ಬ್ರೇಕಿಂಗ್ ನ್ಯೂಸ್
03-10-20 12:11 pm Headline Karnataka News Network ದೇಶ - ವಿದೇಶ
ಶಿಮ್ಲಾ, ಅಕ್ಟೋಬರ್ 03: 20 ವರ್ಷಗಳ ಹಿಂದೆ ಅಟಲ್ ಬಿಹಾರಿ ವಾಜಪೇಯಿ ಕಂಡಿದ್ದ ಕನಸು ಇಂದಿಗೆ ನನಸಾಗಿದೆ. ಈ ಐತಿಹಾಸಿಕ ಕ್ಷಣದೊಂದಿಗೆ ಅಟಲ್ ಕನಸು ನನಸಾಗಿದ್ದು ಮಾತ್ರವಲ್ಲ, ಹಿಮಾಚಲಪ್ರದೇಶದ ಜನರ ಬಹುಕಾಲದ ನಿರೀಕ್ಷೆಯೂ ಅಂತ್ಯಗೊಂಡಿದೆ. ಗಡಿಭಾಗದಲ್ಲಿ ಸೇನೆಯ ಕಾರ್ಯಾಚರಣೆಗೂ ಈ ಸುರಂಗ ಮಾರ್ಗ ಮಹತ್ವದ್ದಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು, ಹಿಮಾಚಲಪ್ರದೇಶದ ಮನಾಲಿ ಮತ್ತು ಲೇಹ್ ನಡುವಿನ 9 ಕಿಮೀ ಉದ್ದದ ಅಟಲ್ ಸುರಂಗ ಮಾರ್ಗವನ್ನು ಉದ್ಘಾಟಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ ಸಿಂಗ್, ಸೇನಾ ಮುಖ್ಯಸ್ಥ ಬಿಪಿನ್ ರಾವತ್, ಹಿಮಾಚಲಪ್ರದೇಶ ಸಿಎಂ ಜೈರಾಮ್ ಠಾಕೂರ್, ಕೇಂದ್ರ ಸಚಿವ ಅನುರಾಗ್ ಠಾಕೂರ್, ಬೋರ್ಡರ್ ರೋಡ್ ಆರ್ಗನೈಸೇಶನ್ ಸಂಸ್ಥೆಯ ಡೈರೆಕ್ಟರ್ ಜನರಲ್ ಹರ್ಪಾಲ್ ಸಿಂಗ್ ಉಪಸ್ಥಿತರಿದ್ದರು.
ಲೇಹ್ - ಲಡಾಖ್, ಮನಾಲಿಯ ಜನರಿಗೆ ಈ ಸುರಂಗ ಮಾರ್ಗವು ಜೀವಮಾನದ ಕೊಡುಗೆಯಾಗಲಿದೆ. ಹಿಮಪಾತದಿಂದಾಗಿ ಹಿಂದೆ ಈ ಭಾಗದ ಜನರು ಆರು ತಿಂಗಳ ಕಾಲ ಮನಾಲಿಗೆ ಹೋಗುವುದು ಸಾಧ್ಯವಾಗುತ್ತಿರಲಿಲ್ಲ. ಇನ್ನು ವರ್ಷಪೂರ್ತಿ ಈ ಹೆದ್ದಾರಿಯ ಮೂಲಕ ಮನಾಲಿ - ಲೇಹ್ ಸಂಪರ್ಕ ಮಾಡಬಹುದಾಗಿದೆ. ಗಡಿಯಲ್ಲಿ ರಸ್ತೆ, ಸೇತುವೆ, ಸುರಂಗ ಮಾರ್ಗಗಳ ರಚನೆಯಿಂದ ಈ ಭಾಗದ ಜನರಿಗೆ ಮಾತ್ರ ಉಪಯೋಗ ಆಗುವುದಲ್ಲ. ಇದರ ದೊಡ್ಡ ಲಾಭ ಸೇನಾ ಪಡೆಗೂ ಸಿಗಲಿದೆ ಎಂದು ಮೋದಿ ಹೇಳಿದರು.
9.02 ಕಿಮೀ ಉದ್ದದ ಈ ಸುರಂಗ ಮಾರ್ಗದಿಂದಾಗಿ ಮನಾಲಿ ಮತ್ತು ಲೇಹ್ ನಡುವೆ 46 ಕಿಮೀ ಅಂತರವನ್ನು ಕಡಿಮೆಗೊಳಿಸಿದೆ. ಅಲ್ಲದೆ, ಐದು ಗಂಟೆಗಳ ಸಮಯವನ್ನು ಉಳಿತಾಯ ಮಾಡಿದೆ. ಸಮುದ್ರ ಮಟ್ಟಕ್ಕಿಂತ 3 ಸಾವಿರ ಮೀಟರ್ ಎತ್ತರದಲ್ಲಿ 9 ಕಿಮೀ ಉದ್ದದ ಸುರಂಗ ಮಾರ್ಗ ನಿರ್ಮಿಸಿದ್ದು ಜಗತ್ತಿನಲ್ಲಿ ಇದೇ ಮೊದಲು. ಅತ್ಯಾಧುನಿಕ ಸೌಕರ್ಯಗಳೊಂದಿಗೆ ನಿರ್ಮಿಸಲಾಗಿರುವ ಈ ಸುರಂಗ ಮಾರ್ಗಕ್ಕೆ 3300 ಕೋಟಿ ರೂಪಾಯಿ ವೆಚ್ಚವಾಗಿದೆ. ದಿನದಲ್ಲಿ 3 ಸಾವಿರ ಕಾರು ಮತ್ತು 1500 ಟ್ರಕ್ ಗಳು 80 ಕಿಮೀ ವೇಗದಲ್ಲಿ ಸಾಗಬಲ್ಲ ರೀತಿಯಲ್ಲಿ ರಸ್ತೆಯ ಸಾಮರ್ಥ್ಯವನ್ನು ಮಾರ್ಪಡಿಸಲಾಗಿದೆ. ವಿಶೇಷ ಅಂದ್ರೆ, ಈ ಸುರಂಗ ಮಾರ್ಗ ಅತ್ಯಂತ ಕಡಿದಾದ ಕಣಿವೆಗಳು ಮತ್ತು ನದಿಗಳ ಅಡಿಭಾಗದಿಂದ ದಾಟಿಕೊಂಡು ಸಾಗಲಿದೆ.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm