ಬ್ರೇಕಿಂಗ್ ನ್ಯೂಸ್
30-09-20 09:55 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟಂಬರ್ 30: ಕೇಂದ್ರ ಸರ್ಕಾರ ಅನ್ಲಾಕ್ 5ರ ಮಾರ್ಗಸೂಚಿ ಪ್ರಕಟಿಸಿದ್ದು, ಚಿತ್ರಮಂದಿರ ಮತ್ತು ಈಜುಕೊಳ ತೆರೆಯಲು ಷರತ್ತುಬದ್ಧ ಅನುಮತಿಯನ್ನು ನೀಡಿದೆ. ಬಹುತೇಕ ಚಟುವಟಿಕೆಗಳಿಗೆ ಅಕ್ಟೋಬರ್ 15ರ ನಂತ್ರವೇ ಗ್ರೀನ್ ಸಿಗ್ನಲ್ ನೀಡಿದೆ.
ಈ ಕುರಿತು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಮಾರ್ಗಸೂಚಿ ಬಿಡುಗಡೆ ಮಾಡಲಿದೆ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ. ಸಿನಿಮಾ ಮಂದಿರ, ಮಲ್ಟಿಪ್ಲೆಕ್ಸ್ಗಳು ಕಾರ್ಯರಂಭಕ್ಕೆ ಅವಕಾಶ ನೀಡಲಾಗಿದೆ. ಸಿನಿಮಾ ಮಂದಿರಗಳಲ್ಲಿ ಶೇ 50 ರಷ್ಟು ಆಸನ ವ್ಯವಸ್ಥೆಗೆ ಮಾತ್ರ ಅವಕಾಶ ಕಲ್ಪಿಸಬೇಕು ಎಂದು ಪ್ರಕಟಣೆ ತಿಳಿಸಿದೆ. ಅಕ್ಟೋಬರ್ 15ರಿಂದ ಕಂಟೈನ್ಮೆಟ್ ಪ್ರದೇಶ ಹೊರತು ಪಡಿಸಿ ಬೇರೆ ಎಲ್ಲಾಕಡೆ ಇವುಗಳ ಕಾರ್ಯಚಾರಣೆಗೆ ಅವಕಾಶ ಕಲ್ಪಿಸಲಾಗಿದೆ.
ಇದೇ ವೇಳೆ ಶಾಲೆಗಳ ಪುನರಾರಂಭದ ಕುರಿತು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ತೆಗೆದುಕೊಳ್ಳಲು ನಿಯಮಗಳನ್ನು ಸರಳಗೊಳಿಸಲಾಗಿದೆ. ಪೋಷಕರ ಲಿಖಿತ ಒಪ್ಪಂದದೊಂದಿಗೆ ವಿದ್ಯಾರ್ಥಿಗಳು ಹಾಜರಾಬಹುದು ಎಂದು ತಿಳಿಸಿದೆ. ಈ ವೇಳೆ ಹಾಜರಾತಿ ಕಡ್ಡಾಯವಲ್ಲ. ಬೇಕಾದಲ್ಲಿ ಆನ್ಲೈನ್ ಕ್ಲಾಸ್ಗಳನ್ನು ಮುಂದುವರೆಸಬಹುದು ಎಂದು ತಿಳಿಸಿದೆ. ಈ ಕುರಿತು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳು ಸುರಕ್ಷತಾ ಮಾರ್ಗಸೂಚಿಗಳನ್ನು ಅನುಸರಿಸಬೇಕು. ಈ ಕುರಿತು ಶಿಕ್ಷಣ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬಹುದು ಎಂದು ಸೂಚಿಸಿದೆ.
ಜೊತೆಗೆ ವ್ಯವಹಾರದಿಂದ ವ್ಯವಹಾರದ ಉದ್ದೇಶಕ್ಕಾಗಿ ನಡೆಯುವ ಪ್ರದರ್ಶನಕ್ಕೂ ಅವಕಾಶ ಕಲ್ಪಿಸಿದ್ದು, ಇವೆಲ್ಲಾ ಮಾರ್ಗಸೂಚಿಗಳ ಪಾಲನೆ ಮಾಡುವುದು ಅಗತ್ಯ ಎಂದು ತಿಳಿಸಿದೆ. ಈ ಕುರಿತು ವಾಣಿಜ್ಯ ಇಲಾಖೆ ನಿರ್ದೇಶನ ನೀಡಲಿದೆ.
ಕ್ರೀಡಾಪಟುಗಳ ತರಬೇತಿಗಾಗಿ ಬಳಸುವ ಈಜುಕೊಳಗಳನ್ನು ತೆರೆಯಲು ಅನುಮತಿ ನೀಡಲಾಗಿದ್ದು, ಇದಕ್ಕಾಗಿ ಕ್ರೀಡಾ ಸಚಿವಾಲಯದ ಮಾರ್ಗದರ್ಶನದಂತೆ ಕಾರ್ಯಚರಣೆ ನಡೆಸಬೇಕು ಎಂದು ತಿಳಿಸಿದೆ.
ಇದೇ ವೇಳೆ ಸಭೆ ಸಮಾರಂಭಗಳಲ್ಲಿ 100 ಜನರಿಗಿಂತ ಹೆಚ್ಚಿನ ಜನ ಭಾಗಿಯಾಗಲು ಅನುಮತಿ ನೀಡಲಾಗಿದೆ. ಇನ್ನು ಕಂಟೈನ್ಮೆಟ್ ಪ್ರದೇಶದಲ್ಲಿ ಅಕ್ಟೋಬರ್ 15ರ ಬಳಿಕ ಪರಿಸ್ಥಿತಿ ಅವಲೋಕಿಸಿ ನಿರ್ಧಾರ ಕೈಗೊಳ್ಳುವ ಬಗ್ಗೆ ಚಿಂತಿಸಲಾಗುವುದು.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 03:23 pm
HK News Desk
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
05-08-25 04:29 pm
Mangalore Correspondent
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
Dharmasthala Case, SIT, Body Found: ಬಂಗ್ಲೆಗುಡ...
04-08-25 07:38 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm