ಬ್ರೇಕಿಂಗ್ ನ್ಯೂಸ್
29-06-22 10:25 pm HK News Desk ದೇಶ - ವಿದೇಶ
ಮುಂಬೈ, ಜೂನ್ 29: ಅಂತೂ ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ ಸರಕಾರ ಪತನಗೊಂಡಿದೆ. ವಿಶ್ವಾಸ ಮತ ಸಾಬೀತು ಪಡಿಸುವ ರಾಜ್ಯಪಾಲರ ಸೂಚನೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸುತ್ತಿದ್ದಂತೆಯೇ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಜೂನ್ 30ರಂದು ವಿಶ್ವಾಸ ಮತ ಸಾಬೀತು ಮಾಡುವಂತೆ ರಾಜ್ಯಪಾಲರು ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಸೂಚಿಸಿದ್ದರು. ಆದರೆ, ರಾಜ್ಯಪಾಲರ ಈ ನಡೆಗೆ ಶಿವಸೇನೆ ಮುಖಂಡ ಸಂಜಯ ರಾವುತ್, ಸಿಎಂ ಠಾಕ್ರೆ ಸೇರಿದಂತೆ ಹಲವರು ವಿರೋಧ ವ್ಯಕ್ತಪಡಿಸಿದ್ದರು. ಸುಪ್ರೀಂ ಕೋರ್ಟ್ನಲ್ಲಿ ಈ ಬಗ್ಗೆ ಪ್ರಶ್ನಿಸುವುದಾಗಿ ಹೇಳಿದ್ದರು. ಅದರಂತೆ, ಇಂದು ಇಡೀ ದಿನ ಸುಪ್ರೀಂ ಕೋರ್ಟಿನಲ್ಲಿ ಹಿರಿಯ ವಕೀಲರಿಂದ ಜಟಾಪಟಿ ನಡೆದಿತ್ತು. ರಾತ್ರಿಯೇ ತೀರ್ಪು ನೀಡುವುದಾಗಿ ಸುಪ್ರೀ ಕೋರ್ಟ್ ಹೇಳಿದ್ದರಿಂದ ಕುತೂಹಲ ಉಂಟಾಗಿತ್ತು.
ಇದೀಗ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಪರ- ವಿರೋಧ ವಕೀಲರ ವಾದ ಆಲಿಸಿದ ಬಳಿಕ ರಾಜ್ಯಪಾಲರ ನಡೆಗೆ ತಡೆಯಾಜ್ಞೆ ನೀಡಲು ನಿರಾಕರಿಸಿದ್ದಾರೆ. ಶಿವಸೇನೆಯ 40ಕ್ಕೂ ಹೆಚ್ಚು ಶಾಸಕರು ಏಕನಾಥ ಶಿಂಧೆ ನೇತೃತ್ವದಲ್ಲಿ ಬಂಡಾಯ ಎದ್ದಿರುವುದರಿಂದ ಠಾಕ್ರೆ ಸರಕಾರ ಬಹುಮತ ಕಳಕೊಂಡಿತ್ತು. ವಾರ ಕಾಲ ಗುವಾಹಟಿಯಲ್ಲಿ ಬಂಡಾಯ ಶಾಸಕರು ಬೀಡು ಬಿಟ್ಟಿದ್ದರು. ಕಾಂಗ್ರೆಸ್, ಎನ್ ಸಿಪಿ ಜೊತೆಗಿನ ಮೈತ್ರಿಯಿಂದ ಹಿಂದೆ ಸರಿಯುವ ಸೂಚನೆ ನೀಡಿದ್ದರು. ಇದೀಗ ಠಾಕ್ರೆ ರಾಜಿನಾಮೆ ನೀಡಿರುವುದರಿಂದ
ಶಿವಸೇನೆಯ ಬಂಡಾಯ ಶಾಸಕರು ಬಿಜೆಪಿ ಜೊತೆ ಸೇರಿ ಹೊಸ ಸರಕಾರ ಸ್ಥಾಪನೆ ಮಾಡಲಿದ್ದಾರೆ. ಬಂಡಾಯ ಶಾಸಕರ ಜೊತೆ ಶಿವಸೇನೆಯ ಎಂಟು ಮಂದಿ ಸಚಿವರೂ ಸೇರಿಕೊಂಡಿದ್ದರು. ಉದ್ಧವ್ ಠಾಕ್ರೆ ಮತ್ತು ಅವರ ಮಗ ಆದಿತ್ಯ ಠಾಕ್ರೆ ಮಾತ್ರ ಉಳಿದುಕೊಂಡಿದ್ದರು. ಏನೇ ಮನವಿ ಮಾಡಿಕೊಂಡರೂ, ಬಂಡಾಯ ಶಾಸಕರು ಪಟ್ಟು ಸಡಿಲ ಮಾಡದೇ ಇದ್ದುದರಿಂದ ಸರಕಾರ ಅಂತೂ ಪತನಗೊಂಡಿದೆ.
Uddhav Thackeray resigned as Maharashtra Chief Minister on Wednesday, June 29. Uddhav Thackeray’s announcement followed soon after the Supreme Court rejected MVA government’s plea seeking a stay on floor test in the Maharashtra Assembly.
20-08-25 12:33 pm
Bangalore Correspondent
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
20-08-25 06:40 pm
HK News Desk
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
20-08-25 04:28 pm
Mangalore Correspondent
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
ಧರ್ಮಸ್ಥಳ ಪ್ರಕರಣ ನೆಪದಲ್ಲಿ ಬಿಎಲ್ ಸಂತೋಷ್ ಅವಹೇಳನ...
19-08-25 11:07 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm