ಬ್ರೇಕಿಂಗ್ ನ್ಯೂಸ್
04-10-20 10:21 am Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್. 04 : ಹತ್ರಾಸ್ ಅತ್ಯಾಚಾರ ಪ್ರಕರಣವನ್ನು ಉತ್ತರ ಪ್ರದೇಶ ಸರಕಾರ ಸಿಬಿಐ ತನಿಖೆಗೆ ವಹಿಸಿದೆ.
ದಲಿತ ಯುವತಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದೇಶಾದ್ಯಂತ ಆಕ್ರೋಶದ ಅಲೆ ಎಬ್ಬಿಸುತ್ತಿರುವಾಗಲೇ ಉತ್ತರ ಪ್ರದೇಶ ಯೋಗಿ ಸರಕಾರ ಇಡೀ ಪ್ರಕರಣದ ತನಿಖೆಯ ಹೊಣೆಯನ್ನು ಸಿಬಿಐಗೆ ವಹಿಸಿ ಕೈತೊಳೆದುಕೊಂಡಿದೆ. ಎರಡು ದಿನಗಳ ಹಿಂದೆ ಎಸ್ಐಟಿ ತಂಡ ನೇಮಕ ಮಾಡಿ, ಏಳು ದಿನಗಳಲ್ಲಿ ವರದಿ ನೀಡುವಂತೆ ಆದೇಶ ಮಾಡಿತ್ತು. ಪ್ರಾಥಮಿಕ ವರದಿ ಆಧರಿಸಿ ಹತ್ರಾಸ್ ಜಿಲ್ಲೆಯ ಎಸ್ಪಿ, ಡಿವೈಎಸ್ಪಿ ಸೇರಿ ನಾಲ್ವರು ಪೊಲೀಸ್ ಅಧಿಕಾರಿಗಳನ್ನು ಸರಕಾರ ಅಮಾನತು ಮಾಡಿತ್ತು. ಪೊಲೀಸರು ನಿರ್ಲಕ್ಷ್ಯ ತೋರಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿತ್ತು.

ಇದೀಗ ಸಂತ್ರಸ್ತ ಯುವತಿಯ ಕುಟುಂಬಸ್ಥರು ಸಿಬಿಐ, ಎಸ್ಐಟಿ ತನಿಖೆಯಲ್ಲಿ ನಮಗೆ ನಂಬಿಕೆ ಇಲ್ಲ. ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಬೇಕೆಂದು ಒತ್ತಾಯ ಮಾಡಿದ ಬೆನ್ನಲ್ಲೇ ಪ್ರಕರಣವನ್ನು ಕೇಂದ್ರೀಯ ತಂಡಕ್ಕೆ ಸರಕಾರ ಒಪ್ಪಿಸಿದೆ. ಈಗ ನಡುವೆ, ಕಾಂಗ್ರೆಸ್ ನಾಯಕರಾದ ರಾಹುಲ್ ಮತ್ತು ಪ್ರಿಯಾಂಕ ಗಾಂಧಿ ಸಂತ್ರಸ್ತೆಯ ಕುಟುಂಬವನ್ನು ಭೇಟಿ ಮಾಡಿದ್ದಾರೆ. ಎರಡು ದಿನಗಳ ಹಿಂದೆ ರಾಹುಲ್ ಗಾಂಧಿ ಭೇಟಿಗೆ ಅವಕಾಶ ನಿರಾಕರಿಸಲಾಗಿತ್ತು. ಮಾಧ್ಯಮಕ್ಕೂ ಹತ್ರಾಸ್ ಜಿಲ್ಲೆಯ ಭೇಟಿಗೆ ನಿರ್ಬಂಧ ವಿಧಿಸಲಾಗಿತ್ತು. ಈ ವಿಚಾರದಲ್ಲಿ ದೇಶದ ಹಲವೆಡೆ ಪ್ರತಿಭಟನೆ, ಆಕ್ರೋಶಕ್ಕೆ ಈಡಾಗುತ್ತಿದ್ದಂತೆಯೇ ಉತ್ತರ ಪ್ರದೇಶ ಸರಕಾರ ಈ ನಿರ್ಬಂಧ ತೆಗೆದುಹಾಕಿದೆ. ಒಟ್ಟು ಪ್ರಕರಣ ಯೋಗಿ ಆದಿತ್ಯನಾಥ್ ಸರಕಾರವನ್ನು ತೀವ್ರ ಮುಖಭಂಗಕ್ಕೆ ಈಡುಮಾಡಿದೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm