ಬ್ರೇಕಿಂಗ್ ನ್ಯೂಸ್
03-10-20 12:11 pm Headline Karnataka News Network ದೇಶ - ವಿದೇಶ
ಶಿಮ್ಲಾ, ಅಕ್ಟೋಬರ್ 03: 20 ವರ್ಷಗಳ ಹಿಂದೆ ಅಟಲ್ ಬಿಹಾರಿ ವಾಜಪೇಯಿ ಕಂಡಿದ್ದ ಕನಸು ಇಂದಿಗೆ ನನಸಾಗಿದೆ. ಈ ಐತಿಹಾಸಿಕ ಕ್ಷಣದೊಂದಿಗೆ ಅಟಲ್ ಕನಸು ನನಸಾಗಿದ್ದು ಮಾತ್ರವಲ್ಲ, ಹಿಮಾಚಲಪ್ರದೇಶದ ಜನರ ಬಹುಕಾಲದ ನಿರೀಕ್ಷೆಯೂ ಅಂತ್ಯಗೊಂಡಿದೆ. ಗಡಿಭಾಗದಲ್ಲಿ ಸೇನೆಯ ಕಾರ್ಯಾಚರಣೆಗೂ ಈ ಸುರಂಗ ಮಾರ್ಗ ಮಹತ್ವದ್ದಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು, ಹಿಮಾಚಲಪ್ರದೇಶದ ಮನಾಲಿ ಮತ್ತು ಲೇಹ್ ನಡುವಿನ 9 ಕಿಮೀ ಉದ್ದದ ಅಟಲ್ ಸುರಂಗ ಮಾರ್ಗವನ್ನು ಉದ್ಘಾಟಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ ಸಿಂಗ್, ಸೇನಾ ಮುಖ್ಯಸ್ಥ ಬಿಪಿನ್ ರಾವತ್, ಹಿಮಾಚಲಪ್ರದೇಶ ಸಿಎಂ ಜೈರಾಮ್ ಠಾಕೂರ್, ಕೇಂದ್ರ ಸಚಿವ ಅನುರಾಗ್ ಠಾಕೂರ್, ಬೋರ್ಡರ್ ರೋಡ್ ಆರ್ಗನೈಸೇಶನ್ ಸಂಸ್ಥೆಯ ಡೈರೆಕ್ಟರ್ ಜನರಲ್ ಹರ್ಪಾಲ್ ಸಿಂಗ್ ಉಪಸ್ಥಿತರಿದ್ದರು.
ಲೇಹ್ - ಲಡಾಖ್, ಮನಾಲಿಯ ಜನರಿಗೆ ಈ ಸುರಂಗ ಮಾರ್ಗವು ಜೀವಮಾನದ ಕೊಡುಗೆಯಾಗಲಿದೆ. ಹಿಮಪಾತದಿಂದಾಗಿ ಹಿಂದೆ ಈ ಭಾಗದ ಜನರು ಆರು ತಿಂಗಳ ಕಾಲ ಮನಾಲಿಗೆ ಹೋಗುವುದು ಸಾಧ್ಯವಾಗುತ್ತಿರಲಿಲ್ಲ. ಇನ್ನು ವರ್ಷಪೂರ್ತಿ ಈ ಹೆದ್ದಾರಿಯ ಮೂಲಕ ಮನಾಲಿ - ಲೇಹ್ ಸಂಪರ್ಕ ಮಾಡಬಹುದಾಗಿದೆ. ಗಡಿಯಲ್ಲಿ ರಸ್ತೆ, ಸೇತುವೆ, ಸುರಂಗ ಮಾರ್ಗಗಳ ರಚನೆಯಿಂದ ಈ ಭಾಗದ ಜನರಿಗೆ ಮಾತ್ರ ಉಪಯೋಗ ಆಗುವುದಲ್ಲ. ಇದರ ದೊಡ್ಡ ಲಾಭ ಸೇನಾ ಪಡೆಗೂ ಸಿಗಲಿದೆ ಎಂದು ಮೋದಿ ಹೇಳಿದರು.

9.02 ಕಿಮೀ ಉದ್ದದ ಈ ಸುರಂಗ ಮಾರ್ಗದಿಂದಾಗಿ ಮನಾಲಿ ಮತ್ತು ಲೇಹ್ ನಡುವೆ 46 ಕಿಮೀ ಅಂತರವನ್ನು ಕಡಿಮೆಗೊಳಿಸಿದೆ. ಅಲ್ಲದೆ, ಐದು ಗಂಟೆಗಳ ಸಮಯವನ್ನು ಉಳಿತಾಯ ಮಾಡಿದೆ. ಸಮುದ್ರ ಮಟ್ಟಕ್ಕಿಂತ 3 ಸಾವಿರ ಮೀಟರ್ ಎತ್ತರದಲ್ಲಿ 9 ಕಿಮೀ ಉದ್ದದ ಸುರಂಗ ಮಾರ್ಗ ನಿರ್ಮಿಸಿದ್ದು ಜಗತ್ತಿನಲ್ಲಿ ಇದೇ ಮೊದಲು. ಅತ್ಯಾಧುನಿಕ ಸೌಕರ್ಯಗಳೊಂದಿಗೆ ನಿರ್ಮಿಸಲಾಗಿರುವ ಈ ಸುರಂಗ ಮಾರ್ಗಕ್ಕೆ 3300 ಕೋಟಿ ರೂಪಾಯಿ ವೆಚ್ಚವಾಗಿದೆ. ದಿನದಲ್ಲಿ 3 ಸಾವಿರ ಕಾರು ಮತ್ತು 1500 ಟ್ರಕ್ ಗಳು 80 ಕಿಮೀ ವೇಗದಲ್ಲಿ ಸಾಗಬಲ್ಲ ರೀತಿಯಲ್ಲಿ ರಸ್ತೆಯ ಸಾಮರ್ಥ್ಯವನ್ನು ಮಾರ್ಪಡಿಸಲಾಗಿದೆ. ವಿಶೇಷ ಅಂದ್ರೆ, ಈ ಸುರಂಗ ಮಾರ್ಗ ಅತ್ಯಂತ ಕಡಿದಾದ ಕಣಿವೆಗಳು ಮತ್ತು ನದಿಗಳ ಅಡಿಭಾಗದಿಂದ ದಾಟಿಕೊಂಡು ಸಾಗಲಿದೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm