ಬ್ರೇಕಿಂಗ್ ನ್ಯೂಸ್
12-08-22 08:51 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 12: ಸ್ವಾತಂತ್ರ್ಯೋತ್ಸವಕ್ಕೆ ಎರಡೇ ದಿನ ಇರುವಾಗ ಉತ್ತರ ಪ್ರದೇಶ ಪೊಲೀಸರು ಜೈಶ್- ಇ-ಮಹಮ್ಮದ್ ಉಗ್ರವಾದಿ ಸಂಘಟನೆಗೆ ಸೇರಿದ ಉಗ್ರನನ್ನು ಪಶ್ಚಿಮ ಉತ್ತರ ಪ್ರದೇಶದ ಸಹರಾಣ್ ಪುರ್ ಎಂಬಲ್ಲಿ ಬಂಧಿಸಿದ್ದಾರೆ. ಇತ್ತೀಚೆಗೆ ಪೈಗಂಬರ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ನಾಯಕಿ ನೂಪುರ್ ಶರ್ಮಾ ಕೊಲ್ಲುವ ಗುರಿ ಇಟ್ಟುಕೊಂಡಿದ್ದ ಅನ್ನುವ ಸ್ಫೋಟಕ ಮಾಹಿತಿಯನ್ನು ಪೊಲೀಸರು ಹೊರಗೆಡವಿದ್ದಾರೆ.
ಬಂಧಿತನನ್ನು ಮೊಹಮ್ಮದ್ ನದೀಂ ಎಂದು ಗುರುತಿಸಲಾಗಿದ್ದು, ಉತ್ತರ ಪ್ರದೇಶದ ಆಂಟಿ ಟೆರರಿಸ್ಟ್ ಸ್ಕ್ವಾಡ್ ಸಿಬಂದಿ ಸೆರೆ ಹಿಡಿದಿದ್ದಾರೆ. ಆತನಿಗೆ ನೂಪುರ್ ಶರ್ಮಾನನ್ನು ಹುಡುಕಿ ಕೊಲ್ಲುವುದನ್ನೇ ಪ್ರಮುಖ ಟಾರ್ಗೆಟ್ ಆಗಿ ನೀಡಲಾಗಿತ್ತು. ಜೈಶೆ ಮಹಮ್ಮದ್ ಮತ್ತು ತೆಹ್ರೀಕ್ ಇ-ತಾಲಿಬಾನ್ ಉಗ್ರವಾದಿ ಸಂಘಟನೆಗಳ ಜೊತೆ ಲಿಂಕ್ ಹೊಂದಿದ್ದ. 2018ರಿಂದ ನಿರಂತರವಾಗಿ ಪಾಕಿಸ್ಥಾನದ ಉಗ್ರರ ಜೊತೆ ಸಂಪರ್ಕದಲ್ಲಿದ್ದ ಅನ್ನುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ.
ಮೊಹಮ್ಮದ್ ನದೀಂ ವಿವಿಧ ಸಾಮಾಜಿಕ ಜಾಲತಾಣಗಳನ್ನು ನಕಲಿ ಐಡಿ ಬಳಸಿ ಕಾರ್ಯಾಚರಿಸುತ್ತಿದ್ದು, ಅದರಲ್ಲಿಯೇ ಪಾಕಿಸ್ಥಾನದ ಉಗ್ರರ ಜೊತೆಗೆ ಸಂಪರ್ಕ ಮಾಡುತ್ತಿದ್ದ. ಪಾಕಿಸ್ಥಾನದ ಕಡೆಯ ಉಗ್ರರು ನೂಪುರ್ ಶರ್ಮಾಳನ್ನು ಕೊಲ್ಲುವ ಟಾರ್ಗೆಟ್ ಕೊಟ್ಟಿದ್ದರು. ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ದೇಶಾದ್ಯಂತ ಪೊಲೀಸರು ಅಲರ್ಟ್ ಇರುವಂತೆ ಸೂಚಿಸಲಾಗಿದೆ. ಸ್ವಾತಂತ್ರ್ಯದ ಸಂದರ್ಭದಲ್ಲಿ ಉಗ್ರರು ವಿಧ್ವಂಸಕ ಕೃತ್ಯಕ್ಕೆ ಯೋಜನೆ ಹಾಕುತ್ತಾರೆಂದು ಪೊಲೀಸರು ಸೇರಿದಂತೆ ವಿವಿಧ ಭದ್ರತಾ ಏಜನ್ಸಿಗಳು ಅಲರ್ಟ್ ಆಗಿರುತ್ತವೆ. ಇದೇ ವೇಳೆ, ಉತ್ತರ ಪ್ರದೇಶದಲ್ಲಿ ಉಗ್ರವಾದಿ ಲಿಂಕ್ ಇರುವ ವ್ಯಕ್ತಿ ಸಿಕ್ಕಿಬಿದ್ದಿದ್ದಾನೆ.
Ahead of Independence Day, police claimed to have busted a major terror plot on Friday as it arrested an alleged operative of Jaish-e-Mohammad and Tehreek-e-Taliban from western Uttar Pradesh’s Saharanpur. The accused was tasked with killing former BJP leader Nupur Sharma, police added.
11-10-25 11:03 pm
Bangalore Correspondent
ಮೂವರು ಮಕ್ಕಳ ಮಮ್ಮಿಗೆ ಇನ್ನೊಬ್ಬನ ಜೊತೆ ಲವ್ವಿ ಡವ್ವ...
11-10-25 10:05 am
ಮುಂದಿನ ದಿನಗಳಲ್ಲಿ ಹಾಸನಾಂಬೆ ಸಾನಿಧ್ಯವೇ ಇರುವುದಿಲ್...
10-10-25 07:06 pm
'ನವೆಂಬರ್ ಕ್ರಾಂತಿ' ಗುಮ್ಮದ ನಡುವೆಯೇ ಸಂಪುಟ ಸರ್ಜರಿ...
10-10-25 12:06 pm
ಟೀಕೆ ಬೆನ್ನಲ್ಲೇ ಬಿಗ್ ಬಾಸ್ ಮನೆ ಓಪನ್ ಮಾಡಿಸಿದ ಡಿಕ...
09-10-25 12:57 pm
11-10-25 12:52 pm
HK News Desk
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
11-10-25 10:24 pm
Mangalore Correspondent
Malayalam actor Jayakrishnan Arrest, Mangalor...
11-10-25 07:18 pm
Karkala Suicide Case, Abishek Death Note: ನನ್...
11-10-25 05:52 pm
Muslim Terrorist, Mangalore, Jayakrishnan Ker...
11-10-25 11:11 am
ಮುಡಾ ಲೇಔಟ್ ; ಕುಂಜತ್ತ್ ಬೈಲಿನಲ್ಲಿ ಅವೈಜ್ಞಾನಿಕ ರೀ...
10-10-25 06:52 pm
10-10-25 09:48 pm
Udupi Correspondent
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm