ಬ್ರೇಕಿಂಗ್ ನ್ಯೂಸ್
29-06-22 10:25 pm HK News Desk ದೇಶ - ವಿದೇಶ
ಮುಂಬೈ, ಜೂನ್ 29: ಅಂತೂ ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ ಸರಕಾರ ಪತನಗೊಂಡಿದೆ. ವಿಶ್ವಾಸ ಮತ ಸಾಬೀತು ಪಡಿಸುವ ರಾಜ್ಯಪಾಲರ ಸೂಚನೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸುತ್ತಿದ್ದಂತೆಯೇ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಜೂನ್ 30ರಂದು ವಿಶ್ವಾಸ ಮತ ಸಾಬೀತು ಮಾಡುವಂತೆ ರಾಜ್ಯಪಾಲರು ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಸೂಚಿಸಿದ್ದರು. ಆದರೆ, ರಾಜ್ಯಪಾಲರ ಈ ನಡೆಗೆ ಶಿವಸೇನೆ ಮುಖಂಡ ಸಂಜಯ ರಾವುತ್, ಸಿಎಂ ಠಾಕ್ರೆ ಸೇರಿದಂತೆ ಹಲವರು ವಿರೋಧ ವ್ಯಕ್ತಪಡಿಸಿದ್ದರು. ಸುಪ್ರೀಂ ಕೋರ್ಟ್ನಲ್ಲಿ ಈ ಬಗ್ಗೆ ಪ್ರಶ್ನಿಸುವುದಾಗಿ ಹೇಳಿದ್ದರು. ಅದರಂತೆ, ಇಂದು ಇಡೀ ದಿನ ಸುಪ್ರೀಂ ಕೋರ್ಟಿನಲ್ಲಿ ಹಿರಿಯ ವಕೀಲರಿಂದ ಜಟಾಪಟಿ ನಡೆದಿತ್ತು. ರಾತ್ರಿಯೇ ತೀರ್ಪು ನೀಡುವುದಾಗಿ ಸುಪ್ರೀ ಕೋರ್ಟ್ ಹೇಳಿದ್ದರಿಂದ ಕುತೂಹಲ ಉಂಟಾಗಿತ್ತು.

ಇದೀಗ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಪರ- ವಿರೋಧ ವಕೀಲರ ವಾದ ಆಲಿಸಿದ ಬಳಿಕ ರಾಜ್ಯಪಾಲರ ನಡೆಗೆ ತಡೆಯಾಜ್ಞೆ ನೀಡಲು ನಿರಾಕರಿಸಿದ್ದಾರೆ. ಶಿವಸೇನೆಯ 40ಕ್ಕೂ ಹೆಚ್ಚು ಶಾಸಕರು ಏಕನಾಥ ಶಿಂಧೆ ನೇತೃತ್ವದಲ್ಲಿ ಬಂಡಾಯ ಎದ್ದಿರುವುದರಿಂದ ಠಾಕ್ರೆ ಸರಕಾರ ಬಹುಮತ ಕಳಕೊಂಡಿತ್ತು. ವಾರ ಕಾಲ ಗುವಾಹಟಿಯಲ್ಲಿ ಬಂಡಾಯ ಶಾಸಕರು ಬೀಡು ಬಿಟ್ಟಿದ್ದರು. ಕಾಂಗ್ರೆಸ್, ಎನ್ ಸಿಪಿ ಜೊತೆಗಿನ ಮೈತ್ರಿಯಿಂದ ಹಿಂದೆ ಸರಿಯುವ ಸೂಚನೆ ನೀಡಿದ್ದರು. ಇದೀಗ ಠಾಕ್ರೆ ರಾಜಿನಾಮೆ ನೀಡಿರುವುದರಿಂದ

ಶಿವಸೇನೆಯ ಬಂಡಾಯ ಶಾಸಕರು ಬಿಜೆಪಿ ಜೊತೆ ಸೇರಿ ಹೊಸ ಸರಕಾರ ಸ್ಥಾಪನೆ ಮಾಡಲಿದ್ದಾರೆ. ಬಂಡಾಯ ಶಾಸಕರ ಜೊತೆ ಶಿವಸೇನೆಯ ಎಂಟು ಮಂದಿ ಸಚಿವರೂ ಸೇರಿಕೊಂಡಿದ್ದರು. ಉದ್ಧವ್ ಠಾಕ್ರೆ ಮತ್ತು ಅವರ ಮಗ ಆದಿತ್ಯ ಠಾಕ್ರೆ ಮಾತ್ರ ಉಳಿದುಕೊಂಡಿದ್ದರು. ಏನೇ ಮನವಿ ಮಾಡಿಕೊಂಡರೂ, ಬಂಡಾಯ ಶಾಸಕರು ಪಟ್ಟು ಸಡಿಲ ಮಾಡದೇ ಇದ್ದುದರಿಂದ ಸರಕಾರ ಅಂತೂ ಪತನಗೊಂಡಿದೆ.
Uddhav Thackeray resigned as Maharashtra Chief Minister on Wednesday, June 29. Uddhav Thackeray’s announcement followed soon after the Supreme Court rejected MVA government’s plea seeking a stay on floor test in the Maharashtra Assembly.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm