ಬ್ರೇಕಿಂಗ್ ನ್ಯೂಸ್
15-08-22 09:43 pm HK News Desk ದೇಶ - ವಿದೇಶ
ರಾಯಪುರ್, ಆ 15: ಛತ್ತೀಸ್ಗಢದಲ್ಲಿ ಭಾರಿ ಮಳೆ ಅವಾಂತರ ಸೃಷ್ಟಿಸಿದೆ. ಇದರಿಂದಾಗಿ ಮುಂಗೇಲಿ, ಧಮ್ತಾರಿ, ಬಲಾದ್ ಬಜಾರ್, ಸುರ್ಗುಜಾ ಮತ್ತು ಕೊರ್ಬಾ ಸೇರಿದಂತೆ ಬಿಲಾಸ್ಪುರದಲ್ಲಿ ಪರಿಸ್ಥಿತಿ ಹದಗೆಟ್ಟಿದೆ. ಸಾವು ನೋವುಗಳು ದಾಖಲಾಗಿವೆ.
ಕಂಕೇರ್ನಲ್ಲಿ ಭಾರಿ ಮಳೆಗೆ ನಿನ್ನೆ ರಾತ್ರಿ ಮನೆಯ ಗೋಡೆ ಕುಸಿದು ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.
ಬಿಲಾಸಪುರದಲ್ಲಿ 4 ದಿನಗಳಿಂದ ನಿರಂತರವಾಗಿ ಮಳೆ ಬೀಳುತ್ತಿದೆ. ಇದರಿಂದಾಗಿ ತಗ್ಗು ಪ್ರದೇಶದ ಬಡಾವಣೆಗಳು ಜಲಾವೃತಗೊಂಡಿವೆ. ಮುಂಗೇಲಿಯಲ್ಲಿ ನೂರಾರು ಜನರು ನೀರಿನ ಮಧ್ಯೆ ಸಿಲುಕಿಕೊಂಡಿದ್ದಾರೆ.

ಭಾನುವಾರ ಧಮ್ತಾರಿಯಲ್ಲಿ ಸೊಂಧೂರು ಅಣೆಕಟ್ಟಿನ ಎಲ್ಲಾ ಗೇಟ್ಗಳನ್ನು ತೆರೆಯಲಾಗಿದೆ. ಸೊಂಡೂರು ನದಿಯಿಂದ 2,400 ಕ್ಯೂಸೆಕ್ ನೀರು ಹೊರ ಬಿಡಲಾಗುತ್ತಿದೆ. ಈ ಹಿನ್ನೆಲೆ ಇಲ್ಲಿನ ಗ್ರಾಮಗಳಿಗೆ ಎಚ್ಚರಿಕೆ ನೀಡಲಾಗಿದೆ. ಬಲಾದ್ ಬಜಾರ್, ಸುರ್ಗುಜಾ ಸೇರಿದಂತೆ ಇತರೆ ಜಿಲ್ಲೆಗಳಲ್ಲೂ ಇದೇ ಪರಿಸ್ಥಿತಿ ಇದೆ.
ನದಿ, ಹಳ್ಳಗಳ ನೀರು ಈಗ ತಗ್ಗು ಪ್ರದೇದೇಶಗಳಲ್ಲಿರುವ ಬಡಾವಣೆ, ವಾರ್ಡ್ಗಳಿಗೆ ನುಗ್ಗುತ್ತಿದೆ. ಮನೆಗಳು, ಶಾಲೆಗಳು ಮತ್ತು ಅಂಗಡಿಗಳು ನೀರಿನಲ್ಲಿ ಮುಳುಗಿವೆ. ನಗರ ಪ್ರದೇಶಗಳಲ್ಲಿ ಸಿರಗಿತ್ತಿ, ತಿಫ್ರಾ, ಸಕ್ರಿ, ಘೂರು, ಅಮೇರಿ, ಮನ್ನದೋಳ್, ದೀಪಾರಪರ, ಕುಂದರಪರ, ದೇವರಪಾರ, ಯದುನಂದನನಗರ, ಉಸಲಾಪುರ ಮತ್ತು ಸರ್ಕಂದ ಹೆಚ್ಚು ಹಾನಿಗೊಳಗಾಗಿವೆ.

ಗ್ರಾಮೀಣ ಭಾಗಗಳಾದ ಪಚಪೇಡಿ, ಜೊಂಧಾರ, ಮಸ್ತೂರಿ ಭಾಗದಲ್ಲೂ ಪರಿಸ್ಥಿತಿ ಬಿಗಡಾಯಿಸಿದೆ. ಮಳೆ ನೀರು ಜನರ ಮನೆಗಳಿಗೆ ನುಗ್ಗಿದೆ. SDRF ತಂಡವು ಎಲ್ಲಾ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯ ನಡೆಸುತ್ತಿದೆ.
ಮುಂಗೇಲಿ ಜಿಲ್ಲೆಯಲ್ಲಿ ಪ್ರವಾಹ ಉಂಟಾಗಿದ್ದು, ಸರಗಾಂವ ನಗರ ಪಂಚಾಯಿತಿಯಲ್ಲಿ 500ಕ್ಕೂ ಹೆಚ್ಚು ಮಂದಿ ನೀರಿನಲ್ಲಿ ಸಿಲುಕಿಕೊಂಡಿದ್ದಾರೆ. ಭಾರೀ ಮಳೆಯ ನಡುವೆಯೂ ಮುಂಗೇಲಿ ಜಿಲ್ಲಾಧಿಕಾರಿ ರಾಹುಲ್ ದೇವ್ ಮತ್ತು ಎಸ್ಪಿ ಚಂದ್ರಮೋಹನ್ ಸಿಂಗ್ SDRF ತಂಡದೊಂದಿಗೆ ಮೋಟರ್ ಬೋಟ್ ಮೂಲಕ ಜನರಿಗೆ ಸಹಾಯ ಮಾಡುತ್ತಿದ್ದಾರೆ.
Five members of a family on Monday died after a wall of their house collapsed last night in Pakhanjore area of Kanker due to heavy rainfall.Parimal Malik, his wife and their three children died in the incident.The incident took place in the morning in Irpanar village in Pakhanjore area when the victims were sleeping in their mud house, the officials said.The area has been cut off from the main road due to an overflowing drain.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm