ಬ್ರೇಕಿಂಗ್ ನ್ಯೂಸ್
04-07-22 01:30 pm HK News Desk ದೇಶ - ವಿದೇಶ
ಮುಂಬೈ, ಜುಲೈ 4: ಮಹಾರಾಷ್ಟ್ರದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಏಕನಾಥ ಶಿಂಧೆ ಸರಕಾರ ವಿಶ್ವಾಸ ಮತ ಗೆದ್ದುಕೊಂಡಿದೆ. ಬಿಜೆಪಿ ಮತ್ತು ಶಿವಸೇನೆಯ 164 ಸದಸ್ಯರು ಏಕನಾಥ್ ಶಿಂಧೆ ಪರವಾಗಿ ಮತ ಚಲಾಯಿಸಿದ್ದಾರೆ.
ಜುಲೈ ಒಂದರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಏಕನಾಥ ಶಿಂಧೆಗೆ ಇನ್ನೆರಡು ದಿನದಲ್ಲಿ ಸದನದಲ್ಲಿ ಬಹುಮತ ಸಾಬೀತು ಮಾಡುವಂತೆ ರಾಜ್ಯಪಾಲರು ಸೂಚಿಸಿದ್ದರು. ಅದರಂತೆ, ಎರಡು ದಿನಗಳ ವಿಶೇಷ ಅಧಿವೇಶನ ಕರೆಯಲಾಗಿತ್ತು. ಇಂದು ಪರ- ವಿರೋಧ ಮತ ಚಲಾವಣೆ ಆಗಿದ್ದು, ಏಕನಾಥ್ ಶಿಂಧೆ ಪರವಾಗಿ 164 ಮತ್ತು ವಿರೋಧವಾಗಿ 99 ಮಂದಿ ಮತ ಚಲಾಯಿಸಿದ್ದಾರೆ. ಮೂವರು ಮತ ಚಲಾಯಿಸದೆ ತಟಸ್ಥರಾಗಿ ಉಳಿದಿದ್ದಾರೆ.



ಇದರೊಂದಿಗೆ ಮಹಾರಾಷ್ಟ್ರದಲ್ಲಿ ಎದುರಾಗಿದ್ದ ಎರಡು ವಾರಗಳ ರಾಜಕೀಯ ಬಿಕ್ಕಟ್ಟು ಅಂತ್ಯಗೊಂಡಿದೆ. ಬಹುಮತ ಗೆದ್ದ ಬಳಿಕ ಪ್ರತಿಕ್ರಿಯೆ ನೀಡಿದ ಡಿಸಿಎಂ ಮತ್ತು ಬಿಜೆಪಿ ಶಾಸಕಾಂಗ ನಾಯಕ ದೇವೇಂದ್ರ ಫಡ್ನವಿಸ್, ಇದು ಬಾಳಾ ಸಾಹೇಬರ ಸಿದ್ಧಾಂತಕ್ಕೆ ಜಯ ಎಂದು ಹೇಳಿದ್ದಾರೆ. ನಾನು ಮತ್ತೆ ಅಧಿಕಾರಕ್ಕೆ ಬರುತ್ತೇನೆ ಎಂದಿದ್ದೆ. ನನ್ನ ಮಾತು ಕೇಳಿ ಕೆಲವರು ವ್ಯಂಗ್ಯವಾಡಿದ್ದರು. ಆದರೆ ನನ್ನ ಮಾತು ನಿಜವಾಗಿದ್ದು, ನನ್ನ ಜೊತೆಗೆ ಏಕನಾಥ ಶಿಂಧೆ ಅವರನ್ನು ಕರೆತಂದಿದ್ದೇನೆ. ರಾಜಕೀಯದಲ್ಲಿ ಹಳೆಯದನ್ನು ಇಟ್ಟುಕೊಳ್ಳುವುದಿಲ್ಲ ಎಂದು ಫಡ್ನವಿಸ್ ಹೇಳಿದ್ದಾರೆ.
![]()
ಇದಕ್ಕೂ ಮುನ್ನ ಏಕನಾಥ್ ಶಿಂಧೆ ಸರಕಾರ ಹೊಸದಾಗಿ ಸ್ಪೀಕರ್ ಹುದ್ದೆಗೆ ರಾಹುಲ್ ನರ್ವೇಕರ್ ಅವರನ್ನು ನೇಮಕ ಮಾಡಿತ್ತು. ಇದರ ಬೆನ್ನಲ್ಲೇ ಶಿವಸೇನೆಯ ಶಾಸಕಾಂಗ ಪಕ್ಷದ ನಾಯಕ ಸ್ಥಾನದಲ್ಲಿದ್ದ ಠಾಕ್ರೆ ಗುಂಪಿನ ಅಜಯ್ ಚೌಧರಿ ಅವರನ್ನು ತೆಗೆದು ಹಾಕಿದ್ದಲ್ಲದೆ, ಆ ಸ್ಥಾನಕ್ಕೆ ಏಕನಾಥ ಶಿಂಧೆ ಅವರನ್ನು ನೂತನ ಸ್ಪೀಕರ್ ನೇಮಿಸಿದ್ದರು.
A day after electing Rahul Narvekar as Maharashtra Assembly’s speaker, the Eknath Shinde government on Monday comfortably passed the majority-mark with 164 votes, winning the trust vote after two weeks of political turmoil in Maharashtra. Meanwhile, the Uddhav Thackeray-faction of Shiv Sena on Monday moved a fresh plea in the Supreme against the decision of assembly’s speaker to recognise a new whip for the party.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm