂದುವರಿಸಿದ್ದಾರೆ.
ಮಂಗಳವಾರ ರಾಹುಲ್ ಗಾಂಧಿಯನ್ನು ಸತತ ಹತ್ತು ಗಂಟೆಗಳ ಕಾಲ ಕುಳ್ಳಿರಿಸಿ, ಇಡಿ ಅಧಿಕಾರಿಗಳು ಪ್ರಶ್ನಿಸಿದ್ದಾರೆ. ವಿವಿಧ ಪ್ರಶ್ನೆಗಳನ್ನು ಮುಂದಿಟ್ಟು ಹೇಳಿಕೆ ದಾಖಲು ಮಾಡಿದ್ದಾರೆ. ಇದೇ ವೇಳೆ, ದೆಹಲಿಯ ಕಾಂಗ್ರೆಸ್ ಕಚೇರಿ ಸೇರಿದಂತೆ ಹಲವು ಕಡೆ ದೇಶದ ವಿವಿಧ ರಾಜ್ಯಗಳ ಕಾಂಗ್ರೆಸ್ ನಾಯಕರು ಆಗಮಿಸಿ ಪ್ರತಿಭಟನೆಗೆ ಮುಂದಾಗಿದ್ದು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಎಐಸಿಸಿ ಕಚೇರಿ ಆವರಣದಲ್ಲಿ ಸೆಕ್ಷನ್ 144 ಹೇರಲಾಗಿದ್ದು ಕಾರ್ಯಕರ್ತರು ಪ್ರತಿಭಟನೆ ನಡೆಸುವುದಕ್ಕೆ ಅವಕಾಶ ನೀಡಿಲ್ಲ. ಹೀಗಾಗಿ ಅಲ್ಲಿಗೆ ವಿವಿಧ ರಾಜ್ಯಗಳಿಂದ ಆಗಮಿಸುತ್ತಿರುವ ಸಂಸದರನ್ನು ಪೊಲೀಸರು ಅರ್ಧ ದಾರಿಯಲ್ಲೇ ತಡೆದು ಹಿಂದಕ್ಕೆ ಕಳಿಸುತ್ತಿದ್ದಾರೆ. ಇದೇ ವೇಳೆ, ಅಕ್ಬರ್ ರೋಡ್ ನಿಂದ ಇಡಿ ಕಚೇರಿಗೆ ಪ್ರತಿಭಟನಾ ಧರಣಿ ನಡೆಸಲು ತಯಾರಿ ನಡೆಸಿದ್ದ ಮಹಿಳಾ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಹಿಳಾ ಪೊಲೀಸರು ಸುತ್ತವರಿದು ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದು ಬಸ್ಸಿನಲ್ಲಿ ತುಂಬಿಸಿ ಒಯ್ದಿದ್ದಾರೆ.
ರಾಹುಲ್ ಗಾಂಧಿಯನ್ನು ಇಡಿ ಅಧಿಕಾರಿಗಳು ವಿಚಾರಣೆಗೆ ಕರೆದು ಕಿರುಕುಳ ನೀಡುತ್ತಿರುವುದಕ್ಕೆ ಮುಂದೆ ಬೆಲೆ ತೆರಬೇಕಾಗಬಹುದು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ನಾವು ನಮ್ಮ ಪಕ್ಷದ ಕಚೇರಿಗೆ ತೆರಳುವುದಕ್ಕೂ ಪೊಲೀಸರು ಅನುಮತಿ ನೀಡುತ್ತಿಲ್ಲ. ನಾವು ಇಬ್ಬರು ಮುಖ್ಯಮಂತ್ರಿಗಳಿದ್ದೇವೆ, ಪಕ್ಷದ ಕಚೇರಿಗೆ ತೆರಳಲು ಬಿಡಿ ಎಂದರೂ ಪೊಲೀಸರು ಕೇಳುತ್ತಿಲ್ಲ ಎಂದು ಛತ್ತೀಸ್ ಗಢ ಸಿಎಂ ಭೂಪೇಶ್ ಬಾಘೇಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಹುಲ್ ವಿಚಾರಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ದೆಹಲಿಯಲ್ಲಿ ಹೈಡ್ರಾಮಾ ನಡೆಸಿದ್ದಾರೆ.
After over 20 hours of grilling, Rahul Gandhi is back at the Enforcement Directorate (ED) office for the 3rd straight day of questioning.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm