ಬ್ರೇಕಿಂಗ್ ನ್ಯೂಸ್
28-06-22 05:34 pm HK News Desk ದೇಶ - ವಿದೇಶ
ಕೊಲಂಬೋ, ಜೂ 27: ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟಿರುವ ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ಹೊಸ ಸಮಸ್ಯೆ ಉಂಟಾಗಿದೆ.
ತೈಲ ಸಂಗ್ರಹ ಖಾಲಿಯಾಗಿದೆ, ವಾಹನ ಸಂಚಾರಕ್ಕೆ ಸರ್ಕಾರ ಹೊಸ ನಿಯಮಗಳನ್ನು ಘೋಷಣೆ ಮಾಡಿದೆ.
ಶ್ರೀಲಂಕಾದ ಆಡಳಿತ ಜುಲೈ 10ರ ತನಕ ತುರ್ತು ವಾಹನಗಳ ಸಂಚಾರಕ್ಕೆ ಮಾತ್ರ ಅನುಮತಿ ನೀಡಿದೆ. ಸೋಮವಾರ ಮಧ್ಯರಾತ್ರಿಯಿಂದಲೇ ಈ ನಿಯಮ ಜಾರಿಗೆ ಬರಲಿದೆ. ದೇಶದಲ್ಲಿನ ತೈಲ ಸಂಗ್ರಹ ಸಂಪೂರ್ಣ ಖಾಲಿಯಾಗಿದ್ದು, ದೇಶದ 22 ಮಿಲಿಯನ್ ಜನರಿಗೆ ಹೊಸ ಸಂಕಷ್ಟ ಎದುರಾಗಿದೆ.

ಸರ್ಕಾರದ ಆದೇಶದ ಪ್ರಕಾರ ತುರ್ತು ವಾಹನಗಳ ಪಟ್ಟಿಯಲ್ಲಿ ಆರೋಗ್ಯ, ಕಾನೂನು & ಸುವ್ಯವಸ್ಥೆ, ಬಂದರು, ವಿಮಾನ ನಿಲ್ದಾಣ, ಆಹಾರ ಸರಬರಾಜು ಮತ್ತು ಕೃಷಿ ಸಂಬಂಧಿತ ವಾಹನಗಳು ಮಾತ್ರ ಸೇರಿವೆ. ಈ ವಾಹನಗಳು ಮಾತ್ರ ಸಂಚಾರ ನಡೆಸಬಹುದಾಗಿದೆ.

ಸೋಮವಾರ ಮಧ್ಯರಾತ್ರಿಯಿಂದ ಜುಲೈ 10ರ ತನಕ ತುರ್ತು ವಾಹನಗಳನ್ನು ಬಿಟ್ಟು ಇತರ ಎಲ್ಲಾ ವಾಹನಗಳ ಸಂಚಾರವನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಈ ಮೂಲಕ ದ್ವೀಪ ರಾಷ್ಟ್ರದ ಆರ್ಥಿಕ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದೆ.
ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಿರುವ ಕಾರಣ ಶಾಲೆಗಳನ್ನು ಮುಚ್ಚಲಾಗಿದೆ. ಖಾಸಗಿ ಕಂಪನಿಗಳ ಸಿಬ್ಭಂದಿಗಳು ಮನೆಯಿಂದ ಕಾರ್ಯ ನಿರ್ವಹಣೆ ಮಾಡುವಂತೆ ಸೂಚನೆ ನೀಡಲಾಗಿದೆ.

ಇದೇ ಮೊದಲ ಬಾರಿಗೆ ದ್ವೀಪ ರಾಷ್ಟ್ರ ತೈಲ ಸಂಗ್ರಹ ಕೊರತೆ ಎದುರಿಸುತ್ತಿದೆ. ಸರ್ಕಾರಿ ಕಚೇರಿಗಳ ಸಿಬ್ಬಂದಿಗಳಿಗೆ ಸಹ ಮನೆಯಿಂದಲೇ ಕೆಲಸ ಮಾಡುವ ಅವಕಾಶ ಉಪಯೋಗಿಸಿಕೊಳ್ಳುವಂತೆ ನಿರ್ದೇಶನ ನೀಡಲಾಗಿದೆ.

ಶ್ರೀಲಂಕಾ ಕ್ರೆಡಿಟ್ ಲೈನ್ ಆಧಾರದಲ್ಲಿ ಭಾರತದಿಂದ ಹೊಸದಾಗಿ ಪೆಟ್ರೋಲ್ ಪೂರೈಕೆಗಾಗಿ ಎದುರು ನೋಡುತ್ತಿದೆ. ಮೂರು ದಿನಗಳಲ್ಲಿ ಪೆಟ್ರೋಲ್ ಲಭ್ಯವಾಗಲಿದೆ ಎಂದು ದೇಶದ ಜನರಿಗೆ ಭರವಸೆ ನೀಡಲಾಗಿತ್ತು.

ಮಿತಿ ಮೀರಿ ಬಾಕಿ ಉಳಿಸಿಕೊಂಡಿರುವ ಪರಿಣಾಮ ತೈಲ ಪೂರೈಕೆದಾರರು ಶ್ರೀಲಂಕಾಕ್ಕೆ ತೈಲ ಸರಬರಾಜು ಮಾಡಲು ಮುಂದೆ ಬರುತ್ತಿಲ್ಲ. ಆದ ಕಾರಣ ದೇಶದಲ್ಲಿ ಸಂಗ್ರಹವಿದ್ದ ಎಲ್ಲಾ ತೈಲ ಖಾಲಿಯಾಗಿದೆ.

ಭಾರತ ಸರ್ಕಾರ ಕ್ರೆಡಿಟ್ ಲೈನ್ ಆಧಾರದಲ್ಲಿ ಇದುವರೆಗೂ ಎರಡು ಬಾರಿ ಶ್ರೀಲಂಕಾಗೆ ತೈಲ ಸರಬರಾಜು ಮಾಡಿದೆ. ಆದರೂ ಸಹ ಶ್ರೀಲಂಕಾಗೆ ಅಗತ್ಯವಿರುಷ್ಟು ತೈಲ ಹೊಂದಿಕೆ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ.
Cash-strapped Sri Lanka suspended nationwide fuel sales, except for essential services, for nearly a fortnight as the island faces a rapidly worsening economic crisis.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm