ಬ್ರೇಕಿಂಗ್ ನ್ಯೂಸ್
18-07-22 12:31 pm HK News Desk ದೇಶ - ವಿದೇಶ
ಭೂಪಾಲ್, ಜುಲೈ 18: ಮಹಾರಾಷ್ಟ್ರ ಸರ್ಕಾರದ ರಾಜ್ಯ ರಸ್ತೆ ಸಾರಿಗೆ ಬಸ್ಸು ಮಧ್ಯಪ್ರದೇಶದ ಧರ್ ಎಂಬಲ್ಲಿ ನರ್ಮದಾ ನದಿಗೆ ಉರುಳಿ, 13 ಮಂದಿ ಮೃತಪಟ್ಟ ಘಟನೆ ನಡೆದಿದೆ.
ಮಧ್ಯಪ್ರದೇಶದ ಧರ್ ಜಿಲ್ಲೆಯಲ್ಲಿ ನರ್ಮದಾ ನದಿಯ ಸೇತುವೆ ಮೇಲೆ ಬಸ್ ಸಂಚರಿಸುತ್ತಿದ್ದಾಗ ನದಿಗೆ ಉರುಳಿತು. ಸುಮಾರು 100 ಅಡಿ ಎತ್ತರದಿಂದ ಬಸ್ಸು ನದಿಗೆ ಬಿದ್ದಿದೆ. ನದಿಯಲ್ಲಿ ಪ್ರವಾಹದ ಸೆಳೆತ ಹೆಚ್ಚಾಗಿದ್ದ ಕಾರಣ 9 ಶವಗಳು ಕೊಚ್ಚಿ ಹೋಗಿವೆ. ಧಮ್ನೊದ್ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ 15 ಮಂದಿಯನ್ನು ರಕ್ಷಣೆ ಮಾಡಿದ್ದಾರೆ.
ಅಪಘಾತದಲ್ಲಿ ಮೃತಪಟ್ಟಿರುವವರ ನಿಖರ ಸಂಖ್ಯೆ ನಮಗೆ ತಿಳಿದಿಲ್ಲ. ಬಸ್ಸು ಪೂರ್ಣ ಪ್ರಮಾಣದಲ್ಲಿ ನದಿಯಲ್ಲಿ ಮುಳುಗಿತ್ತು. ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದು, ಸೆಳೆತ ತೀವ್ರವಾಗಿದೆ. ಬಹುತೇಕ ಪ್ರಯಾಣಿಕರು ಮೃತಪಟ್ಟಿರಬಹುದು ಎಂದು ಪೊಲೀಸ್ ಅಧಿಕಾರಿ ರಾಜ್ಕುಮಾರ್ ಯಾದವ್ ತಿಳಿಸಿದ್ದಾರೆ.
ಈ ಬಸ್ಸು ಮಹಾರಾಷ್ಟ್ರದ ಇಂದೋರ್ನಿಂದ ಪುಣೆಗೆ ತೆರಳುತ್ತಿತ್ತು. ಈ ವೇಳೆ ಸೇತುವೆಯ ತಡೆಗೋಡೆಗೆ ಗುದ್ದಿ ನದಿಗೆ ಉರುಳಿದೆ. ಬಸ್ಸನ್ನು ಮೇಲೆತ್ತಲು ಕ್ರೇನ್ ಸೇರಿದಂತೆ ಅಗತ್ಯ ಯಂತ್ರೋಪಕರಣಗಳನ್ನು ಸ್ಥಳಕ್ಕೆ ನಿಯೋಜಿಸಲಾಗಿದೆ. ರಾಜ್ಯ ವಿಪತ್ತು ನಿರ್ವಹಣಾ ತಂಡವು ಸ್ಥಳಕ್ಕೆ ಧಾವಿಸಿದೆ. ಸ್ಥಳೀಯ ಮೀನುಗಾರರ ನೆರವಿನೊಂದಿಗೆ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದೆ. ಇಂದೋರ್ ಮತ್ತು ಧರ್ ನಗರಗಳಿಂದ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ.
Thirteen people have died after a Maharashtra government bus plunged into river Narmada in Madhya Pradesh today. 15 have been rescued. The bus, which was headed to Pune from Indore, skidded off a slippery road and fell into the river after breaking the railing off a bridge in Khalghat area of Madhya Pradesh's Dhar district on the Agra-Mumbai Highway.
20-08-25 10:54 pm
Bangalore Correspondent
Congress MP Sasikanth Senthil, Janardhana Red...
20-08-25 09:54 pm
Heart Attack, Mangalore, Bangalore: 3 ವರ್ಷದಲ್...
20-08-25 12:33 pm
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
20-08-25 10:56 pm
HK News Desk
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
20-08-25 10:19 pm
Mangalore Correspondent
Ananya–Sujatha Bhatt Case, Lawyer Manjunath:...
20-08-25 04:28 pm
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm