ಬ್ರೇಕಿಂಗ್ ನ್ಯೂಸ್
06-08-22 02:54 pm HK News Desk ದೇಶ - ವಿದೇಶ
ದೋಹಾ, ಆಗಸ್ಟ್ 6 : ಭಾರತದ 75ನೇ ಸ್ವಾತಂತ್ರ್ಯೋತ್ಸವದ ನೆನಪಿನಲ್ಲಿ ಆಜಾದಿ ಕಾ ಅಮೃತ್ ಮಹೋತ್ಸವ್ ಕಾರ್ಯಕ್ರಮ ದೂರದ ಕತಾರಿನಲ್ಲೂ ಪ್ರತಿಧ್ವನಿಸಿದೆ. ಅಲ್ಲಿನ ಭಾರತೀಯ ಸಾಂಸ್ಕೃತಿಕ ಕೇಂದ್ರ "ಆಜಾದಿ ಕಾ ಅಮೃತ್ ಮಹೋತ್ಸವ" ಆಚರಣೆ ಹಮ್ಮಿಕೊಂಡಿದ್ದು ಇದರ ಅಂಗವಾಗಿ ಕರ್ನಾಟಕ ಸಂಘ ಕತಾರ್ ಆಗಸ್ಟ್ 4 ರಂದು ಶಾಸ್ತ್ರೀಯ ನೃತ್ಯ ಹಾಗೂ ಗಾಯನ ಸಂಗೀತ ಆಯೋಜಿಸಿತ್ತು.
ಕಾರ್ಯಕ್ರಮವು ನೆರೆದಿದ್ದ ಭಾರತೀಯ ಸಮುದಾಯದ ಪ್ರೇಕ್ಷಕರಿಂದ ಮೆಚ್ಚುಗೆ ಪಡೆಯಿತು. ಶ್ರೀಮತಿ ಸಂಜನ್ ಜೀವನ್ ಅವರ ಶಾಸ್ತ್ರೀಯ ನೃತ್ಯದೊಂದಿಗೆ ಆರಂಭ. ಕಾರ್ಯಕ್ರಮದಲ್ಲಿ ಕನ್ನಡ, ಹಿಂದಿ, ತುಳು ಮತ್ತು ಕೊಂಕಣಿ ಭಾಷೆಗಳ ಸುಮಧುರ, ದೇಶಭಕ್ತಿಯ ಸೂಪರ್ ಹಿಟ್ ಹಾಡುಗಳನ್ನು ಕರ್ನಾಟಕ ಮೂಲದ ಪ್ರಸಿದ್ಧ ಗಾಯಕರು ಹಾಡಿದರು. ಅನಿಲ್ ಭಾಸಗಿ, ತುಫೈಲ್, ಲಾವಣ್ಯ ಆಚಾರ್ಯ, ಸಾಗರ್ ಕೋಟ್ಯಾನ್, ಅಕ್ಷಯಾ ಶೆಟ್ಟಿ, ದಿವ್ಯಾ, ರಂಜಿತ್, ಸಂತೋಷ್, ನವ್ಯಾ ಶೆಟ್ಟಿ, ಕರೋಲ್ ಡಿಸೋಜಾ ಮತ್ತು ಅಬ್ದುಲ್ಲಾ ಮೋನು ಅವರ ಹಾಡುಗಳು ಪ್ರೇಕ್ಷಕರ ಮನ ಸೆಳೆದವು.




ಕರ್ನಾಟಕ ಸಂಘದ ಜಂಟಿ ಸಾಂಸ್ಕೃತಿಕ ಕಾರ್ಯದರ್ಶಿ ಮಂಜೋತ್ ಕಾರ್ಯಕ್ರಮ ನಿರೂಪಿಸಿದರು. ಕರ್ನಾಟಕ ಸಂಘದ ಅಧ್ಯಕ್ಷ ಮಹೇಶ್ ಗೌಡ, ಭಾರತೀಯ ಸಾಂಸ್ಕೃತಿಕ ಕೇಂದ್ರದ ಅಧ್ಯಕ್ಷ ಪಿ.ಎನ್.ಬಾಬುರಾಜನ್, ಕೇಂದ್ರದ ಉಪಾಧ್ಯಕ್ಷ ಸುಬ್ರಹ್ಮಣ್ಯ ಹೆಬ್ಬಾಗಿಲು ಉಪಸ್ಥಿತರಿದ್ದರು. ಆಗಸ್ಟ್ 19ರ ವರೆಗೂ ಆಜಾದಿ ಕಾ ಅಮೃತ್ ಮಹೋತ್ಸವ ಕಾರ್ಯಕ್ರಮ ಏರ್ಪಡಿಸಲಾಗಿದೆ.
Azadi Ka Amrit Mahotsav celebrated in Doha Qatar by Kannada Sangha with grandeur on 4th August with loads of Cultural activities.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm