ಬ್ರೇಕಿಂಗ್ ನ್ಯೂಸ್
10-08-22 10:45 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 10: ಸುಪ್ರೀಂ ಕೋರ್ಟ್ ಹಿರಿಯ ನ್ಯಾಯಾಧೀಶ ಜಸ್ಟಿಸ್ ಉದಯ್ ಉಮೇಶ್ ಲಲಿತ್ ಅವರು ಭಾರತದ 49ನೇ ಮುಖ್ಯ ನ್ಯಾಯಾಧೀಶರಾಗಲಿದ್ದಾರೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ಎನ್.ವಿ.ರಮಣ ಅವರಿಂದ ತೆರವಾಗುವ ಸ್ಥಾನಕ್ಕೆ ಯುಯು ಲಲಿತ್ ನೇಮಕಗೊಂಡಿದ್ದಾರೆ. ಆಗಸ್ಟ್ 27ರಂದು ಅವರು ಮುಖ್ಯ ನ್ಯಾಯಾಧೀಶರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ನವೆಂಬರ್ 8ರಂದು ಯುಯು ಲಲಿತ್ ನಿವೃತ್ತಿಯಾಗಲಿದ್ದು, ಕೇವಲ 74 ದಿವಸಗಳಷ್ಟೇ ಮುಖ್ಯ ನ್ಯಾಯಾಧೀಶರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಮುಂಬೈನ ಸರಕಾರಿ ಕಾನೂನು ಕಾಲೇಜಿನಲ್ಲಿ ಪದವಿ ಪೂರೈಸಿದ್ದ ಲಲಿತ್ ಅವರು ಕ್ರಿಮಿನಲ್ ಕಾನೂನಿನಲ್ಲಿ ನಿಷ್ಣಾತರಾಗಿದ್ದರು. ಮೊದಲಿಗೆ ಮುಂಬೈ ಹೈಕೋರ್ಟಿನಲ್ಲಿ ವಕೀಲರಾಗಿ ಪ್ರಾಕ್ಟೀಸ್ ಮಾಡಿದ್ದರು. ಅವರ ತಂದೆಯೂ ಸೀನಿಯರ್ ವಕೀಲರಾಗಿದ್ದು, ನ್ಯಾಯಾಧೀಶರಾಗಿಯೂ ಸೇವೆಗೈದಿದ್ದರು.
ಯುಯು ಲಲಿತ್ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ಕೆಲವು ಮಹತ್ವದ ಪ್ರಕರಣಗಳಲ್ಲಿ ತೀರ್ಪು ನೀಡಿದ್ದರು. 2017ರಲ್ಲಿ ತ್ರಿವಳಿ ತಲಾಖ್ ಪ್ರಕರಣದಲ್ಲಿ ತೀರ್ಪು ನೀಡಿದ್ದ ಐವರು ಸದಸ್ಯರ ಸಾಂವಿಧಾನಿಕ ಪೀಠದಲ್ಲಿ ಇವರೂ ಒಬ್ಬರಾಗಿದ್ದರು. ತ್ರಿವಳಿ ತಲಾಖ್ ಎನ್ನುವುದು ಅಸಾಂವಿಧಾನಿಕ, ಕಾನೂನು ಬಾಹಿರ ಎಂದು ಯುಯು ಲಲಿತ್ ತೀರ್ಪು ನೀಡಿದ್ದು ಗಮನ ಸೆಳೆದಿತ್ತು. ಮುಖ್ಯ ನ್ಯಾಯಾಧೀಶರಾಗಿದ್ದ ಜೆಎಸ್ ಖೇಹರ್ ಮತ್ತು ಅಬ್ದುಲ್ ನಜೀರ್ ತ್ರಿವಳಿ ತಲಾಖ್ ಪರವಾಗಿ ತೀರ್ಪು ನೀಡಿದ್ದರೆ, ಕುರಿಯನ್ ಜೋಸೆಫ್, ಆರ್.ಎಫ್ ನಾರಿಮನ್ ಮತ್ತು ಯುಯು ಲಲಿತ್ ತ್ರಿವಳಿ ತಲಾಖ್ ವಿರುದ್ಧ ತೀರ್ಪು ನೀಡಿದ್ದರು. ಸದ್ಯಕ್ಕೆ ಖೇಹರ್, ನಾರಿಮನ್ ಮತ್ತು ಜೋಸೆಫ್ ನ್ಯಾಯಾಧೀಶ ಹುದ್ದೆಯಿಂದ ನಿವೃತ್ತರಾಗಿದ್ದಾರೆ.
President Droupadi Murmu issued a notice on Wednesday for the appointment of Justice UU Lalit as the next Chief Justice of India. He will succeed Chief Justice of India (CJI) NV Ramana, whose tenure ends on August 26.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 08:32 pm
Mangaluru Staffer
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm