ಬ್ರೇಕಿಂಗ್ ನ್ಯೂಸ್
12-07-22 10:48 pm HK News Desk ದೇಶ - ವಿದೇಶ
ಚೆನ್ನೈ, ಜುಲೈ 12 : ಪ್ರೀತಿ ನಿರಾಕರಿಸಿದ ಕಾರಣಕ್ಕೆ 21 ವರ್ಷದ ಯುವತಿಗೆ ಆಕೆಯ ಪ್ರಿಯಕರನೇ ಚೂರಿಯಿಂದ ಇರಿದ ಘಟನೆ ಕೊಯಮತ್ತೂರಿನಲ್ಲಿ ನಡೆದಿದೆ.
ದಕ್ಷಿಣ ಕೊಯಮತ್ತೂರಿನ ನಿವಾಸಿ 21 ವರ್ಷದ ಶುಭಶ್ರೀ ಇರಿತಕ್ಕೊಳಗಾದ ಯುವತಿ. ಸೇಲಂ ಮೂಲದ ಆರೋಪಿ ದಿನೇಶ್ ಇನ್ಸ್ಟಾಗ್ರಾಮ್ ಮೂಲಕ ಯುವತಿಗೆ ಪರಿಚಯವಾಗಿದ್ದ. ವೃತ್ತಿಯಲ್ಲಿ ಫೋಟೋಗ್ರಾಫರ್ ಆಗಿದ್ದ ಯುವಕ, ಎರಡು ವರ್ಷಗಳಿಂದ ಯುವತಿಯೊಂದಿಗೆ ಸ್ನೇಹದಲ್ಲಿದ್ದ. ಈ ನಡುವೆ, ಯುವತಿಯನ್ನು ಭೇಟಿಯಾಗಲು ದಿನೇಶ್ ಆಗಾಗ ಕೊಯಮತ್ತೂರಿಗೆ ತೆರಳುತ್ತಿದ್ದ. ಇತ್ತೀಚೆಗೆ ಇವರ ನಡುವೆ ವೈಮನಸ್ಸು ಉಂಟಾಗಿತ್ತು. ತನ್ನ ಪ್ರೀತಿಯನ್ನು ಒಪ್ಪಿಕೊಳ್ಳುವಂತೆ ಒತ್ತಾಯಿಸಿದ್ದಕ್ಕೆ ನಿರಾಕರಿಸಿದ್ದ ಯುವತಿ, ಆತನ ಮೊಬೈಲ್ ನಂಬರ್ ಅನ್ನು ಬ್ಲಾಕ್ ಮಾಡಿದ್ದಳು.
ಆದರೆ ಸೋಮವಾರ ಬೆಳಗ್ಗೆ ಶುಭಶ್ರೀ ಕೆಲಸ ಮಾಡುತ್ತಿದ್ದ ಕಾರು ಶೋರೂಂಗೆ ಆಗಮಿಸಿದ್ದ ದಿನೇಶ್ ಆಕೆಯೊಂದಿಗೆ ಜಗಳವಾಡಿದ್ದಾನೆ. ನಂತರ ಏಕಾಏಕಿ ಜೇಬಿನಿಂದ ಚಾಕುವನ್ನು ತೆಗೆದು ಯುವತಿಯ ಕುತ್ತಿಗೆ, ಭುಜ ಮತ್ತು ಮುಖಕ್ಕೆ ಇರಿದಿದ್ದಾನೆ. ನಂತರ ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದು ಶೋರೂಂನಲ್ಲಿದ್ದ ಇತರ ಸಿಬ್ಬಂದಿ ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಇದೀಗ ಆರೋಪಿ ವಿರುದ್ಧ ಪೊಲೀಸರು ಸೆಕ್ಷನ್ 307 (ಕೊಲೆ ಯತ್ನ) ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ. ಶೋರೂಂನಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಯುವತಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾಳೆ.
A 21-year-old woman was stabbed by her jilted lover, inside the car showroom in Coimbatore where she worked, on Monday, July 11. The victim is stable and the accused has been arrested.According to a report by The Times of India, the victim, Subasri (21), hails from Kuniyamuthur in South Coimbatore. She had met the accused, Dinesh, from Salem, through Instagaram, and they became friends two years ago. Dinesh reportedly worked as a photographer.
11-10-25 11:03 pm
Bangalore Correspondent
ಮೂವರು ಮಕ್ಕಳ ಮಮ್ಮಿಗೆ ಇನ್ನೊಬ್ಬನ ಜೊತೆ ಲವ್ವಿ ಡವ್ವ...
11-10-25 10:05 am
ಮುಂದಿನ ದಿನಗಳಲ್ಲಿ ಹಾಸನಾಂಬೆ ಸಾನಿಧ್ಯವೇ ಇರುವುದಿಲ್...
10-10-25 07:06 pm
'ನವೆಂಬರ್ ಕ್ರಾಂತಿ' ಗುಮ್ಮದ ನಡುವೆಯೇ ಸಂಪುಟ ಸರ್ಜರಿ...
10-10-25 12:06 pm
ಟೀಕೆ ಬೆನ್ನಲ್ಲೇ ಬಿಗ್ ಬಾಸ್ ಮನೆ ಓಪನ್ ಮಾಡಿಸಿದ ಡಿಕ...
09-10-25 12:57 pm
11-10-25 12:52 pm
HK News Desk
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
11-10-25 10:24 pm
Mangalore Correspondent
Malayalam actor Jayakrishnan Arrest, Mangalor...
11-10-25 07:18 pm
Karkala Suicide Case, Abishek Death Note: ನನ್...
11-10-25 05:52 pm
Muslim Terrorist, Mangalore, Jayakrishnan Ker...
11-10-25 11:11 am
ಮುಡಾ ಲೇಔಟ್ ; ಕುಂಜತ್ತ್ ಬೈಲಿನಲ್ಲಿ ಅವೈಜ್ಞಾನಿಕ ರೀ...
10-10-25 06:52 pm
10-10-25 09:48 pm
Udupi Correspondent
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm