ಬ್ರೇಕಿಂಗ್ ನ್ಯೂಸ್
12-07-22 05:18 pm HK News Desk ದೇಶ - ವಿದೇಶ
ಭೋಪಾಲ್, ಜುಲೈ 12: ನದಿಯಲ್ಲಿ ಸ್ನಾನ ಮಾಡುತ್ತಿದ್ದ ಹತ್ತು ವರ್ಷದ ಬಾಲಕನನ್ನು ಮೊಸಳೆ ನುಂಗಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಶಿಯೋಪುರ್ ಜಿಲ್ಲೆಯ ಚಂಬಲ್ ನದಿಯಲ್ಲಿ ಘಟನೆ ನಡೆದಿದೆ.
ಸ್ನಾನ ಮಾಡುತ್ತಿದ್ದ ಹುಡುಗನನ್ನು ಬೃಹತ್ ಮೊಸಳೆ ಎಳೆದೊಯ್ದಿದ್ದನ್ನು ನೋಡಿದ ಸ್ಥಳೀಯರು ಗ್ರಾಮಸ್ಥರ ಗಮನಕ್ಕೆ ತಂದಿದ್ದಾರೆ. ಆನಂತರ, ಮೊಸಳೆಯನ್ನು ಬಲೆ ಹಾಕಿ ಹಿಡಿದು ಹಗ್ಗದಿಂದ ಕಟ್ಟಿ ನೀರಿನಿಂದ ಮೇಲಕ್ಕೆ ಎಳೆದಿದ್ದಾರೆ. ಅಷ್ಟರಲ್ಲಿ ಪೊಲೀಸರಿಗೆ ಮಾಹಿತಿ ಹೋಗಿದ್ದು, ವನ್ಯಜೀವಿ ಸಂರಕ್ಷಣಾ ವಿಭಾಗದ ಅಧಿಕಾರಿಗಳು ಸ್ಥಳಕ್ಕೆ ಬಂದಿದ್ದಾರೆ. ಪೊಲೀಸರು ಗ್ರಾಮಸ್ಥರ ಕೈಯಿಂದ ಮೊಸಳೆಯನ್ನು ಬಿಡಿಸಿದ್ದಾರೆ.

ಆದರೆ ಬಾಲಕನ ಹೆತ್ತವರು ಮೊಸಳೆಯನ್ನು ಬಿಡುವುದಕ್ಕೆ ಕೇಳಲಿಲ್ಲ. ಮೊಸಳೆಯ ಹೊಟ್ಟೆಯಲ್ಲಿ ಬಾಲಕ ಜೀವಂತ ಇರಬಹುದು. ಸಿಗಿದು ನೋಡಬೇಕು ಎಂದು ಪಟ್ಟು ಹಿಡಿದಿದ್ದಾರೆ. ಆದರೆ ಪೊಲೀಸರು ಮತ್ತು ವನ್ಯಜೀವಿ ಅಧಿಕಾರಿಗಳು ಮೊಸಳೆಯ ಹೊಟ್ಟೆ ಬಗೆಯಲು ಬಿಡಲಿಲ್ಲ. ರಘುನಾಥ ಪುರ ಪೊಲೀಸ್ ಠಾಣಾಧಿಕಾರಿ ಶ್ಯಾಮ್ ವೀರ್ ಸಿಂಗ್ ತೋಮರ್, ಬಾಲಕ ನದಿ ಆಳ ಇರುವ ಜಾಗಕ್ಕೆ ಹೋಗಿದ್ದ. ಅಲ್ಲಿಗೆ ಬಂದಿದ್ದ ಮೊಸಳೆ ಬಾಲಕನನ್ನು ಹಿಡಿದು ನುಂಗಿತ್ತು. ಆನಂತರ ಸ್ಥಳೀಯರು ಸೇರಿ ಮೊಸಳೆಯನ್ನು ಹಿಡಿದು ಕಟ್ಟಿ ಹಾಕಿದ್ದಾರೆ. ಬಾಲಕನನ್ನು ಹಿಡಿದು ನೀರಿನಾಳಕ್ಕೆ ಎಳೆದೊಯ್ದು ನುಂಗಿದ್ದರಿಂದ ಬದುಕುಳಿಯುವ ಸಾಧ್ಯತೆ ಇರುವುದಿಲ್ಲ ಎಂದು ಹೆತ್ತವರಿಗೆ ಮನವರಿಕೆ ಮಾಡಿದ್ದಾರೆ.

ಕೊನೆಗೆ ಮೊಸಳೆಯನ್ನು ಗ್ರಾಮಸ್ಥರು ಬಿಟ್ಟು ಕೊಟ್ಟಿದ್ದಾರೆ. ವನ್ಯಜೀವಿ ವಿಭಾಗದ ಅಧಿಕಾರಿಗಳು ಮೊಸಳೆಯನ್ನು ವಶಕ್ಕೆ ಪಡೆದು ಬೇರೆ ಕಡೆಗೆ ಒಯ್ದಿದ್ದಾರೆ.
An 10-year-old boy was swallowed by a crocodile in Sheopur of Madhya Pradesh. The crocodile attacked the boy when he was taking a bath in the Chambal river on Monday morning. The crocodile dragged the boy into the river.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am