ಬ್ರೇಕಿಂಗ್ ನ್ಯೂಸ್
14-08-22 07:29 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 14: ದೇಶ 75ನೇ ಸ್ವಾತಂತ್ರ್ಯೋತ್ಸವದ ಸಡಗರದಲ್ಲಿರುವಾಗಲೇ 38 ವರ್ಷಗಳ ಹಿಂದೆ ಸಿಯಾಚಿನ್ ಯುದ್ಧ ಭೂಮಿಯಲ್ಲಿ ಮಡಿದಿದ್ದ ಲ್ಯಾನ್ಸ್ ನಾಯಕ್ ಚಂದ್ರಶೇಖರ್ ಅವರ ಅಸ್ಥಿಗಳು ಪತ್ತೆಯಾಗಿವೆ. ಸಿಯಾಚಿನ್ ಗ್ಲೇಸಿಯರ್ ನಡುವೆ ನಾಪತ್ತೆಯಾಗಿದ್ದ ಉತ್ತರಾಖಂಡ ಮೂಲದ ಯೋಧನಿಗಾಗಿ ಪತ್ನಿ ಮತ್ತು ಇಬ್ಬರು ಹೆಣ್ಮಕ್ಕಳ ಸುದೀರ್ಘ ಕಾಯುವಿಕೆಗೆ ಕಡೆಗೂ ಸಾಕ್ಷ್ಯ ಸಿಕ್ಕಿದೆ.
1984ರಲ್ಲಿ ಆಪರೇಶನ್ ಮೇಘದೂತ್ ಅನ್ನುವ ಕಾರ್ಯಾಚರಣೆ ನಡೆದಿತ್ತು. ಪಾಕಿಸ್ಥಾನಿ ಸೇನೆಯು ಕಬಳಿಸಿದ್ದ 5965 ಹೆಸರಿನ ಗಿರಿ ಶಿಖರವನ್ನು ಮರಳಿ ವಾಪಸ್ ಪಡೆಯುವುದು ಕಾರ್ಯಾಚರಣೆ ಉದ್ದೇಶವಾಗಿತ್ತು. ಈ ವೇಳೆ, 18 ಮಂದಿ ಇದ್ದ ಸೇನಾ ಶಿಬಿರ ಹಿಮದ ಕುಸಿತದಿಂದಾಗಿ ಹುದುಗಿ ಹೋಗಿತ್ತು. 18 ಮಂದಿಯಲ್ಲಿ 14 ಮಂದಿಯ ಶವ ಪತ್ತೆಯಾಗಿದ್ದರೆ, ಐದು ಮಂದಿ ಕಣ್ಮರೆಯಾಗಿದ್ದರು. ಲ್ಯಾನ್ಸ್ ನಾಯ್ಕ್ ಚಂದ್ರಶೇಖರ್ ಕೂಡ ಕಣ್ಮರೆಯಾದವರಲ್ಲಿ ಒಬ್ಬರು. 1984ರ ಮೇ 29ರಂದು ಘಟನೆ ನಡೆದಿತ್ತು. ಆನಂತರ, ಆಪರೇಶನ್ನಲ್ಲಿ ಸಿಯಾಚಿನ್ ಗ್ಲೇಸಿಯರನ್ನು ಭಾರತೀಯ ಸೇನೆ ಮರಳಿ ವಶಕ್ಕೆ ಪಡೆದಿತ್ತಾದರೂ, ಐವರು ಯೋಧರ ಕುರುಹು ಸಿಕ್ಕಿರಲಿಲ್ಲ.
16 ಸಾವಿರ ಅಡಿ ಎತ್ತರದಲ್ಲಿ ಹಿಮ ಶಿಖರಗಳ ನಡುವೆ ಯೋಧ ಕಣ್ಮರೆಯಾಗಿದ್ದರಿಂದ ಹುಡುಕಾಟವೂ ಸಾಧ್ಯವಾಗಿರಲಿಲ್ಲ. ಆಗ ಚಂದ್ರಶೇಖರ್ ಅವರ ನಾಲ್ಕು ವರ್ಷ ಹಾಗೂ ಎಂಟು ವರ್ಷದವರಿದ್ದ ಇಬ್ಬರು ಹೆಣ್ಮಕ್ಕಳು ಈಗ ದೊಡ್ಡವರಾಗಿದ್ದಾರೆ. ಯೋಧನ ಪತ್ನಿಗೆ 65 ವರ್ಷವಾಗಿದ್ದು, 38 ವರ್ಷಗಳ ಹಿಂದಿನ ಘಟನೆಯನ್ನು ನೆನಪಿಟ್ಟುಕೊಂಡಿದ್ದಾರೆ. ಆದರೆ ಮಕ್ಕಳಿಗೆ ಆಗಿಹೋದ ದುರಂತದ ನೆನಪು ಇದ್ದಿರಲಿಕ್ಕಿಲ್ಲ. ಆಗಸ್ಟ್ 13ರಂದು ಸಿಯಾಚಿನ್ ಗ್ಲೇಸಿಯರ್ ನಡುವೆ ಹಳೆಯ ಬಂಕರ್ ಅಡಿಯಲ್ಲಿ ಅಸ್ಥಿಪಂಜರ ಪತ್ತೆಯಾಗಿದೆ. ಇದರ ಜೊತೆ ಯೋಧರು ಧರಿಸುವ ಡಿಸ್ಕ್ ಕೂಡ ಪತ್ತೆಯಾಗಿದ್ದು, ಅದರ ನಂಬರ್ ಆಧಾರದಲ್ಲಿ ಅದು ಲ್ಯಾನ್ಸ್ ನಾಯ್ಕ್ ಚಂದ್ರಶೇಖರ್ ಅವರದ್ದೆಂದು ಸೇನೆ ಪತ್ತೆ ಮಾಡಿದೆ.
As the nation celebrates 75 years of Independence and remembers the sacrifices of those who were part of the freedom struggle, a family in Haldwani, Uttarakhand will have quiet closure after a long wait of 38 years.The mortal remains of Lance Naik Chandra Shekhar, who was part of the 1984 Operation Meghdoot in Sachen, were found in an old bunker at the glacier on August 13.
11-10-25 11:03 pm
Bangalore Correspondent
ಮೂವರು ಮಕ್ಕಳ ಮಮ್ಮಿಗೆ ಇನ್ನೊಬ್ಬನ ಜೊತೆ ಲವ್ವಿ ಡವ್ವ...
11-10-25 10:05 am
ಮುಂದಿನ ದಿನಗಳಲ್ಲಿ ಹಾಸನಾಂಬೆ ಸಾನಿಧ್ಯವೇ ಇರುವುದಿಲ್...
10-10-25 07:06 pm
'ನವೆಂಬರ್ ಕ್ರಾಂತಿ' ಗುಮ್ಮದ ನಡುವೆಯೇ ಸಂಪುಟ ಸರ್ಜರಿ...
10-10-25 12:06 pm
ಟೀಕೆ ಬೆನ್ನಲ್ಲೇ ಬಿಗ್ ಬಾಸ್ ಮನೆ ಓಪನ್ ಮಾಡಿಸಿದ ಡಿಕ...
09-10-25 12:57 pm
11-10-25 12:52 pm
HK News Desk
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
11-10-25 10:24 pm
Mangalore Correspondent
Malayalam actor Jayakrishnan Arrest, Mangalor...
11-10-25 07:18 pm
Karkala Suicide Case, Abishek Death Note: ನನ್...
11-10-25 05:52 pm
Muslim Terrorist, Mangalore, Jayakrishnan Ker...
11-10-25 11:11 am
ಮುಡಾ ಲೇಔಟ್ ; ಕುಂಜತ್ತ್ ಬೈಲಿನಲ್ಲಿ ಅವೈಜ್ಞಾನಿಕ ರೀ...
10-10-25 06:52 pm
10-10-25 09:48 pm
Udupi Correspondent
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm