ಬ್ರೇಕಿಂಗ್ ನ್ಯೂಸ್
03-10-20 12:11 pm Headline Karnataka News Network ದೇಶ - ವಿದೇಶ
ಶಿಮ್ಲಾ, ಅಕ್ಟೋಬರ್ 03: 20 ವರ್ಷಗಳ ಹಿಂದೆ ಅಟಲ್ ಬಿಹಾರಿ ವಾಜಪೇಯಿ ಕಂಡಿದ್ದ ಕನಸು ಇಂದಿಗೆ ನನಸಾಗಿದೆ. ಈ ಐತಿಹಾಸಿಕ ಕ್ಷಣದೊಂದಿಗೆ ಅಟಲ್ ಕನಸು ನನಸಾಗಿದ್ದು ಮಾತ್ರವಲ್ಲ, ಹಿಮಾಚಲಪ್ರದೇಶದ ಜನರ ಬಹುಕಾಲದ ನಿರೀಕ್ಷೆಯೂ ಅಂತ್ಯಗೊಂಡಿದೆ. ಗಡಿಭಾಗದಲ್ಲಿ ಸೇನೆಯ ಕಾರ್ಯಾಚರಣೆಗೂ ಈ ಸುರಂಗ ಮಾರ್ಗ ಮಹತ್ವದ್ದಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು, ಹಿಮಾಚಲಪ್ರದೇಶದ ಮನಾಲಿ ಮತ್ತು ಲೇಹ್ ನಡುವಿನ 9 ಕಿಮೀ ಉದ್ದದ ಅಟಲ್ ಸುರಂಗ ಮಾರ್ಗವನ್ನು ಉದ್ಘಾಟಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ ಸಿಂಗ್, ಸೇನಾ ಮುಖ್ಯಸ್ಥ ಬಿಪಿನ್ ರಾವತ್, ಹಿಮಾಚಲಪ್ರದೇಶ ಸಿಎಂ ಜೈರಾಮ್ ಠಾಕೂರ್, ಕೇಂದ್ರ ಸಚಿವ ಅನುರಾಗ್ ಠಾಕೂರ್, ಬೋರ್ಡರ್ ರೋಡ್ ಆರ್ಗನೈಸೇಶನ್ ಸಂಸ್ಥೆಯ ಡೈರೆಕ್ಟರ್ ಜನರಲ್ ಹರ್ಪಾಲ್ ಸಿಂಗ್ ಉಪಸ್ಥಿತರಿದ್ದರು.
ಲೇಹ್ - ಲಡಾಖ್, ಮನಾಲಿಯ ಜನರಿಗೆ ಈ ಸುರಂಗ ಮಾರ್ಗವು ಜೀವಮಾನದ ಕೊಡುಗೆಯಾಗಲಿದೆ. ಹಿಮಪಾತದಿಂದಾಗಿ ಹಿಂದೆ ಈ ಭಾಗದ ಜನರು ಆರು ತಿಂಗಳ ಕಾಲ ಮನಾಲಿಗೆ ಹೋಗುವುದು ಸಾಧ್ಯವಾಗುತ್ತಿರಲಿಲ್ಲ. ಇನ್ನು ವರ್ಷಪೂರ್ತಿ ಈ ಹೆದ್ದಾರಿಯ ಮೂಲಕ ಮನಾಲಿ - ಲೇಹ್ ಸಂಪರ್ಕ ಮಾಡಬಹುದಾಗಿದೆ. ಗಡಿಯಲ್ಲಿ ರಸ್ತೆ, ಸೇತುವೆ, ಸುರಂಗ ಮಾರ್ಗಗಳ ರಚನೆಯಿಂದ ಈ ಭಾಗದ ಜನರಿಗೆ ಮಾತ್ರ ಉಪಯೋಗ ಆಗುವುದಲ್ಲ. ಇದರ ದೊಡ್ಡ ಲಾಭ ಸೇನಾ ಪಡೆಗೂ ಸಿಗಲಿದೆ ಎಂದು ಮೋದಿ ಹೇಳಿದರು.

9.02 ಕಿಮೀ ಉದ್ದದ ಈ ಸುರಂಗ ಮಾರ್ಗದಿಂದಾಗಿ ಮನಾಲಿ ಮತ್ತು ಲೇಹ್ ನಡುವೆ 46 ಕಿಮೀ ಅಂತರವನ್ನು ಕಡಿಮೆಗೊಳಿಸಿದೆ. ಅಲ್ಲದೆ, ಐದು ಗಂಟೆಗಳ ಸಮಯವನ್ನು ಉಳಿತಾಯ ಮಾಡಿದೆ. ಸಮುದ್ರ ಮಟ್ಟಕ್ಕಿಂತ 3 ಸಾವಿರ ಮೀಟರ್ ಎತ್ತರದಲ್ಲಿ 9 ಕಿಮೀ ಉದ್ದದ ಸುರಂಗ ಮಾರ್ಗ ನಿರ್ಮಿಸಿದ್ದು ಜಗತ್ತಿನಲ್ಲಿ ಇದೇ ಮೊದಲು. ಅತ್ಯಾಧುನಿಕ ಸೌಕರ್ಯಗಳೊಂದಿಗೆ ನಿರ್ಮಿಸಲಾಗಿರುವ ಈ ಸುರಂಗ ಮಾರ್ಗಕ್ಕೆ 3300 ಕೋಟಿ ರೂಪಾಯಿ ವೆಚ್ಚವಾಗಿದೆ. ದಿನದಲ್ಲಿ 3 ಸಾವಿರ ಕಾರು ಮತ್ತು 1500 ಟ್ರಕ್ ಗಳು 80 ಕಿಮೀ ವೇಗದಲ್ಲಿ ಸಾಗಬಲ್ಲ ರೀತಿಯಲ್ಲಿ ರಸ್ತೆಯ ಸಾಮರ್ಥ್ಯವನ್ನು ಮಾರ್ಪಡಿಸಲಾಗಿದೆ. ವಿಶೇಷ ಅಂದ್ರೆ, ಈ ಸುರಂಗ ಮಾರ್ಗ ಅತ್ಯಂತ ಕಡಿದಾದ ಕಣಿವೆಗಳು ಮತ್ತು ನದಿಗಳ ಅಡಿಭಾಗದಿಂದ ದಾಟಿಕೊಂಡು ಸಾಗಲಿದೆ.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
05-03-26 05:02 pm
HK News Staffer
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
05-03-26 07:38 pm
HK News Staffer
ಸಾಕ್ಷಿಗಳು ಬರ್ತಾರೆ, ಹೋಗ್ತಾರೆ.. ಧರ್ಮಸ್ಥಳದಲ್ಲಿ ಹ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm