ಬ್ರೇಕಿಂಗ್ ನ್ಯೂಸ್
17-06-22 10:43 pm HK News Desk ದೇಶ - ವಿದೇಶ
ಮುಂಬೈ, ಜೂ 17: ಪ್ರವಾದಿ ಮೊಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ನೂಪುರ್ ಶರ್ಮಾ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದರೆ ಅವರನ್ನು ಪೊಲೀಸರು ಠಾಣೆಗೆ ಕರೆಸಲು ಪ್ರಯತ್ನಿಸುತ್ತಿದ್ದು, 4 ದಿನಗಳಿಂದ ಹುಡುಕಾಡಿ ಸುಸ್ತಾಗಿದ್ದಾರೆ.
ಅವಹೇಳನಕಾರಿ ಹೇಳಿಕೆ ನೀಡಿ ದೇಶ ವಿದೇಶಗಳಲ್ಲಿ ಕೆಂಗಣ್ಣಿಗೆ ಗುರಿಯಾದ ನೂಪುರ್ ಶರ್ಮಾ ಬಿಜೆಪಿ ಪಕ್ಷದ ವಕ್ತಾರೆ ಸ್ಥಾನದಿಂದಲೂ ಅಮಾನತಾಗಿದ್ದರು. ಬಳಿಕ ಅವರ ವಿರುದ್ಧ ಪ್ರಕರಣಗಳು ದಾಖಲಾಗಿದ್ದು, ಅದರ ಆಧಾರದ ಮೇಲೆ ನೂಪುರ್ ಅವರನ್ನು ಕರೆಸಲಾಗಿತ್ತು. ಆದರೆ ಅವರಿಗೆ ಸಮನ್ಸ್ ಪೇಪರ್ ಹಸ್ತಾಂತರಿಸುವುದು ಹೇಗೆ ಎಂಬ ಪ್ರಶ್ನೆ ಪೊಲೀಸರಿಗೆ ಮೂಡಿದೆ. ಕಳೆದ 4 ದಿನಗಳಿಂದ ನೂಪುರ್ ಅವರನ್ನು ಮುಂಬೈ ಪೊಲೀಸರು ಹುಡುಕುತ್ತಿದ್ದಾರೆ ಎನ್ನಲಾಗಿದೆ.
ಮಹಾರಾಷ್ಟ್ರದ ಗೃಹ ಸಚಿವಾಲಯದ ವಿಶೇಷ ಮೂಲ ಇದನ್ನು ವರದಿ ಮಾಡಿದ್ದು, ನೂಪುರ್ ಶರ್ಮಾ ಅವರನ್ನು ಬಂಧಿಸಲು ಮುಂಬೈ ಪೊಲೀಸರ ಬಳಿ ಸಾಕಷ್ಟು ಪುರಾವೆಗಳಿವೆ. ಹೀಗಾಗಿ ಪೈದೋನಿ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನ ಆಧಾರದ ಮೇಲೆ ನೂಪುರ್ ವಿರುದ್ಧ ಸಮನ್ಸ್ ಜಾರಿ ಮಾಡಲಾಗಿದೆ.
ಮೊದಲಿಗೆ ಸಮನ್ಸ್ ಪ್ರತಿಯನ್ನು ಇ-ಮೇಲ್ ಮೂಲಕ ನೂಪುರ್ ಶರ್ಮಾ ಅವರಿಗೆ ಕಳುಹಿಸಲಾಗಿದ್ದು, ಅವರ ಪ್ರತಿಕ್ರಿಯೆ ಬಾರದ ಹಿನ್ನೆಲೆ ಮುಂಬೈ ಪೊಲೀಸರ ತಂಡ ನಿಯಮಗಳ ಪ್ರಕಾರ ಸಮನ್ಸ್ ಪೇಪರ್ ಅನ್ನು ಹಸ್ತಾಂತರಿಸಲು ದೆಹಲಿಗೆ ತಲುಪಿದೆ. ಆದರೆ ಅಲ್ಲಿ ಅವರು 4 ದಿನಗಳಿಂದ ಜಾಲಾಡಿದರೂ ನೂಪುರ್ ಅವರ ಸುಳಿವು ಸಿಕ್ಕಿಲ್ಲ ಎಂಬುದು ತಿಳಿದುಬಂದಿದೆ.
ನೂಪುರ್ ಶರ್ಮಾ ಅವರ ವಿವಾದಿತ ಹೇಳಿಕೆಯ ಪರಿಣಾಮ ದೇಶಾದ್ಯಂತ ಅಶಾಂತಿಗೆ ಕಾರಣವಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತವೂ ಒತ್ತಡದಲ್ಲಿದೆ.
ತೃಣಮೂಲ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಸೊಹೈಲ್ ನೀಡಿದ ದೂರಿನ ಅನ್ವಯ ಕೋಲ್ಕತಾ ಪೊಲೀಸರು ನೂಪುರ್ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಜೂನ್ 20ರಂದು ಹೇಳಿಕೆ ದಾಖಲಿಸುವಂತೆ ಕೋಲ್ಕತಾ ಪೊಲೀಸರು ಸಮನ್ಸ್ ನೀಡಿದ್ದಾರೆ. ದಿಲ್ಲಿಯಲ್ಲಿ ಕೂಡ ಅವರ ವಿರುದ್ಧ ಎಫ್ಐಆರ್ ಒಂದು ದಾಖಲಾಗಿದೆ.
ನೂಪುರ್ ಶರ್ಮಾ ಅವರ ಹೇಳಿಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿವಾದ ಸೃಷ್ಟಿಸಿತ್ತು. ಇರಾನ್, ಸೌದಿ ಅರೇಬಿಯಾ, ಕುವೈತ್, ಕತಾರ್ ಸೇರಿದಂತೆ 15ಕ್ಕೂ ಹೆಚ್ಚು ಮುಸ್ಲಿಂ ದೇಶಗಳು ಇದರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿವೆ. ವ್ಯಾಪಕ ಟೀಕೆ ಹಾಗೂ ಪ್ರತಿಭಟನೆ ನಡುವೆ ನೂಪುರ್ ಶರ್ಮಾ ಅವರು ಬೇಷರತ್ತಾಗಿ ತಮ್ಮ ಹೇಳಿಕೆಯನ್ನು ವಾಪಸ್ ಪಡೆದುಕೊಂಡಿದ್ದರು. ಮಹಾದೇವ (ಶಿವ) ವಿರುದ್ಧ ನಿರಂತರ ಅಪಮಾನಕರ ಮತ್ತು ಅಗೌರವದ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಿರುವುದಾಗಿ ಹೇಳಿದ್ದರು.
Nupur Sharma missing! Cases were registered against her in several police stations for his controversial remarks on Hazrat Mohammad (Prophet Mohammad Row). It was on the basis of these that Nupur was summoned. But the question is how to hand over the summons paper to Nupur? A mumbai police team is said to be searching for the expelled BJP leader for the past four days. But she can't be found.
20-08-25 12:33 pm
Bangalore Correspondent
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
20-08-25 11:01 am
HK News Desk
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
20-08-25 04:28 pm
Mangalore Correspondent
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
ಧರ್ಮಸ್ಥಳ ಪ್ರಕರಣ ನೆಪದಲ್ಲಿ ಬಿಎಲ್ ಸಂತೋಷ್ ಅವಹೇಳನ...
19-08-25 11:07 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm