ಬ್ರೇಕಿಂಗ್ ನ್ಯೂಸ್
10-08-22 05:50 pm HK News Desk ದೇಶ - ವಿದೇಶ
ಪಾಟ್ನಾ, ಆಗಸ್ಟ್ 10: ಬಿಹಾರದಲ್ಲಿ ಎಂಟನೇ ಬಾರಿಗೆ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅತ್ತ ಬಿಜೆಪಿ ಸಖ್ಯ ತೊರೆದು ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಿದ ಒಂದೇ ದಿನದಲ್ಲಿ ಇತ್ತ ಆರ್ ಜೆಡಿ, ಕಾಂಗ್ರೆಸ್ ಇನ್ನಿತರ ಏಳು ಪಕ್ಷಗಳ ಬೆಂಬಲದೊಂದಿಗೆ ಮತ್ತೆ ಸರಕಾರ ರಚಿಸಿದ್ದಾರೆ.
ಬುಧವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ರಾಜಭವನದಲ್ಲಿ ನಿತೀಶ್ ಕುಮಾರ್ ದಾಖಲೆಯ ಎಂಟನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದೇ ವೇಳೆ, ಆರ್ ಜೆಡಿ ನಾಯಕ, ಮಾಜಿ ಸಿಎಂ ಲಾಲೂ ಪ್ರಸಾದ್ ಯಾದವ್ ಅವರ ಪುತ್ರ ತೇಜಸ್ವಿ ಯಾದವ್ ಡಿಸಿಎಂ ಆಗಿ ಪ್ರಮಾಣ ಸ್ವೀಕರಿಸಿದ್ದಾರೆ. ಒಂದು ವಾರ ಕಾಲ ಬಿಜೆಪಿ ನಾಯಕರ ಜೊತೆಗಿನ ಮುನಿಸಿನ ಬಳಿಕ ಬಿಜೆಪಿ- ಜೆಡಿಯು ಮೈತ್ರಿ ಸರಕಾರವನ್ನೇ ವಿಸರ್ಜಿಸಿ, ಒಂದೇ ದಿನದಲ್ಲಿ ವಿರೋಧ ಪಕ್ಷಗಳಾಗಿದ್ದ ಆರ್ ಜೆಡಿ, ಕಾಂಗ್ರೆಸ್ ಬೆಂಬಲ ಪಡೆದು ಮತ್ತೆ ಅಧಿಕಾರಕ್ಕೇರಿದ್ದು ವಿಶೇಷ.

![]()

ಆಮೂಲಕ 71 ವರ್ಷದ ನಿತೀಶ್ ಕುಮಾರ್, ಮತ್ತೆ ಹಳೆಯ ಮಹಾಘಟಬಂಧನ್ ಮೈತ್ರಿಕೂಟವನ್ನು ರಚಿಸುವ ಸುಳಿವು ನೀಡಿದ್ದಾರೆ. ಎನ್ ಡಿಎ ಒಕ್ಕೂಟ ತೊರೆದು ಮರಳಿ ಮಹಾ ಒಕ್ಕೂಟ ಸೇರುತ್ತಿದ್ದಂತೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ನಿತೀಶ್ ಕುಮಾರ್ ಅವರೇ ಪ್ರಧಾನಿ ಅಭ್ಯರ್ಥಿಯಾಗಲಿದ್ದಾರೆ ಅನ್ನುವ ರೀತಿ ಬಿಂಬಿತಗೊಂಡಿದ್ದಾರೆ. ಇದೇ ವೇಳೆ, ನಿತೀಶ್ ಕುಮಾರ್ ದ್ರೋಹ ಎಸಗಿದ್ದಾರೆಂದು ಕಿಡಿಕಾರಿರುವ ಬಿಜೆಪಿ ನಾಯಕರು, ರಾಜ್ಯದಾದ್ಯಂತ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದಾರೆ. ಬಿಹಾರದಲ್ಲಿ ಮುಂದಿನ ವರ್ಷ ಚುನಾವಣೆ ನಡೆಯಲಿದ್ದು, ಅದಕ್ಕೆ ತಯಾರಿ ನಡೆಸುತ್ತಿದ್ದಾಗಲೇ ಬಿಜೆಪಿ ವಿರುದ್ಧ ಮುನಿಸಿಕೊಂಡು ಪ್ರತ್ಯೇಕ ಸರಕಾರ ರಚಿಸಿದ್ದು ಮಹತ್ವದ ಬೆಳವಣಿಗೆಯಾಗಿದೆ.
Stripped of power in Bihar, the BJP today staged a massive demonstration condemning the "betrayal" of Chief Minister Nitish Kumar, whose similar volte face five years ago had helped it join the government through the proverbial "back door".
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm