ಬ್ರೇಕಿಂಗ್ ನ್ಯೂಸ್
06-07-22 08:38 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 6: ಪ್ರಧಾನಿ ಮೋದಿ ಸಂಪುಟದಲ್ಲಿ ಸಚಿವರಾಗಿದ್ದ ಮುಕ್ತಾರ್ ಅಬ್ಬಾಸ್ ನಕ್ವಿ ಮತ್ತು ಆರ್ ಸಿಪಿ ಸಿಂಗ್ ತಮ್ಮ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಇವರಿಬ್ಬರದ್ದೂ ರಾಜ್ಯಸಭಾ ಸ್ಥಾನದ ಅವಧಿ ಗುರುವಾರಕ್ಕೆ ಕೊನೆಗೊಳ್ಳುತ್ತದೆ. ಹಾಗಾಗಿ ಕಾನೂನು ಪ್ರಕಾರ ಸಚಿವ ಸಂಪುಟದಲ್ಲಿ ಮುಂದುವರಿಯಬಾರದು ಅನ್ನುವ ನಿಯಮದಂತೆ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ ಎನ್ನಲಾಗುತ್ತಿದೆ.
ನಕ್ವಿ ಅವರು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಮತ್ತು ಸಿಂಗ್ ಅವರು ಉಕ್ಕು ಖಾತೆ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಪ್ರಧಾನಿ ಮೋದಿ ಬುಧವಾರ ನಡೆದ ಸಂಪುಟ ಸಭೆಯಲ್ಲಿ ನಕ್ವಿ ಮತ್ತು ಸಿಂಗ್ ಅವರ ಕಾರ್ಯ ವೈಖರಿಯನ್ನು ಮೆಚ್ಚುಗೆ ವ್ಯಕ್ತಪಡಿಸಿದರು. ಆಮೂಲಕ ಅವರನ್ನು ಮತ್ತೆ ಸಚಿವ ಸ್ಥಾನದಲ್ಲಿ ಮುಂದುವರಿಸೋದಿಲ್ಲ ಅನ್ನುವ ಸುಳಿವನ್ನೂ ಕೊಟ್ಟಿದ್ದಾರೆ.
ಸಂಪುಟ ಸಭೆಯ ಬೆನ್ನಲ್ಲೇ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದ ನಕ್ವಿ ಅವರು ಅಲ್ಲಿ ಮಾತುಕತೆ ನಡೆಸಿ, ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಕೆಲವು ಮಾಧ್ಯಮ ವರದಿಗಳ ಪ್ರಕಾರ, ಆಗಸ್ಟ್ ನಲ್ಲಿ ನಕ್ವಿ ಅವರನ್ನು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಸ್ಥಾನಕ್ಕೆ ಅಥವಾ ರಾಜ್ಯಪಾಲರ ಹುದ್ದೆಗೆ ನೇಮಕ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಹಿಂದಿನಿಂದಲೂ ಆಡ್ವಾಣಿ ಆಪ್ತರಾಗಿ, ಆನಂತರವೂ ಮೋದಿ ಯುಗದಲ್ಲಿ ಬಿಜೆಪಿ ತತ್ವ ಸಿದ್ಧಾಂತಗಳ ಪರ ನಿಂತು ಕೇಂದ್ರದಲ್ಲಿ ಪಕ್ಷ ಅಥವಾ ಸರಕಾರದಲ್ಲಿ ಹುದ್ದೆ ಗಿಟ್ಟಿಸಿಕೊಂಡು ಬಂದ ಏಕೈಕ ಅಲ್ಪಸಂಖ್ಯಾತ ವ್ಯಕ್ತಿ ಮುಕ್ತಾರ್ ಅಬ್ಬಾಸ್ ನಕ್ವಿ.
Union ministers Mukhtar Abbas Naqvi and RCP Singh on Wednesday resigned from Prime Minister Narendra Modi's Cabinet.With their term as Rajya Sabha MPs set to end on Thursday,both ministers submitted their resignations to fulfil the constitutional obligation as they will cease to be parliamentarians from Friday.While Naqvi was in charge of the minority affairs ministry, Singh was the steel minister in the Modi 2.0 Cabinet.
20-08-25 10:54 pm
Bangalore Correspondent
Congress MP Sasikanth Senthil, Janardhana Red...
20-08-25 09:54 pm
Heart Attack, Mangalore, Bangalore: 3 ವರ್ಷದಲ್...
20-08-25 12:33 pm
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
20-08-25 10:56 pm
HK News Desk
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
20-08-25 10:19 pm
Mangalore Correspondent
Ananya–Sujatha Bhatt Case, Lawyer Manjunath:...
20-08-25 04:28 pm
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm