ಬ್ರೇಕಿಂಗ್ ನ್ಯೂಸ್
04-10-20 10:21 am Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್. 04 : ಹತ್ರಾಸ್ ಅತ್ಯಾಚಾರ ಪ್ರಕರಣವನ್ನು ಉತ್ತರ ಪ್ರದೇಶ ಸರಕಾರ ಸಿಬಿಐ ತನಿಖೆಗೆ ವಹಿಸಿದೆ.
ದಲಿತ ಯುವತಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದೇಶಾದ್ಯಂತ ಆಕ್ರೋಶದ ಅಲೆ ಎಬ್ಬಿಸುತ್ತಿರುವಾಗಲೇ ಉತ್ತರ ಪ್ರದೇಶ ಯೋಗಿ ಸರಕಾರ ಇಡೀ ಪ್ರಕರಣದ ತನಿಖೆಯ ಹೊಣೆಯನ್ನು ಸಿಬಿಐಗೆ ವಹಿಸಿ ಕೈತೊಳೆದುಕೊಂಡಿದೆ. ಎರಡು ದಿನಗಳ ಹಿಂದೆ ಎಸ್ಐಟಿ ತಂಡ ನೇಮಕ ಮಾಡಿ, ಏಳು ದಿನಗಳಲ್ಲಿ ವರದಿ ನೀಡುವಂತೆ ಆದೇಶ ಮಾಡಿತ್ತು. ಪ್ರಾಥಮಿಕ ವರದಿ ಆಧರಿಸಿ ಹತ್ರಾಸ್ ಜಿಲ್ಲೆಯ ಎಸ್ಪಿ, ಡಿವೈಎಸ್ಪಿ ಸೇರಿ ನಾಲ್ವರು ಪೊಲೀಸ್ ಅಧಿಕಾರಿಗಳನ್ನು ಸರಕಾರ ಅಮಾನತು ಮಾಡಿತ್ತು. ಪೊಲೀಸರು ನಿರ್ಲಕ್ಷ್ಯ ತೋರಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿತ್ತು.

ಇದೀಗ ಸಂತ್ರಸ್ತ ಯುವತಿಯ ಕುಟುಂಬಸ್ಥರು ಸಿಬಿಐ, ಎಸ್ಐಟಿ ತನಿಖೆಯಲ್ಲಿ ನಮಗೆ ನಂಬಿಕೆ ಇಲ್ಲ. ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಬೇಕೆಂದು ಒತ್ತಾಯ ಮಾಡಿದ ಬೆನ್ನಲ್ಲೇ ಪ್ರಕರಣವನ್ನು ಕೇಂದ್ರೀಯ ತಂಡಕ್ಕೆ ಸರಕಾರ ಒಪ್ಪಿಸಿದೆ. ಈಗ ನಡುವೆ, ಕಾಂಗ್ರೆಸ್ ನಾಯಕರಾದ ರಾಹುಲ್ ಮತ್ತು ಪ್ರಿಯಾಂಕ ಗಾಂಧಿ ಸಂತ್ರಸ್ತೆಯ ಕುಟುಂಬವನ್ನು ಭೇಟಿ ಮಾಡಿದ್ದಾರೆ. ಎರಡು ದಿನಗಳ ಹಿಂದೆ ರಾಹುಲ್ ಗಾಂಧಿ ಭೇಟಿಗೆ ಅವಕಾಶ ನಿರಾಕರಿಸಲಾಗಿತ್ತು. ಮಾಧ್ಯಮಕ್ಕೂ ಹತ್ರಾಸ್ ಜಿಲ್ಲೆಯ ಭೇಟಿಗೆ ನಿರ್ಬಂಧ ವಿಧಿಸಲಾಗಿತ್ತು. ಈ ವಿಚಾರದಲ್ಲಿ ದೇಶದ ಹಲವೆಡೆ ಪ್ರತಿಭಟನೆ, ಆಕ್ರೋಶಕ್ಕೆ ಈಡಾಗುತ್ತಿದ್ದಂತೆಯೇ ಉತ್ತರ ಪ್ರದೇಶ ಸರಕಾರ ಈ ನಿರ್ಬಂಧ ತೆಗೆದುಹಾಕಿದೆ. ಒಟ್ಟು ಪ್ರಕರಣ ಯೋಗಿ ಆದಿತ್ಯನಾಥ್ ಸರಕಾರವನ್ನು ತೀವ್ರ ಮುಖಭಂಗಕ್ಕೆ ಈಡುಮಾಡಿದೆ.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm