ಬ್ರೇಕಿಂಗ್ ನ್ಯೂಸ್
02-10-20 09:57 pm Headline Karnataka News Network ದೇಶ - ವಿದೇಶ
ಶಿಮ್ಲಾ, ಅಕ್ಟೋಬರ್ 02: ವಿಶ್ವದ ಅತೀ ಉದ್ದದ ಸುರಂಗ ಹೆದ್ದಾರಿ ಎನಿಸಿಕೊಂಡ 9 ಕಿಮೀ ಉದ್ದದ ಅಟಲ್ ರೋಹ್ಟಾಂಗ್ ಸುರಂಗ ಮಾರ್ಗವನ್ನು ಅಕ್ಟೋಬರ್ 3 ರಂದು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಲಿದ್ದಾರೆ.
ಹಿಮಾಚಲಪ್ರದೇಶದ ರೋಹ್ಟಂಗ್ನಲ್ಲಿರುವ ಈ ಸರ್ವಋತು ಸುರಂಗವನ್ನು ಪ್ರಧಾನಿ ಮೋದಿ ಅವರು ಉದ್ಘಾಟಿಸಿದ ಬಳಿಕ ಸೋಲನ್ ಕಣಿವೆ ಹಾಗೂ ಲಹೌಲ್ ಸ್ಪಿಟಿ ಜಿಲ್ಲೆಯ ಸಿಸ್ಸುವಿನಲ್ಲಿ ಸಾರ್ವಜನಿಕ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅಲ್ಲಿನ ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ಮಾಹಿತಿ ನೀಡಿದ್ದಾರೆ. ಎರಡೂ ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರ ಪಾಲನೆ ಆಗಲಿದ್ದು ಕೇವಲ 200 ಜನ ಮಾತ್ರ ಭಾಗವಹಿಸಲು ಅವಕಾಶ ನೀಡಲಾಗಿದೆ.

ಸುಮಾರು 10 ಸಾವಿರ ಅಡಿ ಎತ್ತರದಲ್ಲಿ ನಿರ್ಮಿಸಲ್ಪಟ್ಟಿರುವ ವಿಶ್ವದ ಅತಿ ಉದ್ದವಾದ ಹೆದ್ದಾರಿ ಎಂಬ ಹೆಗ್ಗಳಿಕೆಗೆ ಅಟಲ್ ಸುರಂಗ ಮಾರ್ಗ ಪಾತ್ರವಾಗಿದೆ. ಈ ಸುರಂಗದಿಂದಾಗಿ ಮನಾಲಿ- ಲೇಹ್ ನಡುವಿನ ಪ್ರಯಾಣದ ಅಂತರ 46 ಕಿ.ಮೀನಷ್ಟು ಕಡಿಮೆಯಾಗಲಿದ್ದು 4 ಗಂಟೆಗಳ ಉಳಿತಾಯವಾಗಲಿದೆ.
ಮನಾಲಿಯಲ್ಲಿ ಭಾರೀ ಹಿಮಪಾತವಾಗುವ ಕಾರಣ ಇಲ್ಲಿ ರಸ್ತೆ ಸಂಚಾರ ಕೇವಲ ಆರು ತಿಂಗಳು ಮಾತ್ರ ಸಾಧ್ಯವಿತ್ತು. ಆದರೆ ಇದೀಗ ಸುರಂಗ ಮಾರ್ಗದಿಂದಾಗಿ ಮನಾಲಿಯಿಂದ ಲಹೌಲ್ ಸ್ಪಿಟಿ ಕಣಿವೆಯನ್ನು ವರ್ಷವಿಡಿ ಸಂಪರ್ಕ ಸಾಧಿಸಲು ಅನುಕೂಲವಾಗಲಿದೆ. ಈ ಸುರಂಗ ಮಾರ್ಗದಲ್ಲಿ ಪ್ರತಿ 60 ಮೀಟರಿಗೆ ಸಿಸಿಟಿವಿ ಕ್ಯಾಮೆರಾಗಳಿದ್ದು, ಸುರಂಗದ ಒಳಗೆ ಪ್ರತಿ 500 ಮೀಟರ್ ಅಂತರದಲ್ಲಿ ತುರ್ತು ನಿರ್ಗಮನ ದ್ವಾರಗಳನ್ನು ನಿರ್ಮಿಸಲಾಗಿದೆ.

ವಾಜಪೇಯಿ ಪ್ರಧಾನಿ ಆಗಿದ್ದಾಗ ಈ ಸುರಂಗ ಮಾರ್ಗ ನಿರ್ಮಾಣಕ್ಕೆ ಯೋಜನೆ ರೂಪಿಸಿದ್ದರು. ಅಟಲ್ ಕನಸಿನ ಯೋಜನೆ ಆಗಿದ್ದರಿಂದ ಸುರಂಗ ಮಾರ್ಗಕ್ಕೆ ಅಟಲ್ ಹೆಸರನ್ನೇ ಇಡಲಾಗಿದೆ. ಇದಲ್ಲದೆ, ಈ ಸುರಂಗ ಮಾರ್ಗದಿಂದಾಗಿ ಚೀನಾ ಗಡಿಭಾಗದಲ್ಲಿ ಲಡಾಖ್ ಪ್ರಾಂತ್ಯದ ಮೇಲೆ ಭಾರತ ತನ್ನ ಹಿಡಿತವನ್ನು ಇನ್ನಷ್ಟು ಬಲಪಡಿಸಲು ಸಾಧ್ಯವಾಗಲಿದೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm