ಬ್ರೇಕಿಂಗ್ ನ್ಯೂಸ್
03-07-22 10:07 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 3: ಉದಯಪುರದಲ್ಲಿ ಇಸ್ಲಾಮಿಕ್ ಮೂಲಭೂತವಾದಿಗಳಿಂದ ಕೊಲೆಯಾದ ಕನ್ನಯ್ಯಲಾಲ್ ಕುಟುಂಬಕ್ಕೆ ಭಾರೀ ಪ್ರಮಾಣದಲ್ಲಿ ದೇಣಿಗೆ ಹರಿದು ಬಂದಿದೆ. 14 ಸಾವಿರಕ್ಕೂ ಹೆಚ್ಚು ದಾನಿಗಳು ಈವರೆಗೆ 1.70 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ ಎಂದು ಬಿಜೆಪಿ ನಾಯಕ ಕಪಿಲ್ ಮಿಶ್ರಾ ಮಾಹಿತಿ ನೀಡಿದ್ದಾರೆ.
ಈ ಪೈಕಿ ಒಂದು ಕೋಟಿ ರೂಪಾಯಿ ಮೊತ್ತವನ್ನು ಕನ್ನಯ್ಯ ಲಾಲ್ ಕುಟುಂಬಕ್ಕೆ ನೀಡಲಾಗುವುದು. ಕುಟುಂಬದ ಆಧಾರಸ್ತಂಭ ಕಳಕೊಂಡಿರುವುದರಿಂದ ಹಣಕ್ಕೆ ಸಮಸ್ಯೆ ಬರಬಾರದು. ಸಾವಿರಾರು ಮಂದಿ ದೇಣಿಗೆ ನೀಡಿದ್ದಾರೆ. ನಾವು ಒಂದು ಕೋಟಿ ಸಂಗ್ರಹಿಸುವ ಉದ್ದೇಶ ಇರಿಸಿಕೊಂಡಿದ್ದೆವು. ನಿರೀಕ್ಷೆಗೂ ಮೀರಿ ಪ್ರತಿಕ್ರಿಯೆ ಬಂದಿದ್ದು 14,416 ಮಂದಿ 1.70 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ ಎಂದು ಕಪಿಲ್ ಮಿಶ್ರಾ ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ.

ನಾವು ಕನ್ನಯ್ಯಲಾಲ್ ಅವರನ್ನು ಮರಳಿ ತರಲು ಸಾಧ್ಯವಿಲ್ಲ. ಆದರೆ ಅವರ ಕುಟುಂಬ ಹಣ ಇಲ್ಲದೆ ಕಷ್ಟಕ್ಕೆ ಒಳಗಾಗಬಾರದು. ಮಕ್ಕಳ ಶಿಕ್ಷಣ, ಮನೆಯ ಬ್ಯಾಂಕ್ ಸಾಲ ಕಟ್ಟಲು ತೊಂದರೆ ಆಗಬಾರದೆಂದು ಫಂಡ್ ರೈಸ್ ಮಾಡಿದ್ದೇವೆ. ಈ ಪೈಕಿ ಒಂದು ಕೋಟಿ ಆ ಕುಟುಂಬಕ್ಕೆ ನೀಡಲಿದ್ದು, ಉಳಿದವನ್ನು ಉಮೇಶ್ ಕೊಲ್ಹೆ ಮತ್ತು ಈ ಸಂದರ್ಭದಲ್ಲಿ ಗಾಯಗೊಂಡವರ ಕುಟುಂಬಗಳಿಗೆ ನೀಡಲಾಗುವುದು ಎಂದು ಕಪಿಲ್ ಮಿಶ್ರಾ ತಿಳಿಸಿದ್ದಾರೆ.
ಕನ್ನಯ್ಯ ಲಾಲ್ ಕೊಲೆಯ ಸಂದರ್ಭದಲ್ಲಿ ಪಾರು ಮಾಡಲು ಯತ್ನಿಸಿದ ಈಶ್ವರ್ ಸಿಂಗ್ ಕುಟುಂಬಕ್ಕೆ 25 ಲಕ್ಷ ನೀಡಲಾಗುವುದು. 30 ಲಕ್ಷವನ್ನು ಮಹಾರಾಷ್ಟ್ರದ ಅಮರಾವತಿಯಲ್ಲಿ ಕೊಲೆಯಾದ ಉಮೇಶ್ ಕೊಲ್ಹೆ ಕುಟುಂಬಕ್ಕೆ ನೀಡಲಿದ್ದೇವೆ. ಇನ್ನು ಹತ್ತು ದಿನಗಳಲ್ಲಿ ಕುಟುಂಬಗಳ ಬ್ಯಾಂಕ್ ಖಾತೆಯನ್ನು ಪಡೆದು ಹಣವನ್ನು ಹಸ್ತಾಂತರ ಮಾಡಲಾಗುವುದು ಎಂದು ಕಪಿಲ್ ಮಿಶ್ರಾ ಹೇಳಿದ್ದಾರೆ. ರಾಜಸ್ಥಾನದಲ್ಲಿ ಉದ್ರಿಕ್ತರ ಗುಂಪನ್ನು ಚದುರಿಸುವ ಸಂದರ್ಭದಲ್ಲಿ ಪೊಲೀಸ್ ಸಿಬಂದಿ ಸಂದೀಪ್ ಮೇಲೆ ಹಲ್ಲೆ ನಡೆಸಲಾಗಿತ್ತು. ಆತನ ಕುಟುಂಬಕ್ಕೂ 5 ಲಕ್ಷ ನೀಡಲಾಗುವುದು. ದೇಣಿಗೆ ಕೊಟ್ಟವರೆಲ್ಲರಿಗೂ ಕೃತಜ್ಞತೆಗಳನ್ನು ಅರ್ಪಿಸುತ್ತೇನೆ ಎಂದು ಹೇಳಿದ್ದಾರೆ.
On Sunday (July 3), BJP leader Kapil Mishra shared the information that more than 14,000 donors from across the globe have come together to contribute a whopping ₹1.7 crore for the family of Kanhaiya Lal. Lal, a tailor by occupation, was beheaded by two extremists, namely, Riyaz Attari and Mohammad Ghaus, for sharing a post in support of the ex-BJP spokesperson Nupur Sharma.
16-01-26 04:35 pm
HK News Desk
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm