ಬ್ರೇಕಿಂಗ್ ನ್ಯೂಸ್
30-09-20 09:55 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟಂಬರ್ 30: ಕೇಂದ್ರ ಸರ್ಕಾರ ಅನ್ಲಾಕ್ 5ರ ಮಾರ್ಗಸೂಚಿ ಪ್ರಕಟಿಸಿದ್ದು, ಚಿತ್ರಮಂದಿರ ಮತ್ತು ಈಜುಕೊಳ ತೆರೆಯಲು ಷರತ್ತುಬದ್ಧ ಅನುಮತಿಯನ್ನು ನೀಡಿದೆ. ಬಹುತೇಕ ಚಟುವಟಿಕೆಗಳಿಗೆ ಅಕ್ಟೋಬರ್ 15ರ ನಂತ್ರವೇ ಗ್ರೀನ್ ಸಿಗ್ನಲ್ ನೀಡಿದೆ.
ಈ ಕುರಿತು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಮಾರ್ಗಸೂಚಿ ಬಿಡುಗಡೆ ಮಾಡಲಿದೆ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ. ಸಿನಿಮಾ ಮಂದಿರ, ಮಲ್ಟಿಪ್ಲೆಕ್ಸ್ಗಳು ಕಾರ್ಯರಂಭಕ್ಕೆ ಅವಕಾಶ ನೀಡಲಾಗಿದೆ. ಸಿನಿಮಾ ಮಂದಿರಗಳಲ್ಲಿ ಶೇ 50 ರಷ್ಟು ಆಸನ ವ್ಯವಸ್ಥೆಗೆ ಮಾತ್ರ ಅವಕಾಶ ಕಲ್ಪಿಸಬೇಕು ಎಂದು ಪ್ರಕಟಣೆ ತಿಳಿಸಿದೆ. ಅಕ್ಟೋಬರ್ 15ರಿಂದ ಕಂಟೈನ್ಮೆಟ್ ಪ್ರದೇಶ ಹೊರತು ಪಡಿಸಿ ಬೇರೆ ಎಲ್ಲಾಕಡೆ ಇವುಗಳ ಕಾರ್ಯಚಾರಣೆಗೆ ಅವಕಾಶ ಕಲ್ಪಿಸಲಾಗಿದೆ.

ಇದೇ ವೇಳೆ ಶಾಲೆಗಳ ಪುನರಾರಂಭದ ಕುರಿತು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ತೆಗೆದುಕೊಳ್ಳಲು ನಿಯಮಗಳನ್ನು ಸರಳಗೊಳಿಸಲಾಗಿದೆ. ಪೋಷಕರ ಲಿಖಿತ ಒಪ್ಪಂದದೊಂದಿಗೆ ವಿದ್ಯಾರ್ಥಿಗಳು ಹಾಜರಾಬಹುದು ಎಂದು ತಿಳಿಸಿದೆ. ಈ ವೇಳೆ ಹಾಜರಾತಿ ಕಡ್ಡಾಯವಲ್ಲ. ಬೇಕಾದಲ್ಲಿ ಆನ್ಲೈನ್ ಕ್ಲಾಸ್ಗಳನ್ನು ಮುಂದುವರೆಸಬಹುದು ಎಂದು ತಿಳಿಸಿದೆ. ಈ ಕುರಿತು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳು ಸುರಕ್ಷತಾ ಮಾರ್ಗಸೂಚಿಗಳನ್ನು ಅನುಸರಿಸಬೇಕು. ಈ ಕುರಿತು ಶಿಕ್ಷಣ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬಹುದು ಎಂದು ಸೂಚಿಸಿದೆ.
ಜೊತೆಗೆ ವ್ಯವಹಾರದಿಂದ ವ್ಯವಹಾರದ ಉದ್ದೇಶಕ್ಕಾಗಿ ನಡೆಯುವ ಪ್ರದರ್ಶನಕ್ಕೂ ಅವಕಾಶ ಕಲ್ಪಿಸಿದ್ದು, ಇವೆಲ್ಲಾ ಮಾರ್ಗಸೂಚಿಗಳ ಪಾಲನೆ ಮಾಡುವುದು ಅಗತ್ಯ ಎಂದು ತಿಳಿಸಿದೆ. ಈ ಕುರಿತು ವಾಣಿಜ್ಯ ಇಲಾಖೆ ನಿರ್ದೇಶನ ನೀಡಲಿದೆ.

ಕ್ರೀಡಾಪಟುಗಳ ತರಬೇತಿಗಾಗಿ ಬಳಸುವ ಈಜುಕೊಳಗಳನ್ನು ತೆರೆಯಲು ಅನುಮತಿ ನೀಡಲಾಗಿದ್ದು, ಇದಕ್ಕಾಗಿ ಕ್ರೀಡಾ ಸಚಿವಾಲಯದ ಮಾರ್ಗದರ್ಶನದಂತೆ ಕಾರ್ಯಚರಣೆ ನಡೆಸಬೇಕು ಎಂದು ತಿಳಿಸಿದೆ.
ಇದೇ ವೇಳೆ ಸಭೆ ಸಮಾರಂಭಗಳಲ್ಲಿ 100 ಜನರಿಗಿಂತ ಹೆಚ್ಚಿನ ಜನ ಭಾಗಿಯಾಗಲು ಅನುಮತಿ ನೀಡಲಾಗಿದೆ. ಇನ್ನು ಕಂಟೈನ್ಮೆಟ್ ಪ್ರದೇಶದಲ್ಲಿ ಅಕ್ಟೋಬರ್ 15ರ ಬಳಿಕ ಪರಿಸ್ಥಿತಿ ಅವಲೋಕಿಸಿ ನಿರ್ಧಾರ ಕೈಗೊಳ್ಳುವ ಬಗ್ಗೆ ಚಿಂತಿಸಲಾಗುವುದು.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
05-03-26 05:02 pm
HK News Staffer
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
05-03-26 04:36 pm
HK News Staffer
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm