ಬ್ರೇಕಿಂಗ್ ನ್ಯೂಸ್
04-10-20 10:21 am Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್. 04 : ಹತ್ರಾಸ್ ಅತ್ಯಾಚಾರ ಪ್ರಕರಣವನ್ನು ಉತ್ತರ ಪ್ರದೇಶ ಸರಕಾರ ಸಿಬಿಐ ತನಿಖೆಗೆ ವಹಿಸಿದೆ.
ದಲಿತ ಯುವತಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದೇಶಾದ್ಯಂತ ಆಕ್ರೋಶದ ಅಲೆ ಎಬ್ಬಿಸುತ್ತಿರುವಾಗಲೇ ಉತ್ತರ ಪ್ರದೇಶ ಯೋಗಿ ಸರಕಾರ ಇಡೀ ಪ್ರಕರಣದ ತನಿಖೆಯ ಹೊಣೆಯನ್ನು ಸಿಬಿಐಗೆ ವಹಿಸಿ ಕೈತೊಳೆದುಕೊಂಡಿದೆ. ಎರಡು ದಿನಗಳ ಹಿಂದೆ ಎಸ್ಐಟಿ ತಂಡ ನೇಮಕ ಮಾಡಿ, ಏಳು ದಿನಗಳಲ್ಲಿ ವರದಿ ನೀಡುವಂತೆ ಆದೇಶ ಮಾಡಿತ್ತು. ಪ್ರಾಥಮಿಕ ವರದಿ ಆಧರಿಸಿ ಹತ್ರಾಸ್ ಜಿಲ್ಲೆಯ ಎಸ್ಪಿ, ಡಿವೈಎಸ್ಪಿ ಸೇರಿ ನಾಲ್ವರು ಪೊಲೀಸ್ ಅಧಿಕಾರಿಗಳನ್ನು ಸರಕಾರ ಅಮಾನತು ಮಾಡಿತ್ತು. ಪೊಲೀಸರು ನಿರ್ಲಕ್ಷ್ಯ ತೋರಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿತ್ತು.

ಇದೀಗ ಸಂತ್ರಸ್ತ ಯುವತಿಯ ಕುಟುಂಬಸ್ಥರು ಸಿಬಿಐ, ಎಸ್ಐಟಿ ತನಿಖೆಯಲ್ಲಿ ನಮಗೆ ನಂಬಿಕೆ ಇಲ್ಲ. ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಬೇಕೆಂದು ಒತ್ತಾಯ ಮಾಡಿದ ಬೆನ್ನಲ್ಲೇ ಪ್ರಕರಣವನ್ನು ಕೇಂದ್ರೀಯ ತಂಡಕ್ಕೆ ಸರಕಾರ ಒಪ್ಪಿಸಿದೆ. ಈಗ ನಡುವೆ, ಕಾಂಗ್ರೆಸ್ ನಾಯಕರಾದ ರಾಹುಲ್ ಮತ್ತು ಪ್ರಿಯಾಂಕ ಗಾಂಧಿ ಸಂತ್ರಸ್ತೆಯ ಕುಟುಂಬವನ್ನು ಭೇಟಿ ಮಾಡಿದ್ದಾರೆ. ಎರಡು ದಿನಗಳ ಹಿಂದೆ ರಾಹುಲ್ ಗಾಂಧಿ ಭೇಟಿಗೆ ಅವಕಾಶ ನಿರಾಕರಿಸಲಾಗಿತ್ತು. ಮಾಧ್ಯಮಕ್ಕೂ ಹತ್ರಾಸ್ ಜಿಲ್ಲೆಯ ಭೇಟಿಗೆ ನಿರ್ಬಂಧ ವಿಧಿಸಲಾಗಿತ್ತು. ಈ ವಿಚಾರದಲ್ಲಿ ದೇಶದ ಹಲವೆಡೆ ಪ್ರತಿಭಟನೆ, ಆಕ್ರೋಶಕ್ಕೆ ಈಡಾಗುತ್ತಿದ್ದಂತೆಯೇ ಉತ್ತರ ಪ್ರದೇಶ ಸರಕಾರ ಈ ನಿರ್ಬಂಧ ತೆಗೆದುಹಾಕಿದೆ. ಒಟ್ಟು ಪ್ರಕರಣ ಯೋಗಿ ಆದಿತ್ಯನಾಥ್ ಸರಕಾರವನ್ನು ತೀವ್ರ ಮುಖಭಂಗಕ್ಕೆ ಈಡುಮಾಡಿದೆ.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am