ಬ್ರೇಕಿಂಗ್ ನ್ಯೂಸ್
12-07-22 10:02 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 12 : ದುಬೈನಿಂದ ಮಧುರೈಗೆ ಬರುತ್ತಿದ್ದ ಸ್ಪೈಸ್ ಜೆಟ್ ವಿಮಾನದಲ್ಲಿ ಮತ್ತೆ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ವಿಮಾನದ ಮುಂದಿನ ಚಕ್ರ ಅಸಮರ್ಪಕ ಕಾರ್ಯ ನಿರ್ವಹಿಸುತ್ತಿದ್ದ ಕಾರಣ ವಿಮಾನ ವಿಳಂಬವಾಗಿ ತಲುಪಿದೆ. ಕಳೆದ 24 ದಿನಗಳಲ್ಲಿ ಸ್ಪೈಸ್ ಜೆಟ್ ಕಂಪನಿಯ ವಿಮಾನಗಳು ತಾಂತ್ರಿಕ ದೋಷವನ್ನು ಎದುರಿಸುತ್ತಿರುವ 9ನೇ ಘಟನೆ ಇದಾಗಿದೆ.
ವಿಟಿ-ಎಸ್ಝಡ್ಕೆ ನೋಂದಣಿ ಸಂಖ್ಯೆಯ ಬೋಯಿಂಗ್ ಬಿ 737 ಮ್ಯಾಕ್ಸ್ ವಿಮಾನ ಸೋಮವಾರ ಮಂಗಳೂರಿನಿಂದ ದುಬೈಗೆ ತೆರಳಿತ್ತು. ವಿಮಾನ ಲ್ಯಾಂಡ್ ಆದ ತಕ್ಷಣ ತಂತ್ರಜ್ಞರು ಪರಿಶೀಲನೆ ನಡೆಸಿದಾಗ ಅದರ ಮುಂದಿನ ಚಕ್ರದಲ್ಲಿ ತಾಂತ್ರಿಕ ದೋಷ ಕಂಡುಬಂದಿತ್ತು ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ(ಡಿಜಿಸಿಎ) ಅಧಿಕಾರಿಗಳು ತಿಳಿಸಿದ್ದಾರೆ.
ತಾಂತ್ರಿಕ ದೋಷ ಪತ್ತೆಯಾದ ಬಳಿಕ ಸ್ಪೈಸ್ಜೆಟ್ ಕಂಪನಿ ಪ್ರತಿನಿಧಿಗಳು, ಆ ವಿಮಾನವನ್ನು ಅಲ್ಲಿಯೇ ಬಿಟ್ಟು ಮಧುರೈಗೆ ಬರಲು ಮುಂಬೈನಿಂದ ದುಬೈಗೆ ಇನ್ನೊಂದು ವಿಮಾನವನ್ನು ಕಳುಹಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಳಿಕ ವಿಮಾನಯಾನ ಸಂಸ್ಥೆ ಕೊನೇ ಕ್ಷಣದ ತಾಂತ್ರಿಕ ಸಮಸ್ಯೆಯಿಂದ ವಿಮಾನ ವಿಳಂಬವಾಗಿದೆ ಎಂದು ಪ್ರಯಾಣಿಕರಿಗೆ ಸ್ಪಷ್ಟೀಕರಣ ನೀಡಿತ್ತು.
ಜುಲೈ 2 ರಂದು ಜಬ್ಬಲ್ಪುರಕ್ಕೆ ತೆರಳುತ್ತಿದ್ದ ಸ್ಪೈಸ್ ಜೆಟ್ ವಿಮಾನ 5,000 ಅಡಿ ಎತ್ತರದಲ್ಲಿರುವಾಗ ಹೊಗೆ ಕಂಡುಬಂದಿತ್ತು. ಬಳಿಕ ಅದನ್ನು ದೆಹಲಿಯಲ್ಲಿ ಇಳಿಸಲಾಗಿತ್ತು.
ಸ್ಪೈಸ್ಜೆಟ್ ವಿಮಾನಗಳಲ್ಲಿ ಪದೇ ಪದೇ ತಾಂತ್ರಿಕ ದೋಷ ಕಂಡುಬರುತ್ತಿರುವುದರಿಂದ ಭಾರತೀಯ ವಿಮಾನ ಪ್ರಾಧಿಕಾರದಿಂದ ಕಂಪನಿಗೆ ಶೋಕಾಸ್ ನೀಡಲಾಗಿತ್ತು. ಇದು 24 ದಿನಗಳಲ್ಲಿ ವರದಿಯಾಗಿರುವ ಸ್ಪೈಸ್ಜೆಟ್ನ ತಾಂತ್ರಿಕ ದೋಷದ 9ನೇ ಘಟನೆಯಾಗಿದ್ದು ಪ್ರಯಾಣಿಕರಲ್ಲಿ ಆತಂಕ ಮೂಡಿಸಿದೆ.
SpiceJet’s Dubai-Madurai flight was delayed on Monday after the nose wheel of the Boeing B737 Max aircraft malfunctioned, marking the ninth such incident in 24 days.On July 6, the Directorate General of Civil Aviation (DGCA) had issued a show-cause notice to the airlines after it repeated eight incidents since June 19 where flights were affected due to malfunctioning of aircraft.The aviation regulator said that the budget carrier had “failed” to establish safe, efficient and reliable air services.
20-08-25 10:54 pm
Bangalore Correspondent
Congress MP Sasikanth Senthil, Janardhana Red...
20-08-25 09:54 pm
Heart Attack, Mangalore, Bangalore: 3 ವರ್ಷದಲ್...
20-08-25 12:33 pm
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
20-08-25 10:56 pm
HK News Desk
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
20-08-25 10:19 pm
Mangalore Correspondent
Ananya–Sujatha Bhatt Case, Lawyer Manjunath:...
20-08-25 04:28 pm
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm