ಬ್ರೇಕಿಂಗ್ ನ್ಯೂಸ್
03-10-20 12:11 pm Headline Karnataka News Network ದೇಶ - ವಿದೇಶ
ಶಿಮ್ಲಾ, ಅಕ್ಟೋಬರ್ 03: 20 ವರ್ಷಗಳ ಹಿಂದೆ ಅಟಲ್ ಬಿಹಾರಿ ವಾಜಪೇಯಿ ಕಂಡಿದ್ದ ಕನಸು ಇಂದಿಗೆ ನನಸಾಗಿದೆ. ಈ ಐತಿಹಾಸಿಕ ಕ್ಷಣದೊಂದಿಗೆ ಅಟಲ್ ಕನಸು ನನಸಾಗಿದ್ದು ಮಾತ್ರವಲ್ಲ, ಹಿಮಾಚಲಪ್ರದೇಶದ ಜನರ ಬಹುಕಾಲದ ನಿರೀಕ್ಷೆಯೂ ಅಂತ್ಯಗೊಂಡಿದೆ. ಗಡಿಭಾಗದಲ್ಲಿ ಸೇನೆಯ ಕಾರ್ಯಾಚರಣೆಗೂ ಈ ಸುರಂಗ ಮಾರ್ಗ ಮಹತ್ವದ್ದಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು, ಹಿಮಾಚಲಪ್ರದೇಶದ ಮನಾಲಿ ಮತ್ತು ಲೇಹ್ ನಡುವಿನ 9 ಕಿಮೀ ಉದ್ದದ ಅಟಲ್ ಸುರಂಗ ಮಾರ್ಗವನ್ನು ಉದ್ಘಾಟಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ ಸಿಂಗ್, ಸೇನಾ ಮುಖ್ಯಸ್ಥ ಬಿಪಿನ್ ರಾವತ್, ಹಿಮಾಚಲಪ್ರದೇಶ ಸಿಎಂ ಜೈರಾಮ್ ಠಾಕೂರ್, ಕೇಂದ್ರ ಸಚಿವ ಅನುರಾಗ್ ಠಾಕೂರ್, ಬೋರ್ಡರ್ ರೋಡ್ ಆರ್ಗನೈಸೇಶನ್ ಸಂಸ್ಥೆಯ ಡೈರೆಕ್ಟರ್ ಜನರಲ್ ಹರ್ಪಾಲ್ ಸಿಂಗ್ ಉಪಸ್ಥಿತರಿದ್ದರು.
ಲೇಹ್ - ಲಡಾಖ್, ಮನಾಲಿಯ ಜನರಿಗೆ ಈ ಸುರಂಗ ಮಾರ್ಗವು ಜೀವಮಾನದ ಕೊಡುಗೆಯಾಗಲಿದೆ. ಹಿಮಪಾತದಿಂದಾಗಿ ಹಿಂದೆ ಈ ಭಾಗದ ಜನರು ಆರು ತಿಂಗಳ ಕಾಲ ಮನಾಲಿಗೆ ಹೋಗುವುದು ಸಾಧ್ಯವಾಗುತ್ತಿರಲಿಲ್ಲ. ಇನ್ನು ವರ್ಷಪೂರ್ತಿ ಈ ಹೆದ್ದಾರಿಯ ಮೂಲಕ ಮನಾಲಿ - ಲೇಹ್ ಸಂಪರ್ಕ ಮಾಡಬಹುದಾಗಿದೆ. ಗಡಿಯಲ್ಲಿ ರಸ್ತೆ, ಸೇತುವೆ, ಸುರಂಗ ಮಾರ್ಗಗಳ ರಚನೆಯಿಂದ ಈ ಭಾಗದ ಜನರಿಗೆ ಮಾತ್ರ ಉಪಯೋಗ ಆಗುವುದಲ್ಲ. ಇದರ ದೊಡ್ಡ ಲಾಭ ಸೇನಾ ಪಡೆಗೂ ಸಿಗಲಿದೆ ಎಂದು ಮೋದಿ ಹೇಳಿದರು.

9.02 ಕಿಮೀ ಉದ್ದದ ಈ ಸುರಂಗ ಮಾರ್ಗದಿಂದಾಗಿ ಮನಾಲಿ ಮತ್ತು ಲೇಹ್ ನಡುವೆ 46 ಕಿಮೀ ಅಂತರವನ್ನು ಕಡಿಮೆಗೊಳಿಸಿದೆ. ಅಲ್ಲದೆ, ಐದು ಗಂಟೆಗಳ ಸಮಯವನ್ನು ಉಳಿತಾಯ ಮಾಡಿದೆ. ಸಮುದ್ರ ಮಟ್ಟಕ್ಕಿಂತ 3 ಸಾವಿರ ಮೀಟರ್ ಎತ್ತರದಲ್ಲಿ 9 ಕಿಮೀ ಉದ್ದದ ಸುರಂಗ ಮಾರ್ಗ ನಿರ್ಮಿಸಿದ್ದು ಜಗತ್ತಿನಲ್ಲಿ ಇದೇ ಮೊದಲು. ಅತ್ಯಾಧುನಿಕ ಸೌಕರ್ಯಗಳೊಂದಿಗೆ ನಿರ್ಮಿಸಲಾಗಿರುವ ಈ ಸುರಂಗ ಮಾರ್ಗಕ್ಕೆ 3300 ಕೋಟಿ ರೂಪಾಯಿ ವೆಚ್ಚವಾಗಿದೆ. ದಿನದಲ್ಲಿ 3 ಸಾವಿರ ಕಾರು ಮತ್ತು 1500 ಟ್ರಕ್ ಗಳು 80 ಕಿಮೀ ವೇಗದಲ್ಲಿ ಸಾಗಬಲ್ಲ ರೀತಿಯಲ್ಲಿ ರಸ್ತೆಯ ಸಾಮರ್ಥ್ಯವನ್ನು ಮಾರ್ಪಡಿಸಲಾಗಿದೆ. ವಿಶೇಷ ಅಂದ್ರೆ, ಈ ಸುರಂಗ ಮಾರ್ಗ ಅತ್ಯಂತ ಕಡಿದಾದ ಕಣಿವೆಗಳು ಮತ್ತು ನದಿಗಳ ಅಡಿಭಾಗದಿಂದ ದಾಟಿಕೊಂಡು ಸಾಗಲಿದೆ.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm