ಬ್ರೇಕಿಂಗ್ ನ್ಯೂಸ್
25-06-22 04:39 pm HK News Desk ದೇಶ - ವಿದೇಶ
ವಯನಾಡ್, ಜೂನ್ 25: ರಾಹುಲ್ ಗಾಂಧಿ ಪ್ರತಿನಿಧಿಸುವ ವಯನಾಡ್ ಸಂಸತ್ ಕ್ಷೇತ್ರದ ಕಚೇರಿಗೆ ನುಗ್ಗಿ ಎಸ್ಎಫ್ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಕಚೇರಿಯ ಸಿಬಂದಿಗೆ ಹಲ್ಲೆಗೈದು ಪೀಠೋಪಕರಣಗಳನ್ನು ಪುಡಿ ಮಾಡಿದ್ದಾರೆ. ಘಟನೆ ಸಂಬಂಧಿಸಿ ಪೊಲೀಸರು ಹತ್ತಕ್ಕೂ ಹೆಚ್ಚು ಕಾರ್ಯಕರ್ತರನ್ನು ಬಂಧಿಸಿದ್ದಾರೆ.
ರಾಷ್ಟ್ರೀಯ ಉದ್ಯಾನವನ, ಸಂರಕ್ಷಿತ ಪ್ರದೇಶಗಳ ಸುತ್ತ ಇರುವ ಒಂದು ಕಿಮೀ ವ್ಯಾಪ್ತಿಯನ್ನು ಪರಿಸರ ಸೂಕ್ಷ್ಮ ವಲಯ ಎಂದು ಸುಪ್ರೀಂ ಕೋರ್ಟ್ ಘೋಷಣೆ ಮಾಡಿದ್ದನ್ನು ವಿರೋಧಿಸಿ ರಾಹುಲ್ ಗಾಂಧಿ ಕಚೇರಿಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ. ವಯನಾಡಿನಲ್ಲಿ ರಾಷ್ಟ್ರೀಯ ಸಂರಕ್ಷಿತ ಪ್ರದೇಶದ ಸುತ್ತಮುತ್ತ ಹಲವಾರು ಮನೆಗಳು, ಜನವಸತಿ ಪ್ರದೇಶಗಳಿದ್ದು, ಈ ತೀರ್ಪಿನಿಂದ ತಮಗೆ ತೊಂದರೆಯಾಗುತ್ತೆ ಎನ್ನುವ ಭಯದಿಂದ ಪ್ರತಿಭಟನೆ ನಡೆಸಿದ್ದಾರೆ.
ವಯನಾಡ್ ಜಿಲ್ಲೆಯಾದ್ಯಂತ ಪ್ರತಿಭಟನೆ ನಡೆಯುತ್ತಿದ್ದು, ಈ ಬಗ್ಗೆ ಕ್ಷೇತ್ರವನ್ನು ಪ್ರತಿನಿಧಿಸುವ ರಾಹುಲ್ ಗಾಂಧಿ ಧ್ವನಿ ಎತ್ತಬೇಕು ಎಂದು ಕಮ್ಯುನಿಸ್ಟ್ ಪರ ಸಂಘಟನೆಗಳು ಒತ್ತಾಯಿಸುತ್ತಿವೆ. ರಾಹುಲ್ ಗಾಂಧಿ ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ಈ ರೀತಿಯ ನಿರ್ಬಂಧವನ್ನು ತೆರವುಗೊಳಿಸಲು ಪ್ರಯತ್ನಿಸಬೇಕು ಎಂದು ಒತ್ತಾಯಿಸಿದ್ದಾರೆ. ಆದರೆ ರಾಹುಲ್ ಗಾಂಧಿ ನಮ್ಮ ನೋವಿಗೆ ಸ್ಪಂದಿಸಿಲ್ಲ ಎಂದು ಕಮ್ಯುನಿಸ್ಟ್ ವಿದ್ಯಾರ್ಥಿ ಸಂಘಟನೆ ಎಸ್ಎಫ್ಐ ಕಾರ್ಯಕರ್ತರು ಶುಕ್ರವಾರ ರಾಹುಲ್ ಗಾಂಧಿಯ ಸಂಸತ್ ಸದಸ್ಯರ ಕಚೇರಿಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ. ಕಚೇರಿಯಲ್ಲಿದ್ದ ಆಗಸ್ಟಿನ್ ಎಂಬ ಸಿಬಂದಿಯ ಮೇಲೆ ಹಲ್ಲೆ ನಡೆಸಿದ್ದಾರೆ.
ಪರಿಸರ ಸೂಕ್ಷ್ಮ ಪ್ರದೇಶ ಎಂದು 2011ರಲ್ಲಿ ಆದೇಶ ಆಗಿದ್ದು, ಆನಂತರ ಇಷ್ಟೂ ವರ್ಷಗಳಲ್ಲಿ ಸ್ಥಳೀಯರು ಹಲವು ಸಂದರ್ಭಗಳಲ್ಲಿ ಪ್ರತಿಭಟನೆ ನಡೆಸುತ್ತ ಬಂದಿದ್ದರು. ಹೀಗೆ ಗುರುತಿಸಲ್ಪಟ್ಟ ಪ್ರದೇಶ ಜನನಿಬಿಡವಾಗಿದ್ದು ಜನರು ಯಾವುದೇ ಅಭಿವೃದ್ಧಿ ಕೆಲಸಗಳನ್ನು ನಡೆಸಲು ಸಾಧ್ಯವಾಗದೇ ಕೇಂದ್ರ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಆ ಭಾಗದಲ್ಲಿ ಗಣಿಗಾರಿಕೆ, ಅಭಿವೃದ್ಧಿ ಚಟುವಟಿಕೆ ನಡೆಸುವುದಕ್ಕೆ ತೊಂದರೆಯಾಗಿದ್ದು, ಇದೇ ರೀತಿಯ ಸಮಸ್ಯೆ ಅನುಭವಿಸುತ್ತಿರುವ ಪಶ್ಚಿಮ ಘಟ್ಟಗಳ ವ್ಯಾಪ್ತಿಯ ಇಡುಕ್ಕಿ, ವಯನಾಡ್, ಪತ್ತನಂತಿಟ್ಟ, ಕೊಟ್ಟಾಯಂ ಜಿಲ್ಲೆಗಳ ಜನರು ಹರತಾಳ ನಡೆಸುತ್ತಿದ್ದಾರೆ.
The Students' Federation of India (SFI) took out a march and vandalised Congress MP Rahul Gandhi's office in Wayanad, Kerala. They barged into the office and destroyed pieces of equipment inside.The protest was carried out against Rahul Gandhi for allegedly not interfering in the Supreme Court order on the eco-sensitive zone (ESZ). After the protest, Congress stated that his office staff was also injured in the clash.
20-08-25 12:33 pm
Bangalore Correspondent
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
20-08-25 06:40 pm
HK News Desk
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
20-08-25 04:28 pm
Mangalore Correspondent
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
ಧರ್ಮಸ್ಥಳ ಪ್ರಕರಣ ನೆಪದಲ್ಲಿ ಬಿಎಲ್ ಸಂತೋಷ್ ಅವಹೇಳನ...
19-08-25 11:07 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm