ಬ್ರೇಕಿಂಗ್ ನ್ಯೂಸ್
28-06-22 05:34 pm HK News Desk ದೇಶ - ವಿದೇಶ
ಕೊಲಂಬೋ, ಜೂ 27: ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟಿರುವ ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ಹೊಸ ಸಮಸ್ಯೆ ಉಂಟಾಗಿದೆ.
ತೈಲ ಸಂಗ್ರಹ ಖಾಲಿಯಾಗಿದೆ, ವಾಹನ ಸಂಚಾರಕ್ಕೆ ಸರ್ಕಾರ ಹೊಸ ನಿಯಮಗಳನ್ನು ಘೋಷಣೆ ಮಾಡಿದೆ.
ಶ್ರೀಲಂಕಾದ ಆಡಳಿತ ಜುಲೈ 10ರ ತನಕ ತುರ್ತು ವಾಹನಗಳ ಸಂಚಾರಕ್ಕೆ ಮಾತ್ರ ಅನುಮತಿ ನೀಡಿದೆ. ಸೋಮವಾರ ಮಧ್ಯರಾತ್ರಿಯಿಂದಲೇ ಈ ನಿಯಮ ಜಾರಿಗೆ ಬರಲಿದೆ. ದೇಶದಲ್ಲಿನ ತೈಲ ಸಂಗ್ರಹ ಸಂಪೂರ್ಣ ಖಾಲಿಯಾಗಿದ್ದು, ದೇಶದ 22 ಮಿಲಿಯನ್ ಜನರಿಗೆ ಹೊಸ ಸಂಕಷ್ಟ ಎದುರಾಗಿದೆ.
ಸರ್ಕಾರದ ಆದೇಶದ ಪ್ರಕಾರ ತುರ್ತು ವಾಹನಗಳ ಪಟ್ಟಿಯಲ್ಲಿ ಆರೋಗ್ಯ, ಕಾನೂನು & ಸುವ್ಯವಸ್ಥೆ, ಬಂದರು, ವಿಮಾನ ನಿಲ್ದಾಣ, ಆಹಾರ ಸರಬರಾಜು ಮತ್ತು ಕೃಷಿ ಸಂಬಂಧಿತ ವಾಹನಗಳು ಮಾತ್ರ ಸೇರಿವೆ. ಈ ವಾಹನಗಳು ಮಾತ್ರ ಸಂಚಾರ ನಡೆಸಬಹುದಾಗಿದೆ.
ಸೋಮವಾರ ಮಧ್ಯರಾತ್ರಿಯಿಂದ ಜುಲೈ 10ರ ತನಕ ತುರ್ತು ವಾಹನಗಳನ್ನು ಬಿಟ್ಟು ಇತರ ಎಲ್ಲಾ ವಾಹನಗಳ ಸಂಚಾರವನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಈ ಮೂಲಕ ದ್ವೀಪ ರಾಷ್ಟ್ರದ ಆರ್ಥಿಕ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದೆ.
ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಿರುವ ಕಾರಣ ಶಾಲೆಗಳನ್ನು ಮುಚ್ಚಲಾಗಿದೆ. ಖಾಸಗಿ ಕಂಪನಿಗಳ ಸಿಬ್ಭಂದಿಗಳು ಮನೆಯಿಂದ ಕಾರ್ಯ ನಿರ್ವಹಣೆ ಮಾಡುವಂತೆ ಸೂಚನೆ ನೀಡಲಾಗಿದೆ.
ಇದೇ ಮೊದಲ ಬಾರಿಗೆ ದ್ವೀಪ ರಾಷ್ಟ್ರ ತೈಲ ಸಂಗ್ರಹ ಕೊರತೆ ಎದುರಿಸುತ್ತಿದೆ. ಸರ್ಕಾರಿ ಕಚೇರಿಗಳ ಸಿಬ್ಬಂದಿಗಳಿಗೆ ಸಹ ಮನೆಯಿಂದಲೇ ಕೆಲಸ ಮಾಡುವ ಅವಕಾಶ ಉಪಯೋಗಿಸಿಕೊಳ್ಳುವಂತೆ ನಿರ್ದೇಶನ ನೀಡಲಾಗಿದೆ.
ಶ್ರೀಲಂಕಾ ಕ್ರೆಡಿಟ್ ಲೈನ್ ಆಧಾರದಲ್ಲಿ ಭಾರತದಿಂದ ಹೊಸದಾಗಿ ಪೆಟ್ರೋಲ್ ಪೂರೈಕೆಗಾಗಿ ಎದುರು ನೋಡುತ್ತಿದೆ. ಮೂರು ದಿನಗಳಲ್ಲಿ ಪೆಟ್ರೋಲ್ ಲಭ್ಯವಾಗಲಿದೆ ಎಂದು ದೇಶದ ಜನರಿಗೆ ಭರವಸೆ ನೀಡಲಾಗಿತ್ತು.
ಮಿತಿ ಮೀರಿ ಬಾಕಿ ಉಳಿಸಿಕೊಂಡಿರುವ ಪರಿಣಾಮ ತೈಲ ಪೂರೈಕೆದಾರರು ಶ್ರೀಲಂಕಾಕ್ಕೆ ತೈಲ ಸರಬರಾಜು ಮಾಡಲು ಮುಂದೆ ಬರುತ್ತಿಲ್ಲ. ಆದ ಕಾರಣ ದೇಶದಲ್ಲಿ ಸಂಗ್ರಹವಿದ್ದ ಎಲ್ಲಾ ತೈಲ ಖಾಲಿಯಾಗಿದೆ.
ಭಾರತ ಸರ್ಕಾರ ಕ್ರೆಡಿಟ್ ಲೈನ್ ಆಧಾರದಲ್ಲಿ ಇದುವರೆಗೂ ಎರಡು ಬಾರಿ ಶ್ರೀಲಂಕಾಗೆ ತೈಲ ಸರಬರಾಜು ಮಾಡಿದೆ. ಆದರೂ ಸಹ ಶ್ರೀಲಂಕಾಗೆ ಅಗತ್ಯವಿರುಷ್ಟು ತೈಲ ಹೊಂದಿಕೆ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ.
Cash-strapped Sri Lanka suspended nationwide fuel sales, except for essential services, for nearly a fortnight as the island faces a rapidly worsening economic crisis.
11-10-25 11:03 pm
Bangalore Correspondent
ಮೂವರು ಮಕ್ಕಳ ಮಮ್ಮಿಗೆ ಇನ್ನೊಬ್ಬನ ಜೊತೆ ಲವ್ವಿ ಡವ್ವ...
11-10-25 10:05 am
ಮುಂದಿನ ದಿನಗಳಲ್ಲಿ ಹಾಸನಾಂಬೆ ಸಾನಿಧ್ಯವೇ ಇರುವುದಿಲ್...
10-10-25 07:06 pm
'ನವೆಂಬರ್ ಕ್ರಾಂತಿ' ಗುಮ್ಮದ ನಡುವೆಯೇ ಸಂಪುಟ ಸರ್ಜರಿ...
10-10-25 12:06 pm
ಟೀಕೆ ಬೆನ್ನಲ್ಲೇ ಬಿಗ್ ಬಾಸ್ ಮನೆ ಓಪನ್ ಮಾಡಿಸಿದ ಡಿಕ...
09-10-25 12:57 pm
11-10-25 12:52 pm
HK News Desk
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
11-10-25 10:24 pm
Mangalore Correspondent
Malayalam actor Jayakrishnan Arrest, Mangalor...
11-10-25 07:18 pm
Karkala Suicide Case, Abishek Death Note: ನನ್...
11-10-25 05:52 pm
Muslim Terrorist, Mangalore, Jayakrishnan Ker...
11-10-25 11:11 am
ಮುಡಾ ಲೇಔಟ್ ; ಕುಂಜತ್ತ್ ಬೈಲಿನಲ್ಲಿ ಅವೈಜ್ಞಾನಿಕ ರೀ...
10-10-25 06:52 pm
10-10-25 09:48 pm
Udupi Correspondent
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm