ಬ್ರೇಕಿಂಗ್ ನ್ಯೂಸ್
01-10-20 04:07 pm Headline Karnataka News Network ದೇಶ - ವಿದೇಶ
ಉತ್ತರ ಪ್ರದೇಶ, ಅಕ್ಟೋಬರ್ 1 : ಉತ್ತರ ಪ್ರದೇಶದ ಹತ್ರಾಸ್ ನಲ್ಲಿ 20 ವರ್ಷದ ಯುವತಿ ಮೇಲೆ ನಡೆದ ಸಾಮುಹಿಕ ಅತ್ಯಾಚಾರ ಆರೋಪ ಪ್ರಕರಣ ದೇಶದಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಉತ್ತರ ಪ್ರದೇಶದ ಹತ್ರಸ್ ಗ್ರಾಮದಲ್ಲಿ ನಾಲ್ವರು ಕಾಮುಕರಿಂದ ಅತ್ಯಾಚಾರಕ್ಕೊಳಗಾಗಿದ್ದಾಳೆ ಎನ್ನಲಾದ ಯುವತಿ ದೆಹಲಿಯ ಸಫ್ದಾರ್ ಜಂಗ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಈ ಪ್ರಕರಣದಲ್ಲಿ ಪೊಲೀಸರ ಮೇಲೆ ಸಾಕಷ್ಟು ಆರೋಪ ಹಾಗು ಅನುಮಾನಗಳು ಇವೆ.
ಇದೀಗ ಮೃತಪಟ್ಟ ಯುವತಿಯ ಮೇಲೆ ಅತ್ಯಾಚಾರವೇ ನಡೆದಿಲ್ಲ ಎಂದು ಅಲಿಗಢ್ ಐಜಿ ಪಿಯೂಷ್ ಮೋರ್ಡಿಯಾ ತಿಳಿಸಿದ್ದಾರೆ. ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಐಜಿ, ನಾಲ್ವರು ವ್ಯಕ್ತಿಗಳು ಕ್ರೂರವಾಗಿ ನಡೆದುಕೊಂಡಿದ್ದಾರೆ ಎಂದು ಆರೋಪಿಸಲ್ಪಟ್ಟ ಹತ್ರಾಸ್ ಯುವತಿಯ ಮೇಲೆ ಅತ್ಯಾಚಾರ ನಡೆದಿಲ್ಲ. ಸಾಮೂಹಿಕ ಅತ್ಯಾಚಾರವಾಗಿದೆ ಎಂಬುದರ ಬಗ್ಗೆ ವೈದ್ಯಕೀಯ ಪರೀಕ್ಷೆಯಲ್ಲಿ ಉಲ್ಲೇಖವಾಗಿಲ್ಲ ಎಂದು ಹೇಳಿದ್ದಾರೆ.

ಸೆಪ್ಟೆಂಬರ್ 22ರಂದು ಯುವತಿಯನ್ನು ಹೆದರಿಸಿ ಅತ್ಯಾಚಾರ ಮಾಡಿದ್ದಾರೆ ಎಂದು ಆರೋಪಿಸಿದ್ದರು, ಆದರೆ ವೈದ್ಯಕೀಯ ಪರೀಕ್ಷೆಯಲ್ಲಿ ಅತ್ಯಾಚಾರವಾಗಿರುವುದು ದೃಢಪಟ್ಟಿಲ್ಲ. ಕೆಲವೊಂದು ಸ್ಯಾಂಪಲ್ಸ್ ಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಅದರ ವರದಿಗಾಗಿ ಕಾಯುತ್ತಿದ್ದೇವೆ. ಘಟನೆ ಸಂಬಂಧ ಈಗಾಗಲೇ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಐಜಿ ತಿಳಿಸಿರುವುದಾಗಿ ರಾಷ್ಟ್ರೀಯ ಮಾಧ್ಯಮವೊಂದು ವರದಿ ಮಾಡಿದೆ.

ಯುವತಿಯ ಸಾವಿಗೆ ಕಾರಣವಾದ ಆರೋಪಿಗಳನ್ನು ನೇಣಿಗೇರಿಸುವಂತೆ ದೇಶದ ಮೂಲೆಮೂಲೆಯಿಂದಲೂ ಕೂಗು ಕೇಳಿ ಬರುತ್ತಿದೆ. ಈ ಮಧ್ಯೆ ಉತ್ತರಪ್ರದೇಶದ ಪೊಲೀಸರು ಯುವತಿಯ ಕುಟುಂಬಕ್ಕೆ ತಿಳಿಯದಂತೆ ಮೃತದೇಹವನ್ನು ಅಸ್ಪತ್ರೆಯಿಂದ ಶಿಫ್ಟ್ ಮಾಡಿದ್ದಾರೆ ಎಂದು ಸಹೋದರ ಗಂಭೀರವಾಗಿ ಆರೋಪ ಮಾಡಿದ್ದಾರೆ. ಯುವತಿಯ ತಂದೆ ಹಾಗೂ ಸಹೋದರ ಪ್ರತಿಭಟನೆ ನಡೆಸುತ್ತಿದ್ದ ವೇಳೆ ತಮಗೆ ಗೊತ್ತಾಗದಂತೆ ಪೊಲೀಸರು ಕಪ್ಪು ಬಣ್ಣದ ಸ್ಕಾರ್ಪಿಯೋ ಕಾರಿನಲ್ಲಿ ಮೃತದೇಹವನ್ನು ಸಾಗಿಸಿದ್ದಾರೆ ಎಂದು ಹೇಳಿದ್ದಾರೆ
ಹಿಂದೂ ಸಂಪ್ರದಾಯದಂತೆ ಆಕೆಯ ಅಂತ್ಯಸಂಸ್ಕಾರ ಮಾಡಬೇಕು ಎಂದು ಬಯಸಿದ್ದೆವು. ಇತ್ತ ನಾವು ಪ್ರತಿಭಟನೆಯಲ್ಲಿ ತೊಡಗಿದ್ದಾಗ, ಅತ್ತ ಸಹೋದರಿಯ ಅಂತ್ಯಸಂಸ್ಕಾರವನ್ನು ಪೊಲೀಸರು ಮುಗಿಸಿಯೇ ಬಿಟ್ಟಿದ್ದಾರೆ. ಅವರು ಒತ್ತಾಯಪೂರ್ವಕವಾಗಿ ಮೃತದೇಹವನ್ನು ಕೊಂಡೊಯ್ದಿದ್ದಾರೆ. ಅಲ್ಲದೆ ಕೊನೆಯ ಬಾರಿಗೆ ಮಗಳ ಮುಖವನ್ನು ನೋಡಲು ಕೂಡ ಬಿಟ್ಟಿಲ್ಲ ಅಂತ ಯುವತಿಯ ತಂದೆ ಕಣ್ಣೀರು ಹಾಕಿದ್ದರು
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm