ಬ್ರೇಕಿಂಗ್ ನ್ಯೂಸ್
10-08-22 05:50 pm HK News Desk ದೇಶ - ವಿದೇಶ
ಪಾಟ್ನಾ, ಆಗಸ್ಟ್ 10: ಬಿಹಾರದಲ್ಲಿ ಎಂಟನೇ ಬಾರಿಗೆ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅತ್ತ ಬಿಜೆಪಿ ಸಖ್ಯ ತೊರೆದು ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಿದ ಒಂದೇ ದಿನದಲ್ಲಿ ಇತ್ತ ಆರ್ ಜೆಡಿ, ಕಾಂಗ್ರೆಸ್ ಇನ್ನಿತರ ಏಳು ಪಕ್ಷಗಳ ಬೆಂಬಲದೊಂದಿಗೆ ಮತ್ತೆ ಸರಕಾರ ರಚಿಸಿದ್ದಾರೆ.
ಬುಧವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ರಾಜಭವನದಲ್ಲಿ ನಿತೀಶ್ ಕುಮಾರ್ ದಾಖಲೆಯ ಎಂಟನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದೇ ವೇಳೆ, ಆರ್ ಜೆಡಿ ನಾಯಕ, ಮಾಜಿ ಸಿಎಂ ಲಾಲೂ ಪ್ರಸಾದ್ ಯಾದವ್ ಅವರ ಪುತ್ರ ತೇಜಸ್ವಿ ಯಾದವ್ ಡಿಸಿಎಂ ಆಗಿ ಪ್ರಮಾಣ ಸ್ವೀಕರಿಸಿದ್ದಾರೆ. ಒಂದು ವಾರ ಕಾಲ ಬಿಜೆಪಿ ನಾಯಕರ ಜೊತೆಗಿನ ಮುನಿಸಿನ ಬಳಿಕ ಬಿಜೆಪಿ- ಜೆಡಿಯು ಮೈತ್ರಿ ಸರಕಾರವನ್ನೇ ವಿಸರ್ಜಿಸಿ, ಒಂದೇ ದಿನದಲ್ಲಿ ವಿರೋಧ ಪಕ್ಷಗಳಾಗಿದ್ದ ಆರ್ ಜೆಡಿ, ಕಾಂಗ್ರೆಸ್ ಬೆಂಬಲ ಪಡೆದು ಮತ್ತೆ ಅಧಿಕಾರಕ್ಕೇರಿದ್ದು ವಿಶೇಷ.
ಆಮೂಲಕ 71 ವರ್ಷದ ನಿತೀಶ್ ಕುಮಾರ್, ಮತ್ತೆ ಹಳೆಯ ಮಹಾಘಟಬಂಧನ್ ಮೈತ್ರಿಕೂಟವನ್ನು ರಚಿಸುವ ಸುಳಿವು ನೀಡಿದ್ದಾರೆ. ಎನ್ ಡಿಎ ಒಕ್ಕೂಟ ತೊರೆದು ಮರಳಿ ಮಹಾ ಒಕ್ಕೂಟ ಸೇರುತ್ತಿದ್ದಂತೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ನಿತೀಶ್ ಕುಮಾರ್ ಅವರೇ ಪ್ರಧಾನಿ ಅಭ್ಯರ್ಥಿಯಾಗಲಿದ್ದಾರೆ ಅನ್ನುವ ರೀತಿ ಬಿಂಬಿತಗೊಂಡಿದ್ದಾರೆ. ಇದೇ ವೇಳೆ, ನಿತೀಶ್ ಕುಮಾರ್ ದ್ರೋಹ ಎಸಗಿದ್ದಾರೆಂದು ಕಿಡಿಕಾರಿರುವ ಬಿಜೆಪಿ ನಾಯಕರು, ರಾಜ್ಯದಾದ್ಯಂತ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದಾರೆ. ಬಿಹಾರದಲ್ಲಿ ಮುಂದಿನ ವರ್ಷ ಚುನಾವಣೆ ನಡೆಯಲಿದ್ದು, ಅದಕ್ಕೆ ತಯಾರಿ ನಡೆಸುತ್ತಿದ್ದಾಗಲೇ ಬಿಜೆಪಿ ವಿರುದ್ಧ ಮುನಿಸಿಕೊಂಡು ಪ್ರತ್ಯೇಕ ಸರಕಾರ ರಚಿಸಿದ್ದು ಮಹತ್ವದ ಬೆಳವಣಿಗೆಯಾಗಿದೆ.
Stripped of power in Bihar, the BJP today staged a massive demonstration condemning the "betrayal" of Chief Minister Nitish Kumar, whose similar volte face five years ago had helped it join the government through the proverbial "back door".
21-08-25 12:58 pm
Bangalore Correspondent
Dharmasthala Case: ಧರ್ಮಸ್ಥಳ ಪ್ರಕರಣ ; ಎಫ್ಎಸ್ಎಲ...
20-08-25 10:54 pm
Congress MP Sasikanth Senthil, Janardhana Red...
20-08-25 09:54 pm
Heart Attack, Mangalore, Bangalore: 3 ವರ್ಷದಲ್...
20-08-25 12:33 pm
'Shakti' Scheme, Golden Book of World Records...
20-08-25 12:11 pm
21-08-25 12:54 pm
HK News Desk
ಹೆದ್ದಾರಿಯಲ್ಲಿ ಗುಂಡಿಗಳು ಬಿದ್ದಿದ್ದರೆ, ಟ್ರಾಫಿಕ್...
20-08-25 10:56 pm
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
21-08-25 11:57 am
Mangalore Correspondent
MLA Vedavyas Kamath: ಶ್ರೀಕೃಷ್ಣ ಜನ್ಮಾಷ್ಟಮಿಯ ಸಂ...
20-08-25 10:19 pm
Ananya–Sujatha Bhatt Case, Lawyer Manjunath:...
20-08-25 04:28 pm
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm