ಬ್ರೇಕಿಂಗ್ ನ್ಯೂಸ್
29-06-22 10:25 pm HK News Desk ದೇಶ - ವಿದೇಶ
ಮುಂಬೈ, ಜೂನ್ 29: ಅಂತೂ ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ ಸರಕಾರ ಪತನಗೊಂಡಿದೆ. ವಿಶ್ವಾಸ ಮತ ಸಾಬೀತು ಪಡಿಸುವ ರಾಜ್ಯಪಾಲರ ಸೂಚನೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸುತ್ತಿದ್ದಂತೆಯೇ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಜೂನ್ 30ರಂದು ವಿಶ್ವಾಸ ಮತ ಸಾಬೀತು ಮಾಡುವಂತೆ ರಾಜ್ಯಪಾಲರು ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಸೂಚಿಸಿದ್ದರು. ಆದರೆ, ರಾಜ್ಯಪಾಲರ ಈ ನಡೆಗೆ ಶಿವಸೇನೆ ಮುಖಂಡ ಸಂಜಯ ರಾವುತ್, ಸಿಎಂ ಠಾಕ್ರೆ ಸೇರಿದಂತೆ ಹಲವರು ವಿರೋಧ ವ್ಯಕ್ತಪಡಿಸಿದ್ದರು. ಸುಪ್ರೀಂ ಕೋರ್ಟ್ನಲ್ಲಿ ಈ ಬಗ್ಗೆ ಪ್ರಶ್ನಿಸುವುದಾಗಿ ಹೇಳಿದ್ದರು. ಅದರಂತೆ, ಇಂದು ಇಡೀ ದಿನ ಸುಪ್ರೀಂ ಕೋರ್ಟಿನಲ್ಲಿ ಹಿರಿಯ ವಕೀಲರಿಂದ ಜಟಾಪಟಿ ನಡೆದಿತ್ತು. ರಾತ್ರಿಯೇ ತೀರ್ಪು ನೀಡುವುದಾಗಿ ಸುಪ್ರೀ ಕೋರ್ಟ್ ಹೇಳಿದ್ದರಿಂದ ಕುತೂಹಲ ಉಂಟಾಗಿತ್ತು.

ಇದೀಗ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಪರ- ವಿರೋಧ ವಕೀಲರ ವಾದ ಆಲಿಸಿದ ಬಳಿಕ ರಾಜ್ಯಪಾಲರ ನಡೆಗೆ ತಡೆಯಾಜ್ಞೆ ನೀಡಲು ನಿರಾಕರಿಸಿದ್ದಾರೆ. ಶಿವಸೇನೆಯ 40ಕ್ಕೂ ಹೆಚ್ಚು ಶಾಸಕರು ಏಕನಾಥ ಶಿಂಧೆ ನೇತೃತ್ವದಲ್ಲಿ ಬಂಡಾಯ ಎದ್ದಿರುವುದರಿಂದ ಠಾಕ್ರೆ ಸರಕಾರ ಬಹುಮತ ಕಳಕೊಂಡಿತ್ತು. ವಾರ ಕಾಲ ಗುವಾಹಟಿಯಲ್ಲಿ ಬಂಡಾಯ ಶಾಸಕರು ಬೀಡು ಬಿಟ್ಟಿದ್ದರು. ಕಾಂಗ್ರೆಸ್, ಎನ್ ಸಿಪಿ ಜೊತೆಗಿನ ಮೈತ್ರಿಯಿಂದ ಹಿಂದೆ ಸರಿಯುವ ಸೂಚನೆ ನೀಡಿದ್ದರು. ಇದೀಗ ಠಾಕ್ರೆ ರಾಜಿನಾಮೆ ನೀಡಿರುವುದರಿಂದ

ಶಿವಸೇನೆಯ ಬಂಡಾಯ ಶಾಸಕರು ಬಿಜೆಪಿ ಜೊತೆ ಸೇರಿ ಹೊಸ ಸರಕಾರ ಸ್ಥಾಪನೆ ಮಾಡಲಿದ್ದಾರೆ. ಬಂಡಾಯ ಶಾಸಕರ ಜೊತೆ ಶಿವಸೇನೆಯ ಎಂಟು ಮಂದಿ ಸಚಿವರೂ ಸೇರಿಕೊಂಡಿದ್ದರು. ಉದ್ಧವ್ ಠಾಕ್ರೆ ಮತ್ತು ಅವರ ಮಗ ಆದಿತ್ಯ ಠಾಕ್ರೆ ಮಾತ್ರ ಉಳಿದುಕೊಂಡಿದ್ದರು. ಏನೇ ಮನವಿ ಮಾಡಿಕೊಂಡರೂ, ಬಂಡಾಯ ಶಾಸಕರು ಪಟ್ಟು ಸಡಿಲ ಮಾಡದೇ ಇದ್ದುದರಿಂದ ಸರಕಾರ ಅಂತೂ ಪತನಗೊಂಡಿದೆ.
Uddhav Thackeray resigned as Maharashtra Chief Minister on Wednesday, June 29. Uddhav Thackeray’s announcement followed soon after the Supreme Court rejected MVA government’s plea seeking a stay on floor test in the Maharashtra Assembly.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm