ಬ್ರೇಕಿಂಗ್ ನ್ಯೂಸ್
29-06-22 10:25 pm HK News Desk ದೇಶ - ವಿದೇಶ
ಮುಂಬೈ, ಜೂನ್ 29: ಅಂತೂ ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ ಸರಕಾರ ಪತನಗೊಂಡಿದೆ. ವಿಶ್ವಾಸ ಮತ ಸಾಬೀತು ಪಡಿಸುವ ರಾಜ್ಯಪಾಲರ ಸೂಚನೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸುತ್ತಿದ್ದಂತೆಯೇ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಜೂನ್ 30ರಂದು ವಿಶ್ವಾಸ ಮತ ಸಾಬೀತು ಮಾಡುವಂತೆ ರಾಜ್ಯಪಾಲರು ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಸೂಚಿಸಿದ್ದರು. ಆದರೆ, ರಾಜ್ಯಪಾಲರ ಈ ನಡೆಗೆ ಶಿವಸೇನೆ ಮುಖಂಡ ಸಂಜಯ ರಾವುತ್, ಸಿಎಂ ಠಾಕ್ರೆ ಸೇರಿದಂತೆ ಹಲವರು ವಿರೋಧ ವ್ಯಕ್ತಪಡಿಸಿದ್ದರು. ಸುಪ್ರೀಂ ಕೋರ್ಟ್ನಲ್ಲಿ ಈ ಬಗ್ಗೆ ಪ್ರಶ್ನಿಸುವುದಾಗಿ ಹೇಳಿದ್ದರು. ಅದರಂತೆ, ಇಂದು ಇಡೀ ದಿನ ಸುಪ್ರೀಂ ಕೋರ್ಟಿನಲ್ಲಿ ಹಿರಿಯ ವಕೀಲರಿಂದ ಜಟಾಪಟಿ ನಡೆದಿತ್ತು. ರಾತ್ರಿಯೇ ತೀರ್ಪು ನೀಡುವುದಾಗಿ ಸುಪ್ರೀ ಕೋರ್ಟ್ ಹೇಳಿದ್ದರಿಂದ ಕುತೂಹಲ ಉಂಟಾಗಿತ್ತು.

ಇದೀಗ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಪರ- ವಿರೋಧ ವಕೀಲರ ವಾದ ಆಲಿಸಿದ ಬಳಿಕ ರಾಜ್ಯಪಾಲರ ನಡೆಗೆ ತಡೆಯಾಜ್ಞೆ ನೀಡಲು ನಿರಾಕರಿಸಿದ್ದಾರೆ. ಶಿವಸೇನೆಯ 40ಕ್ಕೂ ಹೆಚ್ಚು ಶಾಸಕರು ಏಕನಾಥ ಶಿಂಧೆ ನೇತೃತ್ವದಲ್ಲಿ ಬಂಡಾಯ ಎದ್ದಿರುವುದರಿಂದ ಠಾಕ್ರೆ ಸರಕಾರ ಬಹುಮತ ಕಳಕೊಂಡಿತ್ತು. ವಾರ ಕಾಲ ಗುವಾಹಟಿಯಲ್ಲಿ ಬಂಡಾಯ ಶಾಸಕರು ಬೀಡು ಬಿಟ್ಟಿದ್ದರು. ಕಾಂಗ್ರೆಸ್, ಎನ್ ಸಿಪಿ ಜೊತೆಗಿನ ಮೈತ್ರಿಯಿಂದ ಹಿಂದೆ ಸರಿಯುವ ಸೂಚನೆ ನೀಡಿದ್ದರು. ಇದೀಗ ಠಾಕ್ರೆ ರಾಜಿನಾಮೆ ನೀಡಿರುವುದರಿಂದ

ಶಿವಸೇನೆಯ ಬಂಡಾಯ ಶಾಸಕರು ಬಿಜೆಪಿ ಜೊತೆ ಸೇರಿ ಹೊಸ ಸರಕಾರ ಸ್ಥಾಪನೆ ಮಾಡಲಿದ್ದಾರೆ. ಬಂಡಾಯ ಶಾಸಕರ ಜೊತೆ ಶಿವಸೇನೆಯ ಎಂಟು ಮಂದಿ ಸಚಿವರೂ ಸೇರಿಕೊಂಡಿದ್ದರು. ಉದ್ಧವ್ ಠಾಕ್ರೆ ಮತ್ತು ಅವರ ಮಗ ಆದಿತ್ಯ ಠಾಕ್ರೆ ಮಾತ್ರ ಉಳಿದುಕೊಂಡಿದ್ದರು. ಏನೇ ಮನವಿ ಮಾಡಿಕೊಂಡರೂ, ಬಂಡಾಯ ಶಾಸಕರು ಪಟ್ಟು ಸಡಿಲ ಮಾಡದೇ ಇದ್ದುದರಿಂದ ಸರಕಾರ ಅಂತೂ ಪತನಗೊಂಡಿದೆ.
Uddhav Thackeray resigned as Maharashtra Chief Minister on Wednesday, June 29. Uddhav Thackeray’s announcement followed soon after the Supreme Court rejected MVA government’s plea seeking a stay on floor test in the Maharashtra Assembly.
16-01-26 04:35 pm
HK News Desk
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm