ಬ್ರೇಕಿಂಗ್ ನ್ಯೂಸ್
12-08-22 08:51 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 12: ಸ್ವಾತಂತ್ರ್ಯೋತ್ಸವಕ್ಕೆ ಎರಡೇ ದಿನ ಇರುವಾಗ ಉತ್ತರ ಪ್ರದೇಶ ಪೊಲೀಸರು ಜೈಶ್- ಇ-ಮಹಮ್ಮದ್ ಉಗ್ರವಾದಿ ಸಂಘಟನೆಗೆ ಸೇರಿದ ಉಗ್ರನನ್ನು ಪಶ್ಚಿಮ ಉತ್ತರ ಪ್ರದೇಶದ ಸಹರಾಣ್ ಪುರ್ ಎಂಬಲ್ಲಿ ಬಂಧಿಸಿದ್ದಾರೆ. ಇತ್ತೀಚೆಗೆ ಪೈಗಂಬರ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ನಾಯಕಿ ನೂಪುರ್ ಶರ್ಮಾ ಕೊಲ್ಲುವ ಗುರಿ ಇಟ್ಟುಕೊಂಡಿದ್ದ ಅನ್ನುವ ಸ್ಫೋಟಕ ಮಾಹಿತಿಯನ್ನು ಪೊಲೀಸರು ಹೊರಗೆಡವಿದ್ದಾರೆ.
ಬಂಧಿತನನ್ನು ಮೊಹಮ್ಮದ್ ನದೀಂ ಎಂದು ಗುರುತಿಸಲಾಗಿದ್ದು, ಉತ್ತರ ಪ್ರದೇಶದ ಆಂಟಿ ಟೆರರಿಸ್ಟ್ ಸ್ಕ್ವಾಡ್ ಸಿಬಂದಿ ಸೆರೆ ಹಿಡಿದಿದ್ದಾರೆ. ಆತನಿಗೆ ನೂಪುರ್ ಶರ್ಮಾನನ್ನು ಹುಡುಕಿ ಕೊಲ್ಲುವುದನ್ನೇ ಪ್ರಮುಖ ಟಾರ್ಗೆಟ್ ಆಗಿ ನೀಡಲಾಗಿತ್ತು. ಜೈಶೆ ಮಹಮ್ಮದ್ ಮತ್ತು ತೆಹ್ರೀಕ್ ಇ-ತಾಲಿಬಾನ್ ಉಗ್ರವಾದಿ ಸಂಘಟನೆಗಳ ಜೊತೆ ಲಿಂಕ್ ಹೊಂದಿದ್ದ. 2018ರಿಂದ ನಿರಂತರವಾಗಿ ಪಾಕಿಸ್ಥಾನದ ಉಗ್ರರ ಜೊತೆ ಸಂಪರ್ಕದಲ್ಲಿದ್ದ ಅನ್ನುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ.

ಮೊಹಮ್ಮದ್ ನದೀಂ ವಿವಿಧ ಸಾಮಾಜಿಕ ಜಾಲತಾಣಗಳನ್ನು ನಕಲಿ ಐಡಿ ಬಳಸಿ ಕಾರ್ಯಾಚರಿಸುತ್ತಿದ್ದು, ಅದರಲ್ಲಿಯೇ ಪಾಕಿಸ್ಥಾನದ ಉಗ್ರರ ಜೊತೆಗೆ ಸಂಪರ್ಕ ಮಾಡುತ್ತಿದ್ದ. ಪಾಕಿಸ್ಥಾನದ ಕಡೆಯ ಉಗ್ರರು ನೂಪುರ್ ಶರ್ಮಾಳನ್ನು ಕೊಲ್ಲುವ ಟಾರ್ಗೆಟ್ ಕೊಟ್ಟಿದ್ದರು. ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ದೇಶಾದ್ಯಂತ ಪೊಲೀಸರು ಅಲರ್ಟ್ ಇರುವಂತೆ ಸೂಚಿಸಲಾಗಿದೆ. ಸ್ವಾತಂತ್ರ್ಯದ ಸಂದರ್ಭದಲ್ಲಿ ಉಗ್ರರು ವಿಧ್ವಂಸಕ ಕೃತ್ಯಕ್ಕೆ ಯೋಜನೆ ಹಾಕುತ್ತಾರೆಂದು ಪೊಲೀಸರು ಸೇರಿದಂತೆ ವಿವಿಧ ಭದ್ರತಾ ಏಜನ್ಸಿಗಳು ಅಲರ್ಟ್ ಆಗಿರುತ್ತವೆ. ಇದೇ ವೇಳೆ, ಉತ್ತರ ಪ್ರದೇಶದಲ್ಲಿ ಉಗ್ರವಾದಿ ಲಿಂಕ್ ಇರುವ ವ್ಯಕ್ತಿ ಸಿಕ್ಕಿಬಿದ್ದಿದ್ದಾನೆ.
Ahead of Independence Day, police claimed to have busted a major terror plot on Friday as it arrested an alleged operative of Jaish-e-Mohammad and Tehreek-e-Taliban from western Uttar Pradesh’s Saharanpur. The accused was tasked with killing former BJP leader Nupur Sharma, police added.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 08:32 pm
Mangaluru Staffer
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm