ಬ್ರೇಕಿಂಗ್ ನ್ಯೂಸ್
15-06-22 06:07 pm HK News Desk ದೇಶ - ವಿದೇಶ
ಮುಂಬೈ, ಜೂನ್ 15: ರಾಹುಲ್ ಗಾಂಧಿಯನ್ನು ಇಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದಾಗ ಕಾಂಗ್ರೆಸ್ ನಾಯಕನೊಬ್ಬ ಪ್ರಧಾನಿ ಮೋದಿಯನ್ನು, ಬೀದಿ ನಾಯಿ ರೀತಿ ಸಾಯಲಿದ್ದಾರೆ ಎಂದು ಮೂದಲಿಸಿದ ವಿಚಾರದಲ್ಲಿ ಬಿಜೆಪಿ ನಾಯಕರು ಪೊಲೀಸ್ ದೂರು ನೀಡಿದ್ದಾರೆ. ಅಲ್ಲದೆ, 48 ಗಂಟೆಯೊಳಗೆ ಆತನನ್ನು ಬಂಧಿಸಬೇಕು ಎಂದು ಗಡುವು ನೀಡಿದ್ದಾರೆ.
ನಾಗಪುರ ಇಡಿ ಕಚೇರಿ ಮುಂದೆ ಜೂನ್ 13ರಂದು ನಡೆದ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಶೇಖ್ ಹುಸೇನ್ ಎಂಬ ಕಾಂಗ್ರೆಸ್ ನಾಯಕ ಮೋದಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಇದರ ವಿಡಿಯೋ ವೈರಲ್ ಆಗಿದ್ದು, ಬಿಜೆಪಿ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ. ಜೈಸೆ ಕುತ್ತೇ ಕಿ ಮೌತ್ ಹೋತೀ ಹೈ, ಜೈಸೇ ನರೇಂದ್ರ ಮೋದಿ ಕೀ ಮೌತ್ ಹೋಗೀ (ಯಾವ ರೀತಿ ಬೀದಿ ನಾಯಿಗಳು ಸಾಯುತ್ತವೋ, ಅದೇ ರೀತಿ ನರೇಂದ್ರ ಮೋದಿಯೂ ಸಾಯಲಿದ್ದಾರೆ) ಎಂದು ಶೇಖ್ ಹುಸೇನ್ ಬಹಿರಂಗ ವೇದಿಕೆಯಲ್ಲಿ ಹೇಳಿಕೆ ನೀಡಿದ್ದರು.

ಮಹಾರಾಷ್ಟ್ರದ ವಿದರ್ಭ ಭಾಗದಲ್ಲಿ ಹಲವಾರು ಕಡೆ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿ, ಮೋದಿ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಶೇಖ್ ಹುಸೇನ್ ನೀಡಿರುವ ಹೇಳಿಕೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ದೂರು ನೀಡಿರುವ ಬಿಜೆಪಿ ನಾಯಕರು, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಮಹಾ ವಿಘಾಡಿ ಸರಕಾರ ಪೊಲೀಸರ ಮೇಲೆ ಎಫ್ಐಆರ್ ಮಾಡದಂತೆ ಒತ್ತಡ ಹೇರಿದೆ. ಆದರೆ ನಾವು ಎರಡು ದಿನಗಳ ಗಡುವು ನೀಡುತ್ತೇವೆ. ಎಫ್ಐಆರ್ ದಾಖಲಿಸಿ, ಪೊಲೀಸರು ಬಂಧಿಸದಿದ್ದರೆ ಕಾನೂನು ಕದ ತಟ್ಟಲಿದ್ದೇವೆ. ಜೊತೆಗೆ ಪ್ರತಿಭಟನೆಯನ್ನೂ ಮಾಡುತ್ತೇವೆ ಎಂದು ಬಿಜೆಪಿ ನಾಯಕರು ಹೇಳಿದ್ದಾರೆ. ಇದೇ ವೇಳೆ, ಕಾಂಗ್ರೆಸ್ ನಾಯಕರು ಮುಂದಿನ ಲೋಕಸಭೆ ಚುನಾವಣೆ ವರೆಗೂ ನಾವು ನಿರಂತರ ಮೋದಿ ವಿರುದ್ಧ ಪ್ರತಿಭಟನೆ ನಡೆಸುತ್ತೇವೆ ಎಂದು ಹೇಳಿದ್ದಾರೆ.
On Wednesday, the Bharatiya Janata Party (BJP) registered a complaint against Congress leader Sheikh Hussain at the Gittikhadan Police Station for using derogatory comments against Prime Minister Narendra Modi in Nagpur. The BJP leaders have sought strict action against Hussain and also demanded his arrest within 48 hours, failing which they will launch an intense agitation.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm