ಬ್ರೇಕಿಂಗ್ ನ್ಯೂಸ್
13-08-22 11:29 am HK News Desk ದೇಶ - ವಿದೇಶ
ನ್ಯೂಯಾರ್ಕ್, ಆಗಸ್ಟ್ 13: ಭಾರತೀಯ ಮೂಲದ ಲೇಖಕ, ಕಳೆದ 20 ವರ್ಷಗಳಿಂದ ಅಮೆರಿಕದಲ್ಲಿ ನೆಲೆಸಿದ್ದ ಸಲ್ಮಾನ್ ರಶ್ದಿ ಅವರ ಮೇಲೆ ವ್ಯಕ್ತಿಯೊಬ್ಬ ದಾಳಿ ನಡೆಸಿದ್ದು, ಚೂರಿಯಿಂದ ಇರಿದಿರುವ ಘಟನೆ ನ್ಯೂಯಾರ್ಕಿನಲ್ಲಿ ನಡೆದಿದೆ.
ಸಲ್ಮಾನ್ ರಶ್ದಿ ಉಪನ್ಯಾಸ ನೀಡುವುದಕ್ಕಾಗಿ ಆಗಮಿಸಿದ್ದರು. ವೇದಿಕೆಯಲ್ಲಿದ್ದಾಗಲೇ ವ್ಯಕ್ತಿಯೊಬ್ಬ ದಾಳಿ ನಡೆಸಿದ್ದು, ಕುತ್ತಿಗೆಯ ಮೇಲೆ ಇರಿದಿದ್ದಾನೆ. ಕೂಡಲೇ 75 ವರ್ಷದ ಸಲ್ಮಾನ್ ರಶ್ದಿ ನೆಲಕ್ಕೆ ಬಿದ್ದಿದ್ದಾರೆ. ನ್ಯೂಯಾರ್ಕ್ ನಗರದಿಂದ ನೂರು ಕಿಮೀ ದೂರದ ಗ್ರಾಮಾಂತರ ಪ್ರದೇಶದಲ್ಲಿ ಘಟನೆ ನಡೆದಿದೆ. ಚೌಟಾಕಾ ಇನ್ಸ್ ಟ್ಯೂಶನ್ನಲ್ಲಿ ಸರಣಿ ಉಪನ್ಯಾಸ ಪ್ರಯುಕ್ತ ರಶ್ದೀ ಅವರನ್ನು ಆಹ್ವಾನಿಸಲಾಗಿತ್ತು. ದಾಳಿ ಎಸಗಿದ ವ್ಯಕ್ತಿಯನ್ನು ನ್ಯೂಯಾರ್ಕ್ ಪೊಲೀಸರು ಬಂಧಿಸಿದ್ದಾರೆ.
1980ರ ದಶಕದಲ್ಲಿ ಇಸ್ಲಾಮ್ ಬಗ್ಗೆ ಬರೆದಿದ್ದ ಪುಸ್ತಕ ವ್ಯಾಪಕ ವಿರೋಧಕ್ಕೆ ಕಾರಣವಾಗಿತ್ತು. ಇರಾನ್ ದೇಶದ ಕೆಲವು ನಾಯಕರು ಸಲ್ಮಾನ್ ರಶ್ದಿ ಬಗ್ಗೆ ಫತ್ವಾ ಹೊರಡಿಸಿದ್ದರು. ರಶ್ದೀ ತಲೆ ತೆಗೆದವರಿಗೆ ಬಹುಮಾನವನ್ನೂ ಘೋಷಿಸಲಾಗಿತ್ತು. ಆಬಳಿಕ ಬ್ರಿಟನ್ ತೆರಳಿ ಅಲ್ಲಿಯೇ ಉಳಿದುಕೊಂಡಿದ್ದ ಸಲ್ಮಾನ್ ರಶ್ದೀ ಅವರು ಅಲ್ಲಿಂದಲೇ ಹಲವು ಪುಸ್ತಕಗಳನ್ನು ಬರೆದು ಪ್ರಕಟಿಸಿದ್ದಾರೆ. 1981ರಲ್ಲಿ ಪ್ರಕಟವಾದ ಮಿಡ್ ನೈಟ್ ಚಿಲ್ಡ್ರನ್ ಎನ್ನುವ ಪುಸ್ತಕಕ್ಕೆ ಬೂಕರ್ ಪ್ರಶಸ್ತಿ ಲಭಿಸಿತ್ತು. ವಿವಾದ ಕೇಳಿಬಂದ ಬಳಿಕ ಸಲ್ಮಾನ್ ರಶ್ದಿ ಹೊರಗೆ ಕಾಣಿಸಿಕೊಳ್ಳುವುದನ್ನು ಕಡಿಮೆ ಮಾಡಿದ್ದರು.
ಈ ಬಗ್ಗೆ ಪ್ರತಿಕ್ರಿಯಿಸಿರುವ ಬಾಂಗ್ಲಾ ದೇಶ ಮೂಲದ ಲೇಖಕಿ ತಸ್ಲೀಮಾ ನಸ್ರೀನ್, ಇಸ್ಲಾಂ ಬಗ್ಗೆ ಟೀಕಿಸುವ ಯಾವುದೇ ವ್ಯಕ್ತಿ ದಾಳಿಗೆ ಒಳಗಾಗುತ್ತಾನೆ. ಇದನ್ನು ಕೇಳಿ ಶಾಕ್ ಆಗಿದ್ದೇನೆ. ಇಸ್ಲಾಂ ಬಗ್ಗೆ ಟೀಕಿಸುವ ಯಾರು ಕೂಡ ದಾಳಿಗೆ ಒಳಗಾಗಬಹುದು ಎಂದು ಹೇಳಿದ್ದಾರೆ.
Author Salman Rushdie was stabbed in the neck at an event in New York, US, on Friday. Details were scarce about his condition and the attacker, who has been detained. The 75-year-old author's writings have in the past led to threats.
21-08-25 12:58 pm
Bangalore Correspondent
Dharmasthala Case: ಧರ್ಮಸ್ಥಳ ಪ್ರಕರಣ ; ಎಫ್ಎಸ್ಎಲ...
20-08-25 10:54 pm
Congress MP Sasikanth Senthil, Janardhana Red...
20-08-25 09:54 pm
Heart Attack, Mangalore, Bangalore: 3 ವರ್ಷದಲ್...
20-08-25 12:33 pm
'Shakti' Scheme, Golden Book of World Records...
20-08-25 12:11 pm
21-08-25 12:54 pm
HK News Desk
ಹೆದ್ದಾರಿಯಲ್ಲಿ ಗುಂಡಿಗಳು ಬಿದ್ದಿದ್ದರೆ, ಟ್ರಾಫಿಕ್...
20-08-25 10:56 pm
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
21-08-25 11:57 am
Mangalore Correspondent
MLA Vedavyas Kamath: ಶ್ರೀಕೃಷ್ಣ ಜನ್ಮಾಷ್ಟಮಿಯ ಸಂ...
20-08-25 10:19 pm
Ananya–Sujatha Bhatt Case, Lawyer Manjunath:...
20-08-25 04:28 pm
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm