ಬ್ರೇಕಿಂಗ್ ನ್ಯೂಸ್
18-07-22 08:19 pm HK News Desk ದೇಶ - ವಿದೇಶ
ಲಕ್ನೋ, ಜುಲೈ 18 : ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ಹೊಂದಿರುವ ಫೇಸ್ ಬುಕ್ ಪೋಸ್ಟ್ ಗಳನ್ನು ಹಾಕಿದ್ದ ಆರೋಪದಲ್ಲಿ ದಾಖಲಿಸಲಾದ ಎಫ್ಐಆರ್ ರದ್ದುಗೊಳಿಸಲು ಅಲಹಾಬಾದ್ ಹೈಕೋರ್ಟ್ ನಿರಾಕರಿಸಿದೆ.
ನ್ಯಾಯಮೂರ್ತಿ ಅಶ್ವನಿ ಕುಮಾರ್ ಮಿಶ್ರಾ ಮತ್ತು ನ್ಯಾಯಮೂರ್ತಿ ರಾಜೇಂದ್ರ ಕುಮಾರ್ ಅವರಿದ್ದ ಪೀಠವು, ವಾಕ್ ಸ್ವಾತಂತ್ರ್ಯ ನೆಪದಲ್ಲಿ ಯಾವುದೇ ನಾಗರಿಕರ ವಿರುದ್ಧ ನಿಂದನೆಗಳನ್ನು ಮಾಡುವಂತಿಲ್ಲ. ಅದರ ಮಾತ್ರಕ್ಕೆ ವಾಕ್ ಸ್ವಾತಂತ್ರ್ಯದ ರಕ್ಷಣೆ ಸಿಗುವುದಿಲ್ಲ ಎಂದು ಅಭಿಪ್ರಾಯಪಟ್ಟಿದೆ.
ಈ ದೇಶದ ಸಂವಿಧಾನವು ಪ್ರತಿಯೊಬ್ಬ ಪ್ರಜೆಗೂ ವಾಕ್ ಸ್ವಾತಂತ್ರ್ಯ ನೀಡಿದೆ. ಆದರೆ ಅಂತಹ ಹಕ್ಕು ಯಾವುದೇ ನಾಗರಿಕರ ವಿರುದ್ಧ ದುರುಪಯೋಗ ಅಥವಾ ಅವಹೇಳನಕಾರಿ ಹೇಳಿಕೆಗಳನ್ನು ನೀಡುವುದಕ್ಕೆ ಅಲ್ಲ. ಭಾರತ ಸರ್ಕಾರದ ಪ್ರಧಾನ ಮಂತ್ರಿ ಅಥವಾ ಇತರ ಮಂತ್ರಿಗಳನ್ನು ನಿಂದಿಸುವವರೆಗೆ ವಾಕ್ ಸ್ವಾತಂತ್ರ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.
ಎಫ್ಐಆರ್ ಪ್ರಕಾರ, ಮುಮ್ತಾಜ್ ಮನ್ಸೂರಿ ಅವರು ಅತ್ಯಂತ ಆಕ್ಷೇಪಾರ್ಹ ಫೇಸ್ ಬುಕ್ ಪೋಸ್ಟ್ ಹಾಕಿದ್ದರು, ಅದರಲ್ಲಿ ಅವರು ಪ್ರಧಾನಿ ಮತ್ತು ಗೃಹ ಸಚಿವರು ಮತ್ತು ಇತರ ಮಂತ್ರಿಗಳನ್ನು ನಾಯಿ ಎಂದು ಉಲ್ಲೇಖಿಸಿದ್ದರು. ಇದರಂತೆ, ಉತ್ತರ ಪ್ರದೇಶ ಪೊಲೀಸರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 504(ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ) ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆಯ ಸೆಕ್ಷನ್ 67 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.
ಪೊಲೀಸರು ದಾಖಲಿಸಿದ ಪ್ರಕರಣವನ್ನು ರದ್ದುಗೊಳಿಸುವಂತೆ ಮನ್ಸೂರಿ ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ, ಎಫ್ಐಆರ್ ರದ್ದುಪಡಿಸಲು ಸಾಧ್ಯವಿಲ್ಲ ಎಂದಿರುವ ಕೋರ್ಟ್, ವ್ಯಕ್ತಿ ಅರಿಯಬಹುದಾದ ಅಪರಾಧವನ್ನು ಎಫ್ಐಆರ್ ಬಹಿರಂಗಪಡಿಸಿದೆ ಎಂದು ಅಭಿಪ್ರಾಯಪಟ್ಟಿದೆ. ಪ್ರಥಮ ಮಾಹಿತಿ ವರದಿಯನ್ನು ರದ್ದುಗೊಳಿಸುವಂತೆ ಸಲ್ಲಿಸಿದ ರಿಟ್ ಅರ್ಜಿಯಲ್ಲಿ ಮಧ್ಯಪ್ರವೇಶಿಸಲು ಯಾವುದೇ ಕಾರಣ ಕಾಣುವುದಿಲ್ಲ ಎಂದು ಹೇಳಿದೆ.
The Allahabad High Court has dismissed a petition of a person to quash an FIR registered against him for allegedly making derogatory remarks against Prime Minister Narendra Modi, Union Home Minister Amit Shah and other central ministers.The bench comprising Justice Ashwani Kumar Mishra and Justice Rajendra Kumar-IV while dismissing the plea filed by Mumtaz Mansoori observed, "Although the Constitution of this country recognises freedom of speech of every citizen but such right does not extend to hurling abuses or making derogatory remarks against any citizen much less the prime minister or other ministers of the government of India."
20-08-25 10:54 pm
Bangalore Correspondent
Congress MP Sasikanth Senthil, Janardhana Red...
20-08-25 09:54 pm
Heart Attack, Mangalore, Bangalore: 3 ವರ್ಷದಲ್...
20-08-25 12:33 pm
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
20-08-25 10:56 pm
HK News Desk
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
20-08-25 10:19 pm
Mangalore Correspondent
Ananya–Sujatha Bhatt Case, Lawyer Manjunath:...
20-08-25 04:28 pm
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm