ಬ್ರೇಕಿಂಗ್ ನ್ಯೂಸ್
30-07-22 09:07 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 30 : ಧರ್ಮ ಮತ್ತು ಸಿದ್ಧಾಂತದ ಹೆಸರಿನಲ್ಲಿ ಶಾಂತಿ, ಸಾಮರಸ್ಯ ಕದಡುವವರ ಬಗ್ಗೆ ಎಚ್ಚರದಿಂದಿರಬೇಕು. ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಶಕ್ತಿಗಳ ಬಗ್ಗೆ ಜಾಗರೂಕತೆ ಅಗತ್ಯ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಹೇಳಿದ್ದಾರೆ.
ದೆಹಲಿಯಲ್ಲಿ ಅಖಿಲ ಭಾರತ ಸೂಫಿ ಕೌನ್ಸಿಲ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತದ ಪ್ರಗತಿಯನ್ನು ಮತ್ತು ಹೆಸರನ್ನು ಹಾಳು ಮಾಡಲು ಕೆಲವು ಶಕ್ತಿಗಳು ಪ್ರಯತ್ನಿಸುತ್ತಿವೆ. ಅಂತಹ ವಾತಾವರಣ ಸೃಷ್ಟಿ ಮಾಡುವವರ ವಿರುದ್ದ ಸದಾ ಎಚ್ಚರದಿಂದಿರಬೇಕು. ಧರ್ಮ, ಸಿದ್ಧಾಂತದ ಹೆಸರಿನಲ್ಲಿ ದ್ವೇಷ, ಸಂಘರ್ಷ ಉಂಟು ಮಾಡುತ್ತಿರುವುದು ಸರಿಯಲ್ಲ. ದೇಶದಿಂದಾಚೆಗೂ ಇದು ಹರಡುತ್ತಿದ್ದು, ಇಡೀ ದೇಶದ ಅಭಿವೃದ್ದಿಯ ಮೇಲೆ ಇದು ಕೆಟ್ಟ ಪರಿಣಾಮ ಬೀರುತ್ತಿದೆ ಎಂದವರು ಆತಂಕ ವ್ಯಕ್ತಪಡಿಸಿದರು.
ಕೆಲವು ಸಂಘಟನೆಗಳು ದೇಶದಲ್ಲಿ ಸಂಘರ್ಷ ಉಂಟು ಮಾಡಲೆಂದೇ ಹುಟ್ಟಿಕೊಂಡಿವೆ. ಇವು ಧರ್ಮದ ಹೆಸರಿನಲ್ಲಿ ನಿರಂತರವಾಗಿ ಸಂಘರ್ಷಗಳನ್ನು ಹುಟ್ಟುಹಾಕಿ ದೇಶದ ಶಾಂತಿ ಕೆಡಿಸುವಲ್ಲಿ ಕಾರಣವಾಗುತ್ತಿವೆ. ಏಕತೆಯಿಂದ ಮಾತ್ರ ದೇಶ ಮುನ್ನಡೆಯಲು ಸಾಧ್ಯ. ಅದನ್ನು ಪ್ರತಿಯೊಬ್ಬರೂ ಅರ್ಥೈಸಿಕೊಳ್ಳಬೇಕು. ದೇಶ ಪ್ರಗತಿ ಹೊಂದಿದರೆ ಎಲ್ಲಾ ಧರ್ಮದವರಿಗೂ ಅದರ ಪ್ರಯೋಜನ ಸಿಗುತ್ತದೆ ಎಂದರು.
ಧಾರ್ಮಿಕ ಮುಖ್ಯಸ್ಥರು ಶಾಂತಿ ಮತ್ತು ಏಕತೆಗಾಗಿ ಚರ್ಚಿಸಲು ಮತ್ತು ನಿರ್ಣಯವನ್ನು ಅಂಗೀಕರಿಸುವ ಸಂಬಂಧ ನಡೆದ ಸಭೆ ಇದಾಗಿತ್ತು.
National Security Adviser Ajit Doval today warned the nation to be on guard against forces conspiring to disturb harmony and create unrest in the name of religion and ideology.Mr Doval made the comment at an event organised by the All India Sufi Sajjadanashin Council in Delhi, where religious heads attended to discuss and pass a resolution for peace and unity. A resolution after the meeting called for banning organisations like the Popular Front of India, or PFI, "who have been pursuing a divisive agenda."
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm