ಬ್ರೇಕಿಂಗ್ ನ್ಯೂಸ್
29-06-22 10:25 pm HK News Desk ದೇಶ - ವಿದೇಶ
ಮುಂಬೈ, ಜೂನ್ 29: ಅಂತೂ ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ ಸರಕಾರ ಪತನಗೊಂಡಿದೆ. ವಿಶ್ವಾಸ ಮತ ಸಾಬೀತು ಪಡಿಸುವ ರಾಜ್ಯಪಾಲರ ಸೂಚನೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸುತ್ತಿದ್ದಂತೆಯೇ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಜೂನ್ 30ರಂದು ವಿಶ್ವಾಸ ಮತ ಸಾಬೀತು ಮಾಡುವಂತೆ ರಾಜ್ಯಪಾಲರು ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಸೂಚಿಸಿದ್ದರು. ಆದರೆ, ರಾಜ್ಯಪಾಲರ ಈ ನಡೆಗೆ ಶಿವಸೇನೆ ಮುಖಂಡ ಸಂಜಯ ರಾವುತ್, ಸಿಎಂ ಠಾಕ್ರೆ ಸೇರಿದಂತೆ ಹಲವರು ವಿರೋಧ ವ್ಯಕ್ತಪಡಿಸಿದ್ದರು. ಸುಪ್ರೀಂ ಕೋರ್ಟ್ನಲ್ಲಿ ಈ ಬಗ್ಗೆ ಪ್ರಶ್ನಿಸುವುದಾಗಿ ಹೇಳಿದ್ದರು. ಅದರಂತೆ, ಇಂದು ಇಡೀ ದಿನ ಸುಪ್ರೀಂ ಕೋರ್ಟಿನಲ್ಲಿ ಹಿರಿಯ ವಕೀಲರಿಂದ ಜಟಾಪಟಿ ನಡೆದಿತ್ತು. ರಾತ್ರಿಯೇ ತೀರ್ಪು ನೀಡುವುದಾಗಿ ಸುಪ್ರೀ ಕೋರ್ಟ್ ಹೇಳಿದ್ದರಿಂದ ಕುತೂಹಲ ಉಂಟಾಗಿತ್ತು.
ಇದೀಗ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಪರ- ವಿರೋಧ ವಕೀಲರ ವಾದ ಆಲಿಸಿದ ಬಳಿಕ ರಾಜ್ಯಪಾಲರ ನಡೆಗೆ ತಡೆಯಾಜ್ಞೆ ನೀಡಲು ನಿರಾಕರಿಸಿದ್ದಾರೆ. ಶಿವಸೇನೆಯ 40ಕ್ಕೂ ಹೆಚ್ಚು ಶಾಸಕರು ಏಕನಾಥ ಶಿಂಧೆ ನೇತೃತ್ವದಲ್ಲಿ ಬಂಡಾಯ ಎದ್ದಿರುವುದರಿಂದ ಠಾಕ್ರೆ ಸರಕಾರ ಬಹುಮತ ಕಳಕೊಂಡಿತ್ತು. ವಾರ ಕಾಲ ಗುವಾಹಟಿಯಲ್ಲಿ ಬಂಡಾಯ ಶಾಸಕರು ಬೀಡು ಬಿಟ್ಟಿದ್ದರು. ಕಾಂಗ್ರೆಸ್, ಎನ್ ಸಿಪಿ ಜೊತೆಗಿನ ಮೈತ್ರಿಯಿಂದ ಹಿಂದೆ ಸರಿಯುವ ಸೂಚನೆ ನೀಡಿದ್ದರು. ಇದೀಗ ಠಾಕ್ರೆ ರಾಜಿನಾಮೆ ನೀಡಿರುವುದರಿಂದ
ಶಿವಸೇನೆಯ ಬಂಡಾಯ ಶಾಸಕರು ಬಿಜೆಪಿ ಜೊತೆ ಸೇರಿ ಹೊಸ ಸರಕಾರ ಸ್ಥಾಪನೆ ಮಾಡಲಿದ್ದಾರೆ. ಬಂಡಾಯ ಶಾಸಕರ ಜೊತೆ ಶಿವಸೇನೆಯ ಎಂಟು ಮಂದಿ ಸಚಿವರೂ ಸೇರಿಕೊಂಡಿದ್ದರು. ಉದ್ಧವ್ ಠಾಕ್ರೆ ಮತ್ತು ಅವರ ಮಗ ಆದಿತ್ಯ ಠಾಕ್ರೆ ಮಾತ್ರ ಉಳಿದುಕೊಂಡಿದ್ದರು. ಏನೇ ಮನವಿ ಮಾಡಿಕೊಂಡರೂ, ಬಂಡಾಯ ಶಾಸಕರು ಪಟ್ಟು ಸಡಿಲ ಮಾಡದೇ ಇದ್ದುದರಿಂದ ಸರಕಾರ ಅಂತೂ ಪತನಗೊಂಡಿದೆ.
Uddhav Thackeray resigned as Maharashtra Chief Minister on Wednesday, June 29. Uddhav Thackeray’s announcement followed soon after the Supreme Court rejected MVA government’s plea seeking a stay on floor test in the Maharashtra Assembly.
11-10-25 11:03 pm
Bangalore Correspondent
ಮೂವರು ಮಕ್ಕಳ ಮಮ್ಮಿಗೆ ಇನ್ನೊಬ್ಬನ ಜೊತೆ ಲವ್ವಿ ಡವ್ವ...
11-10-25 10:05 am
ಮುಂದಿನ ದಿನಗಳಲ್ಲಿ ಹಾಸನಾಂಬೆ ಸಾನಿಧ್ಯವೇ ಇರುವುದಿಲ್...
10-10-25 07:06 pm
'ನವೆಂಬರ್ ಕ್ರಾಂತಿ' ಗುಮ್ಮದ ನಡುವೆಯೇ ಸಂಪುಟ ಸರ್ಜರಿ...
10-10-25 12:06 pm
ಟೀಕೆ ಬೆನ್ನಲ್ಲೇ ಬಿಗ್ ಬಾಸ್ ಮನೆ ಓಪನ್ ಮಾಡಿಸಿದ ಡಿಕ...
09-10-25 12:57 pm
11-10-25 12:52 pm
HK News Desk
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
11-10-25 10:24 pm
Mangalore Correspondent
Malayalam actor Jayakrishnan Arrest, Mangalor...
11-10-25 07:18 pm
Karkala Suicide Case, Abishek Death Note: ನನ್...
11-10-25 05:52 pm
Muslim Terrorist, Mangalore, Jayakrishnan Ker...
11-10-25 11:11 am
ಮುಡಾ ಲೇಔಟ್ ; ಕುಂಜತ್ತ್ ಬೈಲಿನಲ್ಲಿ ಅವೈಜ್ಞಾನಿಕ ರೀ...
10-10-25 06:52 pm
10-10-25 09:48 pm
Udupi Correspondent
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm